AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಇಬ್ಬರ ಎಂಟ್ರಿ

ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಎಂಟನೇ ಸೀಸನ್​ನಲ್ಲಿ ಇಬ್ಬರು ಒಟ್ಟೊಟ್ಟಿಗೆ ದೊಡ್ಮನೆಗೆ ಬಂದಿದ್ದರು. ಈ ಬಾರಿಯೂ ಹಾಗೆಯೇ ಆಗುತ್ತಿದೆ ಎನ್ನಲಾಗುತ್ತಿದೆ.

ಕನ್ನಡ ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಇಬ್ಬರ ಎಂಟ್ರಿ
ವೈಲ್ಡ್ ಕಾರ್ಡ್ ಎಂಟ್ರಿ
ರಾಜೇಶ್ ದುಗ್ಗುಮನೆ
|

Updated on:Nov 27, 2023 | 8:34 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಈಗ 50 ದಿನಗಳನ್ನು ಪೂರ್ಣಗೊಳಿಸಿದೆ. ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿದೆ. ಈಗಾಗಲೇ ಬಿಗ್ ಬಾಸ್ (Bigg Boss) ಮನೆಯಿಂದ ಆರು ಮಂದಿ ಔಟ್ ಆಗಿದ್ದು, ಸ್ಪರ್ಧಿಗಳ ಸಂಖ್ಯೆ 11ಕ್ಕೆ ಇಳಿಕೆ ಆಗಿದೆ. ಇನ್ನು 50 ದಿನ ಕಳೆದರೆ ಬಿಗ್ ಬಾಸ್ ಫಿನಾಲೆ ಬರಲಿದೆ. ಈಗ ಬಿಗ್ ಬಾಸ್ ಮನೆಗೆ ಇಬ್ಬರು ಸ್ಪರ್ಧಿಗಳ ಆಗಮನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ.

ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಎಂಟನೇ ಸೀಸನ್​ನಲ್ಲಿ ಇಬ್ಬರು ಒಟ್ಟೊಟ್ಟಿಗೆ ದೊಡ್ಮನೆಗೆ ಬಂದಿದ್ದರು. ಈ ಬಾರಿಯೂ ಹಾಗೆಯೇ ಆಗುತ್ತಿದೆ ಎನ್ನಲಾಗುತ್ತಿದೆ. ದೊಡ್ಮನೆಗೆ ಇಬ್ಬರ ಎಂಟ್ರಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಅವರು ಯಾರು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ ಅವರು ದೊಡ್ಮನೆಗೆ ಬರಲಿದ್ದಾರಂತೆ. ಮಾಡೆಲ್ ಆಗಿ ಅವರು ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರಿಗೆ ಬಿಗ್ ಬಾಸ್​ನಲ್ಲಿ ಸ್ಪರ್ಧಿಸೋ ಅವಕಾಶ ಸಿಕ್ಕಿದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 1 ಲಕ್ಷ ಹಿಂಬಾಲಕರಿದ್ದಾರೆ. ಬಿಗ್ ಬಾಸ್​ಗೆ ಹೋದ ಬಳಿಕ ಈ ಸಂಖ್ಯೆ ಹೆಚ್ಚಲಿದೆ. ಸಖತ್ ಬೋಲ್ಡ್ ಆಗಿ ಅವರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ನಟ, ಮಾಡೆಲ್, ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ದೊಡ್ಮನೆಗೆ ಬಂದಿದ್ದಾರೆ.

ಇದನ್ನೂ ಓದಿ: Namratha Gowda: ‘ನಾನು ಹೇಟ್ ಮಾಡುವವರೇ ಜನರಿಗೆ ಇಷ್ಟವಾಗ್ತಿದ್ದಾರೆ’; ಕಣ್ಣೀರು ಹಾಕಿದ ನಮ್ರತಾ ಗೌಡ

ಬಿಗ್ ಬಾಸ್​ನಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಜನಪ್ರಿಯತೆ ಪಡೆದ ಅನೇಕರಿದ್ದಾರೆ. ಬಿಗ್ ಬಾಸ್​ ಜರ್ನಿ ಅರ್ಧಕ್ಕೆ ಇವರು ಸೇರ್ಪಡೆ ಆಗುವಾಗ ಸಾಮಾನ್ಯವಾಗಿ ಅಡೆತಡೆಗಳು ಹೆಚ್ಚಿರುತ್ತವೆ. ಅದನ್ನು ಯಶಸ್ವಿಯಾಗಿ ದಾಟಬೇಕಾದ ಚಾಲೆಂಜ್ ಇವರ ಎದುರು ಇರುತ್ತದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ನವೆಂಬರ್ 27) ಪ್ರಸಾರ ಆಗಲಿರುವ ಎಪಿಸೋಡ್​ನಲ್ಲಿ ಈ ವಿಚಾರ ರಿವೀಲ್ ಆಗುವ ಸಾಧ್ಯತೆ ಇದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:11 am, Mon, 27 November 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ