AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪವಿತ್ರಾಗೂ ಆತನಿಗೂ ಸಂಬಂಧ ಇತ್ತು, ಅವಳಿಂದಲೇ ನಮ್ಮ ಕುಟುಂಬ ಹಾಳಾಯ್ತು’; ಚಂದು ಪತ್ನಿಯ ಕಣ್ಣೀರು

‘ನನ್ನ ಗಂಡ ಮನೆಗೆ ಬಂದರೆ ಸಾಕು ಕಿರುಕುಳ ನೀಡುತ್ತಿದ್ದ. ಪವಿತ್ರಾಳ ಫೋಟೋ ಇಟ್ಟುಕೊಂಡು ನಿರಂತರ ನೋಡುತ್ತಿದ್ದ. ಚಂದು ಇಲ್ಲದಿದ್ದರೂ ನಾನು ಧೈರ್ಯ ಕಳೆದುಕೊಳ್ಳದೆ ನನ್ನ ಮಕ್ಕಳನ್ನು ಸಾಕುತ್ತಿದ್ದೇನೆ. ಚಂದುಗೆ ಯಾವುದೇ ಜವಾಬ್ದಾರಿ ಇರಲಿಲ್ಲ’ ಎಂದಿದ್ದಾರೆ ಜಯರಾಮ್ ಪತ್ನಿ.

‘ಪವಿತ್ರಾಗೂ ಆತನಿಗೂ ಸಂಬಂಧ ಇತ್ತು, ಅವಳಿಂದಲೇ ನಮ್ಮ ಕುಟುಂಬ ಹಾಳಾಯ್ತು’; ಚಂದು ಪತ್ನಿಯ ಕಣ್ಣೀರು
ಶಿಲ್ಪಾ ಹಾಗೂ ಪವಿತ್ರಾ-ಚಂದು
ರಾಜೇಶ್ ದುಗ್ಗುಮನೆ
|

Updated on: May 18, 2024 | 2:19 PM

Share

ಪವಿತ್ರಾ ಜಯರಾಮ್ (Pavitra Jayaram) ಅವರು ಅಪಘಾತದಲ್ಲಿ ನಿಧನ ಹೊಂದಿದರೆ ಅವರ ಆಪ್ತ ಗೆಳೆಯ ಎನಿಸಿಕೊಂಡಿದ್ದ ಚಂದ್ರಕಾಂತ್ ಅವರು ಇದೇ ನೋವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪತಿ-ಪತ್ನಿಯರು ಎಂದು ಕೂಡ ಹೇಳಲಾಗಿತ್ತು. ಆದರೆ, ಅಸಲಿ ವಿಚಾರ ಬೇರೆಯೇ ಇದೆ. ಚಂದ್ರಕಾಂತ್​ ಅವರು ಶಿಲ್ಪಾ ಪ್ರೇಮಾ ಅವರನ್ನು ಮದುವೆ ಆಗಿದ್ದರು. ಈ ದಂಪತಿಗೆ ಮಕ್ಕಳಿದ್ದರು. ಆದಾಗ್ಯೂ ಪವಿತ್ರಾ ಜೊತೆ ಪ್ರೀತಿಯಲ್ಲಿ ಇದ್ದರು. ಈಗ ಚಂದು ಅವರ ಪತ್ನಿ ಶಿಲ್ಪಾ ಈ ಬಗ್ಗೆ ಮಾತನಾಡಿದ್ದಾರೆ.

‘ಇಬ್ಬರ ಸಂಬಂಧದ ವಿಷಯ ನನಗೆ ಗೊತ್ತಾಯಿತು. ಇದಾದ ಬಳಿಕ ಆತ ನನಗೆ ಹೊಡೆಯುವುದು, ಹಲವು ವಿಧದಲ್ಲಿ ಹಿಂಸೆ ಕೊಡಲು ಆರಂಭಿಸಿದ. ಕುಡಿದು ರಾತ್ರಿ ಹೊತ್ತು ಗಲಾಟೆ ಮಾಡುತ್ತಿದ್ದ. ಒಮ್ಮೆ ಪವಿತ್ರಾ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಪವಿತ್ರಾ ಮಗನಿಗೆ ಈ ವಿಚಾರ ತಿಳಿಸಿದ್ದ್ದೆ. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ’ ಎಂದು ಶಿಲ್ಪಾ ಪ್ರೇಮಾ ಕಣ್ಣೀರು ಹಾಕಿದ್ದಾರೆ.

‘ನನ್ನ ಗಂಡ ಮನೆಗೆ ಬಂದರೆ ಸಾಕು ಕಿರುಕುಳ ನೀಡುತ್ತಿದ್ದ. ಪವಿತ್ರಾಳ ಫೋಟೋ ಇಟ್ಟುಕೊಂಡು ನಿರಂತರ ನೋಡುತ್ತಿದ್ದ. ಚಂದು ಇಲ್ಲದಿದ್ದರೂ ನಾನು ಧೈರ್ಯ ಕಳೆದುಕೊಳ್ಳದೆ ನನ್ನ ಮಕ್ಕಳನ್ನು ಸಾಕುತ್ತಿದ್ದೇನೆ. ಚಂದುಗೆ ಯಾವುದೇ ಜವಾಬ್ದಾರಿ ಇರಲಿಲ್ಲ. ನಾನು ಯಾರ ಜೊತೆ ಮಾತಾಡಿದ್ರೂ ಅವರ ಜೊತೆಗೆ ಸಂಬಂಧ ಕಟ್ಟುತ್ತಿದ್ದ’ ಎಂದು ಬೇಸರ ಹೊರಹಾಕಿದ್ದಾರೆ ಶಿಲ್ಪಾ.

ಇದನ್ನೂ ಓದಿ:  ‘ಪವಿತ್ರಾ ಅಂತ್ಯಕ್ರಿಯೆ ಬಳಿಕ ಅಲ್ಲಿಂದ ಬರೋಕೆ ರೆಡಿ ಇರಲಿಲ್ಲ’; ನಟ ಚಂದು ಆತ್ಮಹತ್ಯೆಗೆ ಅಸಲಿ ಕಾರಣ ಏನು?

ಚಂದು ತಾಯಿ ಕೂಡ ಪವಿತ್ರಾ ಬಗ್ಗೆ ಕಿಡಿಕಾರಿದ್ದಾರೆ. ‘ಪವಿತ್ರಾಳಿಂದಲೇ ಇದೆಲ್ಲಾ ನಡೆದಿದೆ. ನನ್ನ ಮಗನ್ನು ನಮ್ಮ ಮನೆಗೆ ಬರದಂತೆ ಮಾಡಿದ್ದಾಳೆ. ಪವಿತ್ರಾ ಅವನಿಗೆ ಏನು ಮಾಡಿದ್ದಳೋ ಏನೋ ಗೊತ್ತಿಲ್ಲ, ನನ್ನ ಎಲ್ಲಾ ಸರ್ವಸ್ವ ಪವಿತ್ರಾ, ಅವಳೇ ನನ್ನ ಹೆಂಡತಿ ಎನ್ನುತ್ತಿದ್ದ. ಮನೆಗೆ ಕುಡಿದು ಬಂದು ಹೆಂಡತಿಯನ್ನು ಹೊಡೆಯುತ್ತಿದ್ದ. ಪವಿತ್ರಾ ಸಹವಾಸ ಬಿಡು ಅಂತಾ ನಾವು ಸಾಕಷ್ಟು ಬಾರಿ ಹೇಳಿದ್ದೆವು. ಆದರೂ ನಮ್ಮ ಯಾರ ಮಾತು ಕೇಳಲಿಲ್ಲ. ಪವಿತ್ರಾಳಿಂದ ನಮ್ಮ ಇಡಿ ಸಂಸಾರ ಹಾಳಾಗಿ ಹೋಯ್ತು’ ಎಂದು ಬೇಸರ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ