AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ಗೆ ವರ್ಗಾವಣೆ ಶಿಕ್ಷೆ

Varthur Santhosh: ವರ್ತೂರು ಸಂತೋಷ್ ಅವರಿಗೆ ಹಲವು ಸಂಘ-ಸಂಸ್ಥೆಗಳು ಸನ್ಮಾನ ಮಾಡುತ್ತಿವೆ. ಇದೀಗ ಪೊಲೀಸ್ ಇನ್​ಸ್ಪೆಕ್ಟರ್ ಒಬ್ಬರು ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ಗೆ ವರ್ಗಾವಣೆ ಶಿಕ್ಷೆ
ವರ್ತೂರು ಸಂತೋಷ್
ಮಂಜುನಾಥ ಸಿ.
|

Updated on: Feb 10, 2024 | 3:38 PM

Share

ಬಿಗ್​ಬಾಸ್​ಗೆ (BiggBoss) ಹೋಗಿ ಬಂದ ಮೇಲೆ ವರ್ತೂರು ಸಂತೋಷ್ (Varthur Santhosh) ಹವಾ ಹೆಚ್ಚಾಗಿದೆ. ಬಿಗ್​ಬಾಸ್​ನ ವಿನ್ನರ್​ಗಿಂತಲೂ ಹೆಚ್ಚಿನ ಜನಪ್ರಿಯತೆ ವರ್ತೂರು ಸಂತೋಷ್​ಗೆ ದೊರೆತಂತಿದೆ. ವಿವಿಧ ನಗರಗಳಿಗೆ ಓಡಾಡಿ ಮೆರವಣಿಗೆಗಳನ್ನು ಸಹ ವರ್ತೂರು ಸಂತೋಷ್ ಮಾಡಿದ್ದಾರೆ. ರಾಜ್ಯದ ಹಲವೆಡೆಯಿಂದ ಅಭಿಮಾನಿಗಳು ಆಗಮಿಸಿ ವರ್ತೂರು ಅವರೊಟ್ಟಿಗೆ ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ವಿವಿಧ ಸಂಘ-ಸಂಸ್ಥೆಗಳವರು ವರ್ತೂರು ಸಂತೋಷ್​ಗೆ ಸನ್ಮಾನಗಳನ್ನು ಮಾಡುತ್ತಿದ್ದಾರೆ. ಇದೇ ರೀತಿ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿ ಕೆಲ ಪೊಲೀಸ್ ಅಧಿಕಾರಿಗಳು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಿಎಸ್​ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್​ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ವರ್ತೂರು ಸಂತೋಷ್ ಬಿಗ್​ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್​ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.

ಬಿಗ್​ಬಾಸ್​ ಮನೆಯಿಂದ ಹೊರಗೆ ಬಂದ ಬಳಿಕ ಮನೆಯಲ್ಲಿ ಖಾಸಗಿ ಕಾರ್ಯಕ್ರಮವೊಂದನ್ನು ಮಾಡಿ ಬಿಗ್​ಬಾಸ್​ ಸ್ಪರ್ಧಿಗಳನ್ನೆಲ್ಲ ಆಹ್ವಾನಿಸಿದ್ದರು. ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ನಡೆಸಿ ತಾವು ರಾಷ್ಟ್ರಮಟ್ಟದ ಹಳ್ಳಿಕಾರ್ ರೇಸ್ ಮಾಡುವುದಾಗಿ ಹೇಳಿದ್ದರು. ಆ ರೇಸ್​ಗೆ ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್ ಅವರನ್ನು ಕರೆಸುವುದಾಗಿಯೂ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ