AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್​ ಬಿಗ್​ ಬಾಸ್​ ಗೆಲ್ಲಲ್ಲ’; ಸುದೀಪ್​ ಎದುರಲ್ಲಿ ಭವಿಷ್ಯ ನುಡಿದ ಸಂಗೀತಾ ಶೃಂಗೇರಿ

ಆರಂಭದಲ್ಲಿ ಸಂಗೀತಾ ಶೃಂಗೇರಿ ಮತ್ತು ಕಾರ್ತಿಕ್​ ಮಹೇಶ್​ ನಡುವೆ ಒಳ್ಳೆಯ ಸ್ನೇಹ ಇತ್ತು. ನಂತರ ಅವರಿಬ್ಬರ ನಡುವೆ ಬಿರುಕು ಮೂಡಿತು. ಕಾರ್ತಿಕ್​ ಮಹೇಶ್​ ಬದಲಿಗೆ ಡ್ರೋನ್​ ಪ್ರತಾಪ್​ ಜೊತೆ ಈಗ ಸಂಗೀತಾ ಶೃಂಗೇರಿ ಹೆಚ್ಚು ಕ್ಲೋಸ್​ ಆಗಿದ್ದಾರೆ. ಕಾರ್ತಿಕ್​ ಅವರು ನಮ್ರತಾ ಗೌಡ ಮತ್ತು ವಿನಯ್​ ಗೌಡ ಜೊತೆ ಸ್ನೇಹ ಬೆಳೆಸಿದ್ದಾರೆ.

‘ಕಾರ್ತಿಕ್​ ಬಿಗ್​ ಬಾಸ್​ ಗೆಲ್ಲಲ್ಲ’; ಸುದೀಪ್​ ಎದುರಲ್ಲಿ ಭವಿಷ್ಯ ನುಡಿದ ಸಂಗೀತಾ ಶೃಂಗೇರಿ
ಕಾರ್ತಿಕ್​ ಮಹೇಶ್​, ಸಂಗೀತಾ ಶೃಂಗೇರಿ
ಮದನ್​ ಕುಮಾರ್​
|

Updated on: Dec 31, 2023 | 7:44 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋ (BBK 10) ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ತಲುಪಲಿದೆ. ಈ ಬಾರಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ವೀಕ್ಷಕರ ಪ್ರಕಾರ ಯಾರು ಗೆಲ್ಲುತ್ತಾರೆ ಎಂಬುದು ಒಂದಾದರೆ, ಆದರೆ ಮನೆಯವರ ಲೆಕ್ಕಾಚಾರವೇ ಬೇರೆ. ಈ ಪ್ರಶ್ನೆಯನ್ನು ಸುದೀಪ್​ ಅವರು ಸ್ವತಃ ಸ್ಪರ್ಧಿಗಳಿಗೆ ಕೇಳಿದ್ದಾರೆ. ಆಗ ಎಲ್ಲರಿಂದಲೂ ಬೇರೆ ಬೇರೆ ಉತ್ತರ ಬಂದಿದೆ. ಅಚ್ಚರಿ ಏನೆಂದರೆ, ವಿನ್ನರ್​ ಯಾರಾಗಬಹುದು ಎಂಬ ಪ್ರಶ್ನೆಗೆ ಸಂಗೀತಾ ಶೃಂಗೇರಿ (Sangeetha Sringeri) ಮತ್ತು ಕಾರ್ತಿಕ್​ ಮಹೇಶ್​ (Karthik Mahesh) ಅವರು ನೀಡಿದ ಉತ್ತರ ಶಾಕಿಂಗ್​ ಆಗಿತ್ತು.

ಸಂಗೀತಾ ಪ್ರಕಾರ ಬಿಗ್​ ಬಾಸ್​ ಗೆಲ್ಲುವ ಸಾಧ್ಯತೆ ಇರುವ ಮೊದಲ ಸ್ಪರ್ಧಿ ತುಕಾಲಿ ಸಂತೋಷ್​. ಎರಡನೇ ಸ್ಪರ್ಧಿ ನಮ್ರತಾ ಗೌಡ. ಮೂರನೇ ಸ್ಪರ್ಧಿ ವಿನಯ್​ ಗೌಡ. ಈ ಪಟ್ಟಿಯಲ್ಲಿ ಕಾರ್ತಿಕ್​ ಹೆಸರು ಇಲ್ಲ! ಅದೇ ರೀತಿ ಕಾರ್ತಿಕ್​ ಕೂಡ ಸಂಗೀತಾ ಹೆಸರನ್ನು ಹೇಳಿಲ್ಲ. ಕಾರ್ತಿಕ್​ ಪ್ರಕಾರ ಬಿಗ್​ ಬಾಸ್​ ಗೆಲ್ಲುವ ಸಾಮರ್ಥ್ಯ ಇರುವ ಮೊದಲ ಸ್ಪರ್ಧಿ ವಿನಯ್​ ಗೌಡ, ಎರಡನೇ ಸ್ಪರ್ಧಿ ತನಿಷಾ ಕುಪ್ಪಂಡ, ಮೂರನೇ ಸ್ಪರ್ಧಿ ನಮ್ರತಾ ಗೌಡ.

ಆರಂಭದಲ್ಲಿ ಸಂಗೀತಾ ಶೃಂಗೇರಿ ಮತ್ತು ಕಾರ್ತಿಕ್​ ಮಹೇಶ್​ ನಡುವೆ ಒಳ್ಳೆಯ ಸ್ನೇಹ ಇತ್ತು. ಅವರ ಜೋಡಿಯನ್ನು ಅಭಿಮಾನಿಗಳು ಕೂಡ ಮೆಚ್ಚಿಕೊಂಡಿದ್ದರು. ಪ್ರತಿ ಟಾಸ್ಕ್​ನಲ್ಲೂ ಒಬ್ಬರಿಗೊಬ್ಬರು ಬೆಂಬಲ ನೀಡುತ್ತಿದ್ದರು. ಆದರೆ ನಂತರ ಎಲ್ಲವೂ ಬದಲಾಯಿತು. ಅವರಿಬ್ಬರ ನಡುವೆ ಬಿರುಕು ಮೂಡಿತು. ವಿರೋಧಿಗಳ ರೀತಿಯಲ್ಲಿ ವರ್ತಿಸಲು ಆರಂಭಿಸಿದರು.

ಇದನ್ನೂ ಓದಿ: ಸಂಗೀತಾ ಕ್ಯಾಪ್ಟನ್ ಆಗಬೇಕು ಎಂದ ವಿನಯ್ ಪತ್ನಿ

ಕಾರ್ತಿಕ್​ ಮಹೇಶ್​ ಬದಲಿಗೆ ಡ್ರೋನ್​ ಪ್ರತಾಪ್​ ಜೊತೆ ಈಗ ಸಂಗೀತಾ ಶೃಂಗೇರಿ ಹೆಚ್ಚು ಕ್ಲೋಸ್​ ಆಗಿದ್ದಾರೆ. ಕಾರ್ತಿಕ್​ ಅವರು ನಮ್ರತಾ ಗೌಡ ಮತ್ತು ವಿನಯ್​ ಗೌಡ ಜೊತೆ ಸ್ನೇಹ ಬೆಳೆಸಿದ್ದಾರೆ. ಸದ್ಯಕ್ಕೆ ಬಿಗ್​ ಬಾಸ್​ ಮನೆಯಲ್ಲಿ 84 ದಿನಗಳು ಕಳೆದಿವೆ. ವಿನಯ್​ ಗೌಡ, ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ತುಕಾಲಿ ಸಂತೋಷ್​ ಅವರು ಸ್ಟ್ರಾಂಗ್​ ಸ್ಪರ್ಧಿಗಳಾಗಿ ಗುರುತಿಸಿಕೊಂಡಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಈ ಶೋ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಉಚಿತವಾಗಿ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!