AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಇಬ್ಬರ ಎಂಟ್ರಿ

ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಎಂಟನೇ ಸೀಸನ್​ನಲ್ಲಿ ಇಬ್ಬರು ಒಟ್ಟೊಟ್ಟಿಗೆ ದೊಡ್ಮನೆಗೆ ಬಂದಿದ್ದರು. ಈ ಬಾರಿಯೂ ಹಾಗೆಯೇ ಆಗುತ್ತಿದೆ ಎನ್ನಲಾಗುತ್ತಿದೆ.

ಕನ್ನಡ ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಇಬ್ಬರ ಎಂಟ್ರಿ
ವೈಲ್ಡ್ ಕಾರ್ಡ್ ಎಂಟ್ರಿ
ರಾಜೇಶ್ ದುಗ್ಗುಮನೆ
|

Updated on:Nov 27, 2023 | 8:34 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಈಗ 50 ದಿನಗಳನ್ನು ಪೂರ್ಣಗೊಳಿಸಿದೆ. ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿದೆ. ಈಗಾಗಲೇ ಬಿಗ್ ಬಾಸ್ (Bigg Boss) ಮನೆಯಿಂದ ಆರು ಮಂದಿ ಔಟ್ ಆಗಿದ್ದು, ಸ್ಪರ್ಧಿಗಳ ಸಂಖ್ಯೆ 11ಕ್ಕೆ ಇಳಿಕೆ ಆಗಿದೆ. ಇನ್ನು 50 ದಿನ ಕಳೆದರೆ ಬಿಗ್ ಬಾಸ್ ಫಿನಾಲೆ ಬರಲಿದೆ. ಈಗ ಬಿಗ್ ಬಾಸ್ ಮನೆಗೆ ಇಬ್ಬರು ಸ್ಪರ್ಧಿಗಳ ಆಗಮನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ.

ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಎಂಟನೇ ಸೀಸನ್​ನಲ್ಲಿ ಇಬ್ಬರು ಒಟ್ಟೊಟ್ಟಿಗೆ ದೊಡ್ಮನೆಗೆ ಬಂದಿದ್ದರು. ಈ ಬಾರಿಯೂ ಹಾಗೆಯೇ ಆಗುತ್ತಿದೆ ಎನ್ನಲಾಗುತ್ತಿದೆ. ದೊಡ್ಮನೆಗೆ ಇಬ್ಬರ ಎಂಟ್ರಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಅವರು ಯಾರು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ ಅವರು ದೊಡ್ಮನೆಗೆ ಬರಲಿದ್ದಾರಂತೆ. ಮಾಡೆಲ್ ಆಗಿ ಅವರು ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರಿಗೆ ಬಿಗ್ ಬಾಸ್​ನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 1 ಲಕ್ಷ ಹಿಂಬಾಲಕರಿದ್ದಾರೆ. ಬಿಗ್ ಬಾಸ್​ಗೆ ಹೋದ ಬಳಿಕ ಈ ಸಂಖ್ಯೆ ಹೆಚ್ಚಲಿದೆ. ಸಖತ್ ಬೋಲ್ಡ್ ಆಗಿ ಅವರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ನಟ, ಮಾಡೆಲ್, ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ದೊಡ್ಮನೆಗೆ ಬಂದಿದ್ದಾರೆ.

ಇದನ್ನೂ ಓದಿ: Namratha Gowda: ‘ನಾನು ಹೇಟ್ ಮಾಡುವವರೇ ಜನರಿಗೆ ಇಷ್ಟವಾಗ್ತಿದ್ದಾರೆ’; ಕಣ್ಣೀರು ಹಾಕಿದ ನಮ್ರತಾ ಗೌಡ

ಬಿಗ್ ಬಾಸ್​ನಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಜನಪ್ರಿಯತೆ ಪಡೆದ ಅನೇಕರಿದ್ದಾರೆ. ಬಿಗ್ ಬಾಸ್​ ಜರ್ನಿ ಅರ್ಧಕ್ಕೆ ಇವರು ಸೇರ್ಪಡೆ ಆಗುವಾಗ ಸಾಮಾನ್ಯವಾಗಿ ಅಡೆತಡೆಗಳು ಹೆಚ್ಚಿರುತ್ತವೆ. ಅದನ್ನು ಯಶಸ್ವಿಯಾಗಿ ದಾಟಬೇಕಾದ ಚಾಲೆಂಜ್ ಇವರ ಎದುರು ಇರುತ್ತದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ನವೆಂಬರ್ 27) ಪ್ರಸಾರ ಆಗಲಿರುವ ಎಪಿಸೋಡ್​ನಲ್ಲಿ ಈ ವಿಚಾರ ರಿವೀಲ್ ಆಗುವ ಸಾಧ್ಯತೆ ಇದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:11 am, Mon, 27 November 23

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ