ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ಗೆ ವರ್ಗಾವಣೆ ಶಿಕ್ಷೆ

|

Updated on: Feb 10, 2024 | 3:38 PM

Varthur Santhosh: ವರ್ತೂರು ಸಂತೋಷ್ ಅವರಿಗೆ ಹಲವು ಸಂಘ-ಸಂಸ್ಥೆಗಳು ಸನ್ಮಾನ ಮಾಡುತ್ತಿವೆ. ಇದೀಗ ಪೊಲೀಸ್ ಇನ್​ಸ್ಪೆಕ್ಟರ್ ಒಬ್ಬರು ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ಗೆ ವರ್ಗಾವಣೆ ಶಿಕ್ಷೆ
ವರ್ತೂರು ಸಂತೋಷ್
Follow us on

ಬಿಗ್​ಬಾಸ್​ಗೆ (BiggBoss) ಹೋಗಿ ಬಂದ ಮೇಲೆ ವರ್ತೂರು ಸಂತೋಷ್ (Varthur Santhosh) ಹವಾ ಹೆಚ್ಚಾಗಿದೆ. ಬಿಗ್​ಬಾಸ್​ನ ವಿನ್ನರ್​ಗಿಂತಲೂ ಹೆಚ್ಚಿನ ಜನಪ್ರಿಯತೆ ವರ್ತೂರು ಸಂತೋಷ್​ಗೆ ದೊರೆತಂತಿದೆ. ವಿವಿಧ ನಗರಗಳಿಗೆ ಓಡಾಡಿ ಮೆರವಣಿಗೆಗಳನ್ನು ಸಹ ವರ್ತೂರು ಸಂತೋಷ್ ಮಾಡಿದ್ದಾರೆ. ರಾಜ್ಯದ ಹಲವೆಡೆಯಿಂದ ಅಭಿಮಾನಿಗಳು ಆಗಮಿಸಿ ವರ್ತೂರು ಅವರೊಟ್ಟಿಗೆ ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ವಿವಿಧ ಸಂಘ-ಸಂಸ್ಥೆಗಳವರು ವರ್ತೂರು ಸಂತೋಷ್​ಗೆ ಸನ್ಮಾನಗಳನ್ನು ಮಾಡುತ್ತಿದ್ದಾರೆ. ಇದೇ ರೀತಿ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿ ಕೆಲ ಪೊಲೀಸ್ ಅಧಿಕಾರಿಗಳು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಿಎಸ್​ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್​ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ವರ್ತೂರು ಸಂತೋಷ್ ಬಿಗ್​ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್​ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.

ಬಿಗ್​ಬಾಸ್​ ಮನೆಯಿಂದ ಹೊರಗೆ ಬಂದ ಬಳಿಕ ಮನೆಯಲ್ಲಿ ಖಾಸಗಿ ಕಾರ್ಯಕ್ರಮವೊಂದನ್ನು ಮಾಡಿ ಬಿಗ್​ಬಾಸ್​ ಸ್ಪರ್ಧಿಗಳನ್ನೆಲ್ಲ ಆಹ್ವಾನಿಸಿದ್ದರು. ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ನಡೆಸಿ ತಾವು ರಾಷ್ಟ್ರಮಟ್ಟದ ಹಳ್ಳಿಕಾರ್ ರೇಸ್ ಮಾಡುವುದಾಗಿ ಹೇಳಿದ್ದರು. ಆ ರೇಸ್​ಗೆ ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್ ಅವರನ್ನು ಕರೆಸುವುದಾಗಿಯೂ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ