‘ಬಿಗ್ ಬಾಸ್​ನಲ್ಲಿರೋ ಆ ಕತ್ತೆಯ ಹೊರತನ್ನಿ’; ಕೇಳಿಬಂತು ಆಗ್ರಹ

ಈ ಬಾರಿಯ ಹಿಂದಿ ಬಿಗ್ ಬಾಸ್​ಗೆ ಕತ್ತೆಯನ್ನು ತೆಗೆದುಕೊಂಡು ಹೋಗಲಾಗಿದೆ. ಅದನ್ನು ಕೂಡ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಇದಕ್ಕೆ ಪ್ರಾಣಿಗಳ ಹಕ್ಕುಗಳ ರಕ್ಷಣಾ ವೇದಿಕೆ ಪೆಟಾ ಅಪಸ್ವರ ತೆಗೆದಿದೆ. ಈ ರಿಯಾಲಿಟಿ ಶೋನಲ್ಲಿ ಪ್ರಾಣಿಗಳ ಬಳಕೆ ಆಗಬಾರದು ಎಂದು ಕೋರಿದೆ.

‘ಬಿಗ್ ಬಾಸ್​ನಲ್ಲಿರೋ ಆ ಕತ್ತೆಯ ಹೊರತನ್ನಿ’; ಕೇಳಿಬಂತು ಆಗ್ರಹ
ಬಿಗ್ ಬಾಸ್
Follow us
|

Updated on: Oct 09, 2024 | 12:54 PM

‘ಬಿಗ್ ಬಾಸ್​’ನಲ್ಲಿ ಖ್ಯಾತ ಸೆಲೆಬ್ರಿಟಿಗಳು, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್​ಗಳು ಹೋಗೋದು ಸಾಮಾನ್ಯ. ಆದರೆ, ಈ ಬಾರಿಯ ಹಿಂದಿ ಬಿಗ್ ಬಾಸ್​ಗೆ ಕತ್ತೆಯನ್ನು ತೆಗೆದುಕೊಂಡು ಹೋಗಲಾಗಿದೆ. ಅದನ್ನು ಕೂಡ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಇದಕ್ಕೆ ಪ್ರಾಣಿಗಳ ಹಕ್ಕುಗಳ ರಕ್ಷಣಾ ವೇದಿಕೆ ‘ಪೆಟಾ’ ಅಪಸ್ವರ ತೆಗೆದಿದೆ. ಈ ರಿಯಾಲಿಟಿ ಶೋನಲ್ಲಿ ಪ್ರಾಣಿಗಳ ಬಳಕೆ ಆಗಬಾರದು ಎಂದು ಹೇಳಿದೆ.

ಪೆಟಾ ಈ ಸಂಬಂಧ ಪತ್ರ ಬರೆದಿದೆ. ‘ಪ್ರಾಣಿಗಳನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಇಡಿ’ ಎಂದು ಪತ್ರದಲ್ಲಿ ಕೋರಲಾಗಿದೆ. ‘ಬಿಗ್ ಬಾಸ್ ಮನೆಯಲ್ಲಿ ಕತ್ತೆಯನ್ನು ಇಟ್ಟಿರುವ ಬಗ್ಗೆ ಸಾರ್ವಜನಿಕರಿಂದ ನಮಗೆ ದೂರುಗಳು ಬರುತ್ತಿವೆ. ಜನರ ಕಾಳಜಿ ಮಾನ್ಯವಾಗಿರುತ್ತವೆ ಮತ್ತು ನಿರ್ಲಕ್ಷಿಸಲು ಸಾಧ್ಯವಿಲ್ಲ’ ಎಂದು ಪೆಟಾ ಹೇಳಿದೆ.

‘ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿ, ಬಿಗ್ ಬಾಸ್‌ನ ನಿರೂಪಕರಾಗಿ ನೀವು (ಸಲ್ಮಾನ್ ಖಾನ್) ಮಾದರಿಯಾಗುವ ತಾಕತ್ತನ್ನು ಹೊಂದಿದ್ದೀರಿ. ಪ್ರಾಣಿಗಳನ್ನು ಮನರಂಜನೆಗಾಗಿ ಬಳಸದಂತೆ ವಾಹಿನಿಯವರಿಗೆ ನೀವು ಒತ್ತಡ ಹೇರಬೇಕು. ಅದಕ್ಕೆ ನೀವು ಪ್ರಭಾವವನ್ನು ಬಳಸಬೇಕು’ ಎಂದು ಪೆಟಾ ಮನವಿ ಮಾಡಿಕೊಂಡಿದೆ.

ಈ ಕತ್ತೆಯ ಹೆಸರು ಮ್ಯಾಕ್ಸ್. ಇದನ್ನು ವಕೀಲ ಗುಣರತ್ನ ಅವರು ದೊಡ್ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಇದನ್ನು ಪೆಟಾಗೆ ಹಸ್ತಾಂತರಿಸಬೇಕು ಎಂದು ಕೋರಲಾಗಿದೆ. ‘ಕತ್ತೆಗಳು ಭಯ ಬೀಳುತ್ತವೆ. ಬೆಳಕು, ಗದ್ದಲದಿಂದ ಅವು ತೊಂದರೆಗೆ ಒಳಗಾಗುತ್ತವೆ. ಹೀಗಾಗಿ, ಅದನ್ನು ಶೋನಿಂದ ದೂರ ಇಡಿ’ ಎಂದು ಕೋರಲಾಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ಗೆ ಸ್ಪರ್ಧಿ ಆಗಿ ಎಂಟ್ರಿ ಕೊಟ್ಟ ಕತ್ತೆ; ತಲೆಗೆ ಹುಳ ಬಿಟ್ಟ ಕಲರ್ಸ್ 

‘ಬಿಗ್ ಬಾಸ್’ನಲ್ಲಿ ಪ್ರಾಣಿಯನ್ನು ಕರೆದುಕೊಂಡು ಬಂದಿದ್ದು ಇದೇ ಮೊದಲು. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಭಾನುವಾರ (ಅಕ್ಟೋಬರ್ 6) ಬಿಗ್ ಬಾಸ್ ಶೋಗೆ ಅದ್ದೂರಿ ಓಪನಿಂಗ್ ಸಿಕ್ಕಿದೆ. ಅನೇಕ ಸೆಲೆಬ್ರಿಟಿಗಳು ಇದರ ಭಾಗ ಆಗಿದ್ದಾರೆ. ಸ್ವತಃ ಸಲ್ಮಾನ್ ಖಾನ್ ಅವರು ಕತ್ತೆಯನ್ನು ವೇದಿಕೆ ಮೇಲೆ ಕರೆ ತಂದಿದ್ದಾರೆ. ಬಿಗ್ ಬಾಸ್​ನಲ್ಲಿ ಒಂದು ಕಡೆಯಲ್ಲಿ ಕತ್ತೆಯನ್ನು ಕಟ್ಟಿಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು