ಕನ್ನಡ ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಇಬ್ಬರ ಎಂಟ್ರಿ

ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಎಂಟನೇ ಸೀಸನ್​ನಲ್ಲಿ ಇಬ್ಬರು ಒಟ್ಟೊಟ್ಟಿಗೆ ದೊಡ್ಮನೆಗೆ ಬಂದಿದ್ದರು. ಈ ಬಾರಿಯೂ ಹಾಗೆಯೇ ಆಗುತ್ತಿದೆ ಎನ್ನಲಾಗುತ್ತಿದೆ.

ಕನ್ನಡ ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಇಬ್ಬರ ಎಂಟ್ರಿ
ವೈಲ್ಡ್ ಕಾರ್ಡ್ ಎಂಟ್ರಿ
Follow us
|

Updated on:Nov 27, 2023 | 8:34 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ ಈಗ 50 ದಿನಗಳನ್ನು ಪೂರ್ಣಗೊಳಿಸಿದೆ. ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿದೆ. ಈಗಾಗಲೇ ಬಿಗ್ ಬಾಸ್ (Bigg Boss) ಮನೆಯಿಂದ ಆರು ಮಂದಿ ಔಟ್ ಆಗಿದ್ದು, ಸ್ಪರ್ಧಿಗಳ ಸಂಖ್ಯೆ 11ಕ್ಕೆ ಇಳಿಕೆ ಆಗಿದೆ. ಇನ್ನು 50 ದಿನ ಕಳೆದರೆ ಬಿಗ್ ಬಾಸ್ ಫಿನಾಲೆ ಬರಲಿದೆ. ಈಗ ಬಿಗ್ ಬಾಸ್ ಮನೆಗೆ ಇಬ್ಬರು ಸ್ಪರ್ಧಿಗಳ ಆಗಮನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ.

ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಎಂಟನೇ ಸೀಸನ್​ನಲ್ಲಿ ಇಬ್ಬರು ಒಟ್ಟೊಟ್ಟಿಗೆ ದೊಡ್ಮನೆಗೆ ಬಂದಿದ್ದರು. ಈ ಬಾರಿಯೂ ಹಾಗೆಯೇ ಆಗುತ್ತಿದೆ ಎನ್ನಲಾಗುತ್ತಿದೆ. ದೊಡ್ಮನೆಗೆ ಇಬ್ಬರ ಎಂಟ್ರಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಅವರು ಯಾರು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ ಅವರು ದೊಡ್ಮನೆಗೆ ಬರಲಿದ್ದಾರಂತೆ. ಮಾಡೆಲ್ ಆಗಿ ಅವರು ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರಿಗೆ ಬಿಗ್ ಬಾಸ್​ನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 1 ಲಕ್ಷ ಹಿಂಬಾಲಕರಿದ್ದಾರೆ. ಬಿಗ್ ಬಾಸ್​ಗೆ ಹೋದ ಬಳಿಕ ಈ ಸಂಖ್ಯೆ ಹೆಚ್ಚಲಿದೆ. ಸಖತ್ ಬೋಲ್ಡ್ ಆಗಿ ಅವರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ನಟ, ಮಾಡೆಲ್, ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ದೊಡ್ಮನೆಗೆ ಬಂದಿದ್ದಾರೆ.

ಇದನ್ನೂ ಓದಿ: Namratha Gowda: ‘ನಾನು ಹೇಟ್ ಮಾಡುವವರೇ ಜನರಿಗೆ ಇಷ್ಟವಾಗ್ತಿದ್ದಾರೆ’; ಕಣ್ಣೀರು ಹಾಕಿದ ನಮ್ರತಾ ಗೌಡ

ಬಿಗ್ ಬಾಸ್​ನಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಜನಪ್ರಿಯತೆ ಪಡೆದ ಅನೇಕರಿದ್ದಾರೆ. ಬಿಗ್ ಬಾಸ್​ ಜರ್ನಿ ಅರ್ಧಕ್ಕೆ ಇವರು ಸೇರ್ಪಡೆ ಆಗುವಾಗ ಸಾಮಾನ್ಯವಾಗಿ ಅಡೆತಡೆಗಳು ಹೆಚ್ಚಿರುತ್ತವೆ. ಅದನ್ನು ಯಶಸ್ವಿಯಾಗಿ ದಾಟಬೇಕಾದ ಚಾಲೆಂಜ್ ಇವರ ಎದುರು ಇರುತ್ತದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ನವೆಂಬರ್ 27) ಪ್ರಸಾರ ಆಗಲಿರುವ ಎಪಿಸೋಡ್​ನಲ್ಲಿ ಈ ವಿಚಾರ ರಿವೀಲ್ ಆಗುವ ಸಾಧ್ಯತೆ ಇದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:11 am, Mon, 27 November 23

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?