ಫಿನಾಲೆ ಹಿಂದಿನ ವಾರದಲ್ಲಿ ಪ್ರಶಾಂತ್​ ಕಮ್​ಬ್ಯಾಕ್​; ಮಂಜು, ಅರವಿಂದ್​ ಹಿಂದಿಕ್ಕಿದ ಸಂಬರಗಿ

ಮನೆಯಲ್ಲಿ ಗುಂಪುಗಾರಿಕೆ ಇದೆ, ಅನ್ಯಾಯ ಇದೆ ಎಂದೆಲ್ಲ ಧ್ವನಿ ಎತ್ತಿದವರು ಪ್ರಶಾಂತ್​. ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರಿಂದ ಅವರಿಗೆ ಮನೆಯಲ್ಲಿ ಕೆಲವರು ಹೆದರಿದ್ದೂ ಇದೆ.

ಫಿನಾಲೆ ಹಿಂದಿನ ವಾರದಲ್ಲಿ ಪ್ರಶಾಂತ್​ ಕಮ್​ಬ್ಯಾಕ್​; ಮಂಜು, ಅರವಿಂದ್​ ಹಿಂದಿಕ್ಕಿದ ಸಂಬರಗಿ
ಅರವಿಂದ್​-ಪ್ರಶಾಂತ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 31, 2021 | 3:33 PM

ಬಿಗ್​ ಬಾಸ್​ ಮನೆ ಸೇರಿದ ನಂತರದಲ್ಲಿ ಪ್ರಶಾಂತ್​ ಸಂಬರಗಿ ಖ್ಯಾತಿ ತುಂಬಾನೇ ಹೆಚ್ಚಿದೆ. ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡಿದ ಅವರು, ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ಗುರುತಿಸಿಕೊಂಡರು. ಫಿನಾಲೆ ಸಮೀಪಿಸುತ್ತಿದ್ದಂತೆ ಪ್ರಶಾಂತ್ ಕಮ್​ಬ್ಯಾಕ್​ ಮಾಡಿದ್ದಾರೆ. ಅವರ ಆಟ ನೋಡಿ ನಿಜಕ್ಕೂ ವೀಕ್ಷಕರು ಅಚ್ಚರಿಗೊಂಡಿದ್ದಾರೆ.

ಮನೆಯಲ್ಲಿ ಗುಂಪುಗಾರಿಕೆ ಇದೆ, ಅನ್ಯಾಯ ಇದೆ ಎಂದೆಲ್ಲ ಧ್ವನಿ ಎತ್ತಿದವರು ಪ್ರಶಾಂತ್​. ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರಿಂದ ಅವರಿಗೆ ಮನೆಯಲ್ಲಿ ಕೆಲವರು ಹೆದರಿದ್ದೂ ಇದೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟ ಚಕ್ರವರ್ತಿ ಚಂದ್ರಚೂಡ್ ಜತೆ ಸೇರಿದ ನಂತರದಲ್ಲಿ ಪ್ರಶಾಂತ್​ ಸಂಬರಗಿ ಯೋಚನಾ ಲಹರಿ ಬದಲಾಯಿತು. ಸದಾ ಮನೆಯವರ ಬಗ್ಗೆ ಮಾತನಾಡಿಕೊಂಡು ಇಬ್ಬರೂ ಕಾಲ ಕಳೆಯುತ್ತಿದ್ದರು.

ಪ್ರಶಾಂತ್​ ಸಂಬರಗಿ ಮುಂದೊಂದು ಮಾತನಾಡುತ್ತಾರೆ, ಹಿಂದೊಂದು ರೀತಿ ನಡೆದುಕೊಳ್ಳುತ್ತಾರೆ ಅನ್ನೋದು ಎಲ್ಲರ ಆರೋಪವಾಗಿತ್ತು. ಈ ಬಗ್ಗೆ ಸುದೀಪ್​ ಅವರಿಂದಲೂ ಪ್ರಶಾಂತ್​ ಕಿವಿಮಾತು ಹೇಳಿಸಿಕೊಂಡಿದ್ದಾರೆ. ನಂತರದಲ್ಲಿ ಪ್ರಶಾಂತ್​ ಕೊಂಚ ಬದಲಾಗಿದ್ದಾರೆ. ಈ ವಾರ ಅವರ ಪ್ರದರ್ಶನ ಅದ್ಭುತವಾಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ಈ ವಾರ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಯಿತು. ಪ್ರಶಾಂತ್​ ಎಲ್ಲರಿಗೂ ಟಫ್​ ಕಾಂಪಿಟೇಷನ್​ ನೀಡಿದರು. ಕಳೆದ ವಾರದ ಟಾಸ್ಕ್​ನಲ್ಲಿ ಪ್ರಶಾಂತ್​ ಸಾಕಷ್ಟು ಬಾರಿ ಎಡವಿದ್ದರು. ಇದಕ್ಕೆ ಅವರು ದೇಹ ಸಹಕರಿಸುತ್ತಿಲ್ಲ ಎನ್ನುವ ಕಾರಣ ನೀಡಿದ್ದರು. ಆದರೆ, ಈ ಬಾರಿ ಅವರು ದೊಡ್ಡ ಮಟ್ಟದಲ್ಲಿ ಕಮ್​ಬ್ಯಾಕ್​ ಮಾಡಿದ್ದಾರೆ.

ಪ್ರತಿ ವಾರ ಅತ್ಯುತ್ತಮ ಹಾಗೂ ಕಳಪೆ ಯಾರು ಎಂಬುದನ್ನು ಸ್ಪರ್ಧಿಗಳು ನಿರ್ಧರಿಸುತ್ತಾರೆ. ಈ ವೇಳೆ ಪ್ರಶಾಂತ್​ ಅವರಿಗೆ ಅತ್ಯುತ್ತಮ ಕಿರೀಟ ಸಿಕ್ಕಿದೆ. ಅಚ್ಚರಿ ಎಂದರೆ, ಕಳೆದ ವಾರ ಟಾಸ್ಕ್​ ಅತ್ಯುತ್ತಮವಾಗಿ ಆಡಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ಕಳಪೆ ನೀಡಲಾಗಿತ್ತು. ಅದರ ಮರುವಾರವೇ ಟಾಸ್ಕ್​ಗಳನ್ನು ಅತ್ಯುತ್ತಮವಾಗಿ ಆಡಿ ಪ್ರಶಾಂತ್​ ಅತ್ಯುತ್ತಮ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಕೊನೆಯ ವಾರದಲ್ಲಿ ಮಂಜು ಪಾವಗಡ ಹಾಗೂ ಅರವಿಂದ್ ಅವರನ್ನೂ ಪ್ರಶಾಂತ್​ ಹಿಂದಿಕ್ಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿದ್ದಾರೆ. ಆಗಸ್ಟ್​ 8ರಂದು ಫಿನಾಲೆ ನಡೆಯುತ್ತಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ