AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟ್ಟಲ್ಲಿ ರಾಕೇಶ್ ಅಡಿಗ ಕಾಲರ್ ಹಿಡಿದ ಪ್ರಶಾಂತ್ ಸಂಬರ್ಗಿ; ಮನೆಯವರಿಗೆ ಹೆಚ್ಚಿತು ಟೆನ್ಷನ್

ಈ ಐಡಿಯಾ ಬಂದಿದ್ದೇ ಬಾಯಲ್ಲಿ ಪೇಸ್ಟ್ ಹಾಕಿಕೊಂಡ ರಾಕೇಶ್ ಅವರು ಗಾರ್ಡನ್ ಏರಿಯಾಗೆ ಬಂದು ಬಿದ್ದರು. ಪಿಡ್ಸ್ ಬಂದ ರೀತಿಯಲ್ಲಿ ಒದ್ದಾಡಿದರು.

ಸಿಟ್ಟಲ್ಲಿ ರಾಕೇಶ್ ಅಡಿಗ ಕಾಲರ್ ಹಿಡಿದ ಪ್ರಶಾಂತ್ ಸಂಬರ್ಗಿ; ಮನೆಯವರಿಗೆ ಹೆಚ್ಚಿತು ಟೆನ್ಷನ್
ಪ್ರಶಾಂತ್​-ರಾಕೇಶ್
TV9 Web
| Edited By: |

Updated on: Oct 02, 2022 | 6:30 AM

Share

ಪ್ರಶಾಂತ್ ಸಂಬರ್ಗಿ (Prashanth Sambargi) ಅವರು ‘ಬಿಗ್ ಬಾಸ್’ ಮನೆಗೆ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ಸೀಸನ್​ನಲ್ಲಿ ಅವರು ಹೋರಾಟ ವಿಚಾರ ಪ್ರಸ್ತಾಪಿಸಿ ಹಾಗೂ ಏರು ಧ್ವನಿಯಲ್ಲಿ ಮಾತನಾಡಿ ಹೈಲೈಟ್ ಆಗಿದ್ದರು. ಈ ಬಾರಿ ಅವರು ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ದೊಡ್ಮನೆಯಲ್ಲಿ ಕೋಪ ಕಡಿಮೆ ಮಾಡಿಕೊಳ್ತೀನಿ ಎಂದು ಹೇಳಿದ್ದರು. ಆದರೆ, ಅದು ಆಗಿಲ್ಲ. ಈ ವಾರವೂ ಅವರು ಸಿಟ್ಟು ಮಾಡಿಕೊಳ್ಳುತ್ತಿದಾರೆ. ಮೊದಲ ವಾರದಲ್ಲೇ ಅವರು ರಾಕೇಶ್ ಅಡಿಗ (Rakesh Adiga) ಕಾಲರ್ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಮನೆಯ ವಾತಾವರಣ ತುಂಬಾನೇ ಹೀಟ್ ಆಗಿತ್ತು.

ರಾಕೇಶ್ ಅಡಿಗ ಹಾಗೂ ಅನುಪಮಾ ಗೌಡ ಅವರು ಜೈಲಿನ ಸಮೀಪ ಇದ್ದರು. ಎಲ್ಲರನ್ನೂ ಪ್ರ್ಯಾಂಕ್ ಮಾಡುವ ನಿರ್ಧಾರಕ್ಕೆ ಅನುಪಮಾ ಹಾಗೂ ರಾಕೇಶ್ ಬಂದರು. ಈ ಐಡಿಯಾ ಬಂದಿದ್ದೇ ಬಾಯಲ್ಲಿ ಪೇಸ್ಟ್ ಹಾಕಿಕೊಂಡ ರಾಕೇಶ್ ಅವರು ಗಾರ್ಡನ್ ಏರಿಯಾಗೆ ಬಂದು ಬಿದ್ದರು. ಪಿಡ್ಸ್ ಬಂದ ರೀತಿಯಲ್ಲಿ ಒದ್ದಾಡಿದರು. ಅಮೂಲ್ಯ ಗೌಡ ಅವರು ನಗುತ್ತಲೇ ಜೋರಾಗಿ ಕೂಗಿ ಮನೆ ಮಂದಿಯನ್ನು ಕರೆದರು.

‘ರಾಕೇಶ್ ಬಿದ್ದಿದ್ದಾರೆ. ಕಬ್ಬಿಣ ಹಿಡಿದುಕೊಂಡು ಬನ್ನಿ ಪ್ಲೀಸ್​’ ಎಂದು ಕರೆದರು. ಮನೆ ಮಂದಿಯೆಲ್ಲ ಆತಂಕದಿಂದ ಓಡಿ ಬಂದರು. ಪ್ರಶಾಂತ್ ಸಂಬರ್ಗಿ ಅವರಂತೂ ಸಾಕಷ್ಟು ಆತಂಕಗೊಂಡರು. ಮನೆಯಲ್ಲಿ ಆತಂಕದ ವಾತಾವರಣ ಹೆಚ್ಚುತ್ತಿದ್ದಂತೆ ‘ಇದು ಪ್ರ್ಯಾಂಕ್’ ಎಂದು ನಕ್ಕಿದ್ದಾರೆ ರಾಕೇಶ್. ಇದನ್ನು ನೋಡಿ ಪ್ರಶಾಂತ್ ಸಂಬರ್ಗಿಗೆ ಸಿಟ್ಟು ಬಂದಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ಇದನ್ನೂ ಓದಿ: ‘ಕನ್ನಡ ಹೋರಾಟದ ವಿಚಾರ ಬಂದ್ರೆ ಸಂಬರ್ಗಿ ಉರ್ಕೋತಾರೆ’; ಪ್ರಶಾಂತ್-ರೂಪೇಶ್ ರಾಜಣ್ಣ ಮಧ್ಯೆ ನಡೆಯಿತು ಘೋರ ಜಗಳ

ರಾಕೇಶ್ ಕಾಲರ್ ಹಿಡಿದ ಪ್ರಶಾಂತ್ ಸಂಬರ್ಗಿ ‘ರಾಕೇಶ್ ಇದು ಸರಿ ಅಲ್ಲ. ಈ ರೀತಿ ಮಾಡೋದ್ರಿಂದ ನೀವು ಆ ರೋಗಕ್ಕೆ, ಆ ರೋಗ ಬಂದವರಿಗೆ ಅವಮಾನ ಮಾಡಿದ್ದೀರಿ. ನನ್ನ ಮಗನಿಗೂ ಇದೇ ರೀತಿಯ ಕಾಯಿಲೆ ಇತ್ತು. ಆತ ನಿಂತಲ್ಲೇ ನಿಂತು ಬಿಡುತ್ತಿದ್ದ. ಚಿಕಿತ್ಸೆ ಕೊಡಿಸಿ ಕೊಡಿಸಿ ಆತನಿಗೆ ಕಾಯಿಲೆ ಈಗ ಗುಣಮುಖ ಆಗಿದೆ. ನನ್ನ ಮಗನೇ ನನಗೆ ನೆನಪಿಗೆ ಬಂದ’ ಎಂದು ಪ್ರಶಾಂತ್ ಸಂಬರ್ಗಿ ಕಣ್ಣೀರು ಹಾಕಿದರು. ಈ ಪ್ರ್ಯಾಂಕ್​ನಲ್ಲಿ ಭಾಗಿ ಆದ ಅನೇಕರು ಪ್ರಶಾಂತ್ ಬಳಿ ಕ್ಷಮೆ ಕೇಳಿದರು. ಪ್ರಶಾಂತ್ ಸಂಬರ್ಗಿ ಅವರು ರಾಕೇಶ ಕಾಲರ್ ಹಿಡಿದಾಗ ಒಂದಷ್ಟು ಮಂದಿಗೆ ಆತಂಕ ಆಯಿತು.

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ