AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನನ್ನನ್ನು ಆ ದೃಷ್ಟಿಕೋನದಲ್ಲಿ ನೋಡಬೇಡಿ’; ಪ್ರಶಾಂತ್ ಸಂಬರ್ಗಿಗೆ ಸಾನ್ಯಾ ಐಯ್ಯರ್ ಮನವಿ

ಸಾನ್ಯಾ ಐಯ್ಯರ್ ಬಳಿ ‘ಕಲಾವಿದ’ ಎಂಬ ಟ್ಯಾಗ್ ಇತ್ತು. ಇದನ್ನು ಪ್ರಶಾಂತ್ ಸಂಬರ್ಗಿಗೆ ನೀಡಿದ್ದ ಸಾನ್ಯಾ, ‘ಪ್ರಶಾಂತ್ ಸಂಬರ್ಗಿ ಅವರಲ್ಲಿ ಕುತಂತ್ರ ಬುದ್ಧಿ ಹೆಚ್ಚಿದೆ. ಕಲಾವಿದರಿಗೆ ಮಾತ್ರ ಅದು ಸಾಧ್ಯ’ ಎಂದಿದ್ದರು. ಈ ಬಗ್ಗೆ ಸುದೀಪ್ ಅವರು ಸಾನ್ಯಾಗೆ ಕ್ಲಾಸ್ ತೆಗೆದುಕೊಂಡಿದ್ದರು.

‘ನೀವು ನನ್ನನ್ನು ಆ ದೃಷ್ಟಿಕೋನದಲ್ಲಿ ನೋಡಬೇಡಿ’; ಪ್ರಶಾಂತ್ ಸಂಬರ್ಗಿಗೆ ಸಾನ್ಯಾ ಐಯ್ಯರ್ ಮನವಿ
ಪ್ರಶಾಂತ್​-ಸಾನ್ಯಾ
TV9 Web
| Edited By: |

Updated on:Oct 03, 2022 | 10:17 PM

Share

ಕಳೆದ ವಾರ ಪ್ರಶಾಂತ್ ಸಂಬರ್ಗಿ (Prashanth Sambargi) ಬಗ್ಗೆ ಸಾನ್ಯಾ ಐಯ್ಯರ್ ಅವರು ಒಂದು ಮಾತನ್ನು ಹೇಳಿದ್ದರು. ಈ ಮಾತು ಹಲವು ದಿನಗಳ ಕಾಲ ಚರ್ಚೆಯಲ್ಲಿದೆ. ಕಿಚ್ಚ ಸುದೀಪ್ ಅವರು ವೇದಿಕೆ ಮೇಲೆ ಇದೇ ವಿಚಾರ ಪ್ರಸ್ತಾಪ ಮಾಡಿದ್ದರು. ಸುದೀಪ್ ಈ ಮಾತನ್ನು ಹೇಳಿದ ನಂತರದಲ್ಲಿ ಪ್ರಶಾಂತ್ ಸಂಬರ್ಗಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾನ್ಯಾ ಎದುರು ಪದೇಪದೇ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ ಪ್ರಶಾಂತ್​. ಇದಕ್ಕೆ ಸಾನ್ಯಾ ಐಯ್ಯರ್ (Sanya Iyer) ಸಿಟ್ಟಾಗಿದ್ದಾರೆ.

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವಾಗ ಎಲ್ಲರಿಗೂ ಒಂದು ಬ್ಯಾಂಡ್ ನೀಡಲಾಗಿತ್ತು. ಎಲ್ಲಾ ಬ್ಯಾಂಡ್​ಗಳ ಮೇಲೆ ಒಂದು ಒಳ್ಳೆಯ ಗುಣದ ಹೆಸರು ಬರೆದಿತ್ತು. ಸಾನ್ಯಾ ಐಯ್ಯರ್ ಬಳಿ ‘ಕಲಾವಿದ’ ಎಂಬ ಟ್ಯಾಗ್ ಇತ್ತು. ಇದನ್ನು ಪ್ರಶಾಂತ್ ಸಂಬರ್ಗಿಗೆ ನೀಡಿದ್ದ ಸಾನ್ಯಾ, ‘ಪ್ರಶಾಂತ್ ಸಂಬರ್ಗಿ ಅವರಲ್ಲಿ ಕುತಂತ್ರ ಬುದ್ಧಿ ಹೆಚ್ಚಿದೆ. ಕಲಾವಿದರಿಗೆ ಮಾತ್ರ ಅದು ಸಾಧ್ಯ’ ಎಂದಿದ್ದರು. ಈ ಬಗ್ಗೆ ಸುದೀಪ್ ಅವರು ಸಾನ್ಯಾಗೆ ಕ್ಲಾಸ್ ತೆಗೆದುಕೊಂಡಿದ್ದರು.

‘ನಾವು ಬ್ಯಾಂಡ್​ನ ಒಳ್ಳೆಯ ಕಾರಣಕ್ಕೆ ನೀಡಿದ್ದು. ಆದರೆ, ಕುತಂತ್ರಿ ಎಂಬ ಶಬ್ದವನ್ನು ನೀವೇ ಸೇರಿಸಿಕೊಂಡಿರಿ. ಆ ರೀತಿ ಮಾಡಬಾರದಿತ್ತು’ ಎಂದು ಸಾನ್ಯಾಗೆ ಸುದೀಪ್ ಹೇಳಿದ್ದರು. ಆ ಬಳಿಕ ಪ್ರಶಾಂತ್ ಸಂಬರ್ಗಿ ಅವರು ಈ ಬಗ್ಗೆ ಚರ್ಚೆ ಮಾಡಿದ್ದರು. ‘ನೀವು ನನಗೆ ಕುತಂತ್ರಿ ಎಂದಿದ್ದೀರಾ’ ಎಂದು ಸಾನ್ಯಾಗೆ ಪ್ರಶಾಂತ್ ಸಂಬರ್ಗಿ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ನಂತರ ಪ್ರಶಾಂತ್ ಸಂಬರ್ಗಿ ಸಾನ್ಯಾ ಅವರನ್ನು ಮತ್ತೆ ಪ್ರಶ್ನೆ ಮಾಡಿದರು. ‘ನಾನು ಕುಂತತ್ರಿ ಎಂದು ಹೇಳಿದ್ದಕ್ಕೆ ನಿಮಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ, ನನ್ನ ಮಾತನ್ನು ಹಿಂಪಡೆಯಲ್ಲ. ನೀವು ನನಗೆ ಆ ರೀತಿ ಕಂಡಿರಿ. ಹಾಗಾಗಿ ಹೇಳಿದೆ ಎಂದರು ಸಾನ್ಯಾ. ‘ಹಾಲು ಒಡೆದು ಹೋಗಿದೆ, ಗಾಜು ಕೂಡ ಒಡೆದು ಹೋಗಿದೆ. ಅದನ್ನು ಸರಿ ಮಾಡೋಕೆ ಆಗಲ್ಲ ಬಿಡಿ’ ಎಂದು ಪ್ರಶಾಂತ್ ಸಂಬರ್ಗಿ ಹೇಳಿದರು.

ಇದನ್ನೂ ಓದಿ: ಸಿಟ್ಟಲ್ಲಿ ರಾಕೇಶ್ ಅಡಿಗ ಕಾಲರ್ ಹಿಡಿದ ಪ್ರಶಾಂತ್ ಸಂಬರ್ಗಿ; ಮನೆಯವರಿಗೆ ಹೆಚ್ಚಿತು ಟೆನ್ಷನ್

‘ನಮ್ಮಿಬ್ಬರ ಮಧ್ಯೆ ಈ ಚರ್ಚೆ ಬೇಡ. ನನ್ನನ್ನು ಚಿಕ್ಕವನು ಎಂದುಕೊಳ್ಳಬೇಡಿ. ನೀವು ನನ್ನನ್ನು ಆ ದೃಷ್ಟಿಕೋನದಲ್ಲಿ ನೋಡಬೇಡಿ. ನಾನು ನಿಮ್ಮನ್ನು ಆ ದೃಷ್ಟಿಕೋನದಲ್ಲಿ ನೋಡಲ್ಲ’ ಎಂದು ಮನವಿ ಮಾಡಿಕೊಂಡಿದ್ದಾರೆ ಸಾನ್ಯಾ ಐಯ್ಯರ್.

Published On - 9:58 pm, Mon, 3 October 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ