AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿರೋ ಆ ಕತ್ತೆಯ ಹೊರತನ್ನಿ’; ಕೇಳಿಬಂತು ಆಗ್ರಹ

ಈ ಬಾರಿಯ ಹಿಂದಿ ಬಿಗ್ ಬಾಸ್​ಗೆ ಕತ್ತೆಯನ್ನು ತೆಗೆದುಕೊಂಡು ಹೋಗಲಾಗಿದೆ. ಅದನ್ನು ಕೂಡ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಇದಕ್ಕೆ ಪ್ರಾಣಿಗಳ ಹಕ್ಕುಗಳ ರಕ್ಷಣಾ ವೇದಿಕೆ ಪೆಟಾ ಅಪಸ್ವರ ತೆಗೆದಿದೆ. ಈ ರಿಯಾಲಿಟಿ ಶೋನಲ್ಲಿ ಪ್ರಾಣಿಗಳ ಬಳಕೆ ಆಗಬಾರದು ಎಂದು ಕೋರಿದೆ.

‘ಬಿಗ್ ಬಾಸ್​ನಲ್ಲಿರೋ ಆ ಕತ್ತೆಯ ಹೊರತನ್ನಿ’; ಕೇಳಿಬಂತು ಆಗ್ರಹ
ಬಿಗ್ ಬಾಸ್
Follow us
ರಾಜೇಶ್ ದುಗ್ಗುಮನೆ
|

Updated on: Oct 09, 2024 | 12:54 PM

‘ಬಿಗ್ ಬಾಸ್​’ನಲ್ಲಿ ಖ್ಯಾತ ಸೆಲೆಬ್ರಿಟಿಗಳು, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್​ಗಳು ಹೋಗೋದು ಸಾಮಾನ್ಯ. ಆದರೆ, ಈ ಬಾರಿಯ ಹಿಂದಿ ಬಿಗ್ ಬಾಸ್​ಗೆ ಕತ್ತೆಯನ್ನು ತೆಗೆದುಕೊಂಡು ಹೋಗಲಾಗಿದೆ. ಅದನ್ನು ಕೂಡ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಇದಕ್ಕೆ ಪ್ರಾಣಿಗಳ ಹಕ್ಕುಗಳ ರಕ್ಷಣಾ ವೇದಿಕೆ ‘ಪೆಟಾ’ ಅಪಸ್ವರ ತೆಗೆದಿದೆ. ಈ ರಿಯಾಲಿಟಿ ಶೋನಲ್ಲಿ ಪ್ರಾಣಿಗಳ ಬಳಕೆ ಆಗಬಾರದು ಎಂದು ಹೇಳಿದೆ.

ಪೆಟಾ ಈ ಸಂಬಂಧ ಪತ್ರ ಬರೆದಿದೆ. ‘ಪ್ರಾಣಿಗಳನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಇಡಿ’ ಎಂದು ಪತ್ರದಲ್ಲಿ ಕೋರಲಾಗಿದೆ. ‘ಬಿಗ್ ಬಾಸ್ ಮನೆಯಲ್ಲಿ ಕತ್ತೆಯನ್ನು ಇಟ್ಟಿರುವ ಬಗ್ಗೆ ಸಾರ್ವಜನಿಕರಿಂದ ನಮಗೆ ದೂರುಗಳು ಬರುತ್ತಿವೆ. ಜನರ ಕಾಳಜಿ ಮಾನ್ಯವಾಗಿರುತ್ತವೆ ಮತ್ತು ನಿರ್ಲಕ್ಷಿಸಲು ಸಾಧ್ಯವಿಲ್ಲ’ ಎಂದು ಪೆಟಾ ಹೇಳಿದೆ.

‘ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿ, ಬಿಗ್ ಬಾಸ್‌ನ ನಿರೂಪಕರಾಗಿ ನೀವು (ಸಲ್ಮಾನ್ ಖಾನ್) ಮಾದರಿಯಾಗುವ ತಾಕತ್ತನ್ನು ಹೊಂದಿದ್ದೀರಿ. ಪ್ರಾಣಿಗಳನ್ನು ಮನರಂಜನೆಗಾಗಿ ಬಳಸದಂತೆ ವಾಹಿನಿಯವರಿಗೆ ನೀವು ಒತ್ತಡ ಹೇರಬೇಕು. ಅದಕ್ಕೆ ನೀವು ಪ್ರಭಾವವನ್ನು ಬಳಸಬೇಕು’ ಎಂದು ಪೆಟಾ ಮನವಿ ಮಾಡಿಕೊಂಡಿದೆ.

ಈ ಕತ್ತೆಯ ಹೆಸರು ಮ್ಯಾಕ್ಸ್. ಇದನ್ನು ವಕೀಲ ಗುಣರತ್ನ ಅವರು ದೊಡ್ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಇದನ್ನು ಪೆಟಾಗೆ ಹಸ್ತಾಂತರಿಸಬೇಕು ಎಂದು ಕೋರಲಾಗಿದೆ. ‘ಕತ್ತೆಗಳು ಭಯ ಬೀಳುತ್ತವೆ. ಬೆಳಕು, ಗದ್ದಲದಿಂದ ಅವು ತೊಂದರೆಗೆ ಒಳಗಾಗುತ್ತವೆ. ಹೀಗಾಗಿ, ಅದನ್ನು ಶೋನಿಂದ ದೂರ ಇಡಿ’ ಎಂದು ಕೋರಲಾಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ಗೆ ಸ್ಪರ್ಧಿ ಆಗಿ ಎಂಟ್ರಿ ಕೊಟ್ಟ ಕತ್ತೆ; ತಲೆಗೆ ಹುಳ ಬಿಟ್ಟ ಕಲರ್ಸ್ 

‘ಬಿಗ್ ಬಾಸ್’ನಲ್ಲಿ ಪ್ರಾಣಿಯನ್ನು ಕರೆದುಕೊಂಡು ಬಂದಿದ್ದು ಇದೇ ಮೊದಲು. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಭಾನುವಾರ (ಅಕ್ಟೋಬರ್ 6) ಬಿಗ್ ಬಾಸ್ ಶೋಗೆ ಅದ್ದೂರಿ ಓಪನಿಂಗ್ ಸಿಕ್ಕಿದೆ. ಅನೇಕ ಸೆಲೆಬ್ರಿಟಿಗಳು ಇದರ ಭಾಗ ಆಗಿದ್ದಾರೆ. ಸ್ವತಃ ಸಲ್ಮಾನ್ ಖಾನ್ ಅವರು ಕತ್ತೆಯನ್ನು ವೇದಿಕೆ ಮೇಲೆ ಕರೆ ತಂದಿದ್ದಾರೆ. ಬಿಗ್ ಬಾಸ್​ನಲ್ಲಿ ಒಂದು ಕಡೆಯಲ್ಲಿ ಕತ್ತೆಯನ್ನು ಕಟ್ಟಿಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು