AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್​ಪತಿಯ ಈ ವಾರದ ಸೆಲೆಬ್ರಿಟಿ ಅತಿಥಿಗಳು ಯಾರು?; ಇಬ್ಬರಿಗೂ ಇದೆ ಕನ್ನಡದ ನಂಟು

Pankaj Tripathi | Prathik Gandhi: ಕೌನ್ ಬನೇಗಾ ಕರೋಡ್​ಪತಿಯ ಪ್ರತಿ ಶುಕ್ರವಾರದ ಸಂಚಿಕೆಯಲ್ಲಿ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡ ಸೆಲೆಬ್ರಿಟಿಗಳು ಭಾಗವಹಿಸುತ್ತಾರೆ. ಈ ವಾರ ಭಾಗವಹಿಸುವ ಸೆಲೆಬ್ರಿಟಿಗಳಲ್ಲಿ ಒಬ್ಬರಿಗೆ ಪ್ರತ್ಯಕ್ಷವಾಗಿ ಹಾಗೂ ಮತ್ತೋರ್ವರಿಗೆ ಪರೋಕ್ಷವಾಗಿ ಕನ್ನಡದ ನಂಟಿದೆ ಎನ್ನುವುದು ವಿಶೇಷ.

ಕೌನ್ ಬನೇಗಾ ಕರೋಡ್​ಪತಿಯ ಈ ವಾರದ ಸೆಲೆಬ್ರಿಟಿ ಅತಿಥಿಗಳು ಯಾರು?; ಇಬ್ಬರಿಗೂ ಇದೆ ಕನ್ನಡದ ನಂಟು
ಕೆಬಿಸಿಯಲ್ಲಿ ಅಮಿತಾಭ್ ಬಚ್ಚನ್
TV9 Web
| Edited By: |

Updated on: Sep 29, 2021 | 5:57 PM

Share

ಕೆಬಿಸಿ 13: ರಿಯಾಲಿಟಿ ಶೋಗಳಲ್ಲಿ ತನ್ನದೇ ಆದ ಶೈಲಿಯಿಂದ ದೇಶದಾದ್ಯಂತ ಪ್ರೇಕ್ಷಕರನ್ನು ಹೊಂದಿರುವ ಕೌನ್ ಬನೇಗಾ ಕರೋಡ್​ಪತಿಯ 13ನೇ ಸೀಸನ್ ಪ್ರಸಾರವಾಗುತ್ತಿದೆ. ಅಮಿತಾಭ್ ಬಚ್ಚನ್ ನಡೆಸಿಕೊಡುವ ಈ ಕಾರ್ಯಕ್ರಮದಲ್ಲಿ ಪ್ರತಿ ಶುಕ್ರವಾರ ವಿವಿಧ ರಂಗಗಳಲ್ಲಿ ಹೆಸರು ಮಾಡಿರುವ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸುತ್ತಾರೆ. ಅದರಲ್ಲಿ ಗೆದ್ದ ಹಣವನ್ನು ವಿವಿಧ ಚಾರಿಟಿಯ ಕಾರ್ಯಗಳಿಗೆ ಮೀಸಲಿಡುವುದು ಕಾರ್ಯಕ್ರಮದ ವಿಶೇಷ. ಈಗಾಗಲೇ ಈ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಭಾಗವಹಿಸಿ ಎಲ್ಲರ ಮನಗೆದ್ದಿದ್ದಾರೆ. ಈ ವಾರ ಭಾಗವಹಿಸುತ್ತಿರುವ ಸೆಲೆಬ್ರಿಟಿಗಳಲ್ಲಿ ಒಬ್ಬರಿಗೆ ಪ್ರತ್ಯಕ್ಷವಾಗಿ ಮತ್ತೋರ್ವರಿಗೆ ಪರೋಕ್ಷವಾಗಿ ಕನ್ನಡದ ನಂಟಿದೆ ಎನ್ನುವುದು ವಿಶೇಷ. ಏನಿದು ಅಚ್ಚರಿ! ಅಂತೀರಾ? ಮುಂದೆ ಓದಿ.

ಕೆಬಿಸಿ 13ರ ಪ್ರತಿ ಶುಕ್ರವಾರ ‘ಶಾನ್ದಾರ್ ಶುಕ್ರವಾರ್’ ಎಂಬ ಸೆಲೆಬ್ರಿಟಿ ಸಂಚಿಕೆ ಪ್ರಸಾರವಾಗುತ್ತದೆ. ಇದರಲ್ಲಿ ಮೊದಲ ವಾರ ಕ್ರಿಕೆಟ್ ದಿಗ್ಗಜರಾದ ಸೌರವ್ ಗಂಗೂಲಿ ಹಾಗೂ ವೀರೇಂದ್ರ ಸೆಹ್ವಾಗ್ ಭಾಗವಹಿಸಿದ್ದರು. ಈ ತಾರೆಯರು ಬರೋಬ್ಬರಿ ₹ 25 ಲಕ್ಷ ಹಣವನ್ನು ಗೆದ್ದಿದ್ದರು. ಎರಡನೇ ವಾರದಲ್ಲಿ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಹಾಗೂ ನಿರ್ದೇಶನಕಿ ಫರಾ ಖಾನ್ ಭಾಗವಹಿಸಿದ್ದರು. ಮೂರನೇ ವಾರದಲ್ಲಿ ಟೊಕಿಯೊ ಒಲಂಪಿಕ್ಸ್ ಪದಕ ವಿಜೇತ ತಾರೆಯರಾದ ನೀರಜ್ ಚೋಪ್ರಾ ಹಾಗೂ ಪಿ.ಶ್ರೀಜೇಶ್ ಭಾಗವಹಿಸಿದ್ದರು. ಕಳೆದ ವಾರದ ಸಂಚಿಕೆಯಲ್ಲಿ ಕನ್ನಡದಲ್ಲೂ ನಟಿಸಿದ್ದ ಸುನೀಲ್ ಶೆಟ್ಟಿ ಹಾಗೂ ಜಾಕಿ ಶ್ರಾಫ್ ಪಾಲ್ಗೊಂಡು ಭರ್ಜರಿ ಆಟವಾಡಿದ್ದರು. ಆದ್ದರಿಂದಲೇ ವೀಕ್ಷಕರಿಗೆ ಈ ವಾರ ಯಾವ ತಾರೆ ಭಾಗವಹಿಸುತ್ತಾರೆ ಎಂಬ ಕುತೂಹಲ ಇತ್ತು.

ಈ ವಾರ ಭಾರತೀಯ ವೆಬ್ ಸೀರೀಸ್ ಹಾಗೂ ಚಿತ್ರಗಳಲ್ಲಿ ವಿಶಿಷ್ಟ ಅಭಿನಯದಿಂದ ಹೆಸರು ಮಾಡಿರುವ ಇಬ್ಬರು ತಾರೆಯರಾದ ಪಂಕಜ್ ತ್ರಿಪಾಠಿ ಹಾಗೂ ಪ್ರತೀಕ್ ಗಾಂಧಿ ಭಾಗವಹಿಸಲಿದ್ದಾರೆ. ಈಗಾಗಲೇ ಚಾನಲ್ ಈ ಕುರಿತು ಪ್ರೋಮೋ ಹಂಚಿಕೊಂಡಿದ್ದು, ಈ ನಟರ ಸಂಭಾಷಣೆಗಳು ಎಲ್ಲರ ಮುಖದಲ್ಲಿ ನಗು ಮೂಡಿಸಿವೆ. ಪಂಕಜ್ ತ್ರಿಪಾಠಿ ತಮ್ಮ ವೃತ್ತಿ ಜೀವನದ ಆರಂಭದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಚಿಗುರಿದ ಕನಸು’ ಚಿತ್ರದಲ್ಲಿ ಸಣ್ಣ ಪಾತ್ರವೊಂದನ್ನು ನಿಭಾಯಿಸಿದ್ದರು. ನಂತರ ಬಾಲಿವುಡ್​ನಲ್ಲಿ ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡ ಈ ನಟ, ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಶಕೀಲಾ’ ಚಿತ್ರದ ಮೂಲಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡಿದ್ದರು. ಪ್ರಸ್ತುತ ವಿವಿಧ ಸೀರೀಸ್ ಹಾಗೂ ಚಿತ್ರಗಳಲ್ಲಿ ಬ್ಯುಸಿಯಿರುವ ಪಂಕಜ್ ತ್ರಿಪಾಠಿ ಕೆಬಿಸಿ 13ರ ಈ ವಾರದ ಸೆಲೆಬ್ರಿಟಿ ಅತಿಥಿಗಳಲ್ಲಿ ಒಬ್ಬರಾಗಿದ್ದಾರೆ.

Pankaj Tripathi and Pratik Gandhi in KBC 13

ಪ್ರತೀಕ್ ಗಾಂಧಿ, ಪಂಕಜ್ ತ್ರಿಪಾಠಿ, ಅಮಿತಾಭ್ ಬಚ್ಚನ್

ಶೋನಲ್ಲಿ ಭಾಗವಹಿಸುತ್ತಿರುವ ಮತ್ತೊಬ್ಬ ನಟ ಪ್ರತೀಕ್ ಗಾಂಧಿ ಈಗಾಗಲೇ ‘ಸ್ಕ್ಯಾಮ್ 1992’ ಚಿತ್ರದ ಮೂಲಕ ದೇಶದೆಲ್ಲೆಡೆ ತಮ್ಮದೇ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಅವರ ಮುಂದಿನ ಚಿತ್ರ ‘ಭವಾಯಿ’ಗೆ ಕನ್ನಡದ ನೆಲದಲ್ಲಿ ವೃತ್ತಿ ಬದುಕು ರೂಪಿಸಿಕೊಂಡ ಐಂದ್ರಿತಾ ರೇ ನಾಯಕಿ. ಹೀಗೆ ಪ್ರತೀಕ್ ಗಾಂಧಿ ಅವರಿಗೂ ಪರೋಕ್ಷವಾಗಿ ಕನ್ನಡದ ನಂಟಿದೆ. ಇದೀಗ ಈ ವಾರದ ಸೆಲೆಬ್ರಿಟಿ ಶೋನಲ್ಲಿ ಪಂಕಜ್ ಹಾಗೂ ಪ್ರತೀಕ್ ಭಾಗವಹಿಸುತ್ತಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಕಾರ್ಯಕ್ರಮದ ಒಂದು ಪ್ರೋಮೋ:

ಪಂಕಜ್ ತ್ರಿಪಾಠಿ ಹಾಗೂ ಪ್ರತೀಕ್ ಗಾಂಧಿ ಭಾಗವಹಿಸಿರುವ ಸಂಚಿಕೆ ಅಕ್ಟೋಬರ್ 1ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ.

ಇದನ್ನೂ ಓದಿ:

‘GST ಪಾವತಿಸಿದ್ದೀರಾ?’ ಎಂದು ಕೆಬಿಸಿ ವೇದಿಕೆಯಲ್ಲೇ ಅಮಿತಾಭ್​ರನ್ನು ಪ್ರಶ್ನಿಸಿದ ಮಹಿಳಾ ಅಧಿಕಾರಿ; ಮುಂದೇನಾಯ್ತು?

ಸ್ಪರ್ಧಿ ತನ್ನೊಂದಿಗೆ ಫ್ಲರ್ಟ್ ಮಾಡಿದಾಗ ಕೆಬಿಸಿ ನಿರ್ಮಾಪಕರಿಗೆ ಶೋ ನಿಲ್ಲಿಸಲು ಹೇಳಿದ ಅಮಿತಾಭ್!; ಕಾರಣವೇನು?

ಕಿರುತೆರೆ ನಟಿಯ ಜತೆಗಿನ ಪ್ರೀತಿಯನ್ನು ಅಧಿಕೃತ ಮಾಡಿದ ಹೀರೋ; ಮೊದಲೇ ಗೊತ್ತಿತ್ತು ಎಂದ ಫ್ಯಾನ್ಸ್​

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!