Prabhu Deva: ‘ವೀಕೆಂಡ್ ವಿತ್ ರಮೇಶ್’ ವೇದಿಕೆ ಮೇಲೆ ಪ್ರಭುದೇವ ಮೂನ್​ವಾಕ್​; ವೀಕ್ಷಕರು ಏನಂದ್ರು?

Weekend With Ramesh: ಕಳೆದ ವಾರ ರಮ್ಯಾ ದಿವ್ಯಾ ಸ್ಪಂದನ ಅವರು ಆಗಮಿಸಿದ್ದರು. ಈ ವಾರ ಪ್ರಭುದೇವ ಅವರು ಆಗಮಿಸಲಿದ್ದಾರೆ. ಈ ಎಪಿಸೋಡ್​ನ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು, ವೀಕೆಂಡ್​ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.

Prabhu Deva: ‘ವೀಕೆಂಡ್ ವಿತ್ ರಮೇಶ್’ ವೇದಿಕೆ ಮೇಲೆ ಪ್ರಭುದೇವ ಮೂನ್​ವಾಕ್​; ವೀಕ್ಷಕರು ಏನಂದ್ರು?
ಪ್ರಭುದೇವ
Follow us
|

Updated on:Mar 29, 2023 | 2:49 PM

ನಟ ಪ್ರಭುದೇವ (Prabhu Deva) ಅವರು ಡ್ಯಾನ್ಸರ್, ಕೊರಿಯೋಗ್ರಾಫರ್​, ನಿರ್ಮಾಪಕ, ನಟ,  ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರನ್ನು ಅನೇಕರು ಭಾರತದ ಮೈಕಲ್​ ಜಾಕ್ಸನ್ ಎಂದು ಕರೆಯುತ್ತಾರೆ. ‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ರ (Weekend With Ramesh Season 5) ಎರಡನೇ ಅತಿಥಿಯಾಗಿ ಪ್ರಭುದೇವ ಆಗಮಿಸಿದ್ದಾರೆ. ಈ ಕಾರ್ಯಕ್ರಮದ ಪ್ರೋಮೋವನ್ನು ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದರಲ್ಲಿ ಪ್ರಭುದೇವ ಮೂನ್ ವಾಕ್ ಮಾಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಬಂದಿದೆ. ಕೆಲವರು ನೆಗೆಟಿವ್ ಕಮೆಂಟ್ ಮಾಡಿದ್ದಾರೆ.

‘ವೀಕೆಂಡ್ ವಿತ್​ ರಮೇಶ್’ ಎಪಿಸೋಡ್ ಅನೇಕ ಸಾಧಕರಿಗೆ ವೇದಿಕೆ ಆಗಿದೆ. ಅನೇಕರ ಸಾಧನೆಯನ್ನು, ಅದರ ಹಿಂದಿನ ಶ್ರಮವನ್ನು ಈ ಶೋ ಮೂಲಕ ಪ್ರೇಕ್ಷಕರ ಮುಂದಿಡುವ ಕಾರ್ಯ ಆಗುತ್ತಿದೆ. ಕಳೆದ ವಾರ ರಮ್ಯಾ ದಿವ್ಯಾ ಸ್ಪಂದನ ಅವರು ಆಗಮಿಸಿದ್ದರು. ಈ ವಾರ ಪ್ರಭುದೇವ ಅವರು ಆಗಮಿಸಲಿದ್ದಾರೆ. ಈ ಎಪಿಸೋಡ್​ನ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು, ವೀಕೆಂಡ್​ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.

View this post on Instagram

A post shared by Zee Kannada (@zeekannada)

‘ಸಾಧಕರ ಕುರ್ಚಿಯಲ್ಲಿ ಮೋಡಿ ಮಾಡೋಕೆ ಈ ವೀಕೆಂಡ್ ಬರ್ತಿದ್ದಾರೆ ಭಾರತದ ಮೈಕೆಲ್ ಜಾಕ್ಸನ್. ವೀಕೆಂಡ್ ವಿತ್ ರಮೇಶ್-5.  ಶನಿ-ಭಾನು ರಾತ್ರಿ 9ಕ್ಕೆ’ ಎಂದು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡು ಕ್ಯಾಪ್ಶನ್ ನೀಡಿದೆ.

ಪ್ರಭುದೇವ ಹಿನ್ನೆಲೆ

ಪ್ರಭುದೇವ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಡ್ಯಾನ್ಸರ್ ಆಗಿ. 1986ರಲ್ಲಿ ರಿಲೀಸ್ ಆದ ‘ಮೌನ ರಾಗಂ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ, ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಕೊರಿಯೋಗ್ರಾಫರ್ ಆಗಿ ಅವರು ಮಿಂಚಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ಪ್ರಭುದೇವ ಹೆಜ್ಜೆ ಹಾಕಿದ್ದರು. ಈ ನೆನಪನ್ನು ಅವರು ತೆರೆದಿಡೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ವೀಕೆಂಡ್​ ವಿತ್​ ರಮೇಶ್’ ಜರ್ನಿ ಹೇಗಿತ್ತು? ವಿಡಿಯೋ ಮೂಲಕ 84 ಸಾಧಕರ ನೆನಪಿಸಿಕೊಂಡ ವಾಹಿನಿ

ಸಲ್ಮಾನ್ ಖಾನ್ ಜೊತೆ ಪ್ರಭುದೇವ ಅವರಿಗೆ ಒಳ್ಳೆಯ ಬಾಂಧವ್ಯ ಇದೆ. ಸಲ್ಲು ನಟನೆಯ ‘ವಾಂಟೆಡ್​’, ‘ದಬಾಂಗ್ 3’, ‘ರಾಧೆ’ ಮೊದಲಾದ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ‘ರೌಡಿ ರಾಥೋಡ್’ ಮೊದಲಾದ ಚಿತ್ರಗಳಿಗೆ ಇವರ ನಿರ್ದೇಶನ ಇದೆ. ‘ದೇವಿ’ ಮೊದಲಾದ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ಇಷ್ಟೇ ಅಲ್ಲದೆ ಗಾಯಕನಾಗಿ, ಗೀತಸಾಹಿತಿ ಆಗಿಯೂ ಅವರು ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:46 pm, Wed, 29 March 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ