AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿದ ವಿರೋಧ: ಕನ್ನಡ ಹೋರಾಟಗಾರರ ಬಳಿ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ವಾದಕ್ಕೆ ಇಳಿದಿದ್ದರು.

ಹೆಚ್ಚಿದ ವಿರೋಧ: ಕನ್ನಡ ಹೋರಾಟಗಾರರ ಬಳಿ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ
ಪ್ರಶಾಂತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 04, 2022 | 9:14 PM

Share

ಪ್ರಶಾಂತ್ ಸಂಬರ್ಗಿ (Prashanth Sambargi)  ಅವರು ಬಿಗ್ ಬಾಸ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಕೆಲವೊಮ್ಮೆ ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುವುದಿಲ್ಲ. ಮಾತನಾಡುವ ರಭಸದಲ್ಲಿ ಬಾಯಿಗೆ ಬಂದಂತೆ ಅವರು ಮಾತನಾಡಿದ ಉದಾಹರಣೆ ಸಾಕಷ್ಟು ಇದೆ. ಕನ್ನಡ ಹೋರಾಟಗಾರರನ್ನು ಕಂಡರೆ ಪ್ರಶಾಂತ್​ಗೆ ಆಗುವುದಿಲ್ಲ ಎಂದು ರೂಪೇಶ್ ರಾಜಣ್ಣ (Roopesh Rajanna) ಅವರು ಈ ಮೊದಲು ಆರೋಪ ಮಾಡಿದ್ದರು. ಈಗ ಬಿಗ್​ ಬಾಸ್​ನಲ್ಲಿ ಪ್ರಶಾಂತ್ ಅವರು ಕನ್ನಡ ಪರ ಹೋರಾಟಗಾರರಿಗೆ ಅವಮಾನ ಮಾಡಿದ್ದರು. ಈ ಸಂಬಂಧ ಪ್ರತಿಭಟನೆಗಳು ಕೂಡ ನಡೆದಿದ್ದವು. ಈಗ ಬಿಗ್ ಬಾಸ್ ಮನೆಯಿಂದ ಪ್ರಶಾಂತ್ ಸಂಬರ್ಗಿ ಅವರು ಕ್ಷಮೆ ಕೇಳಿದ್ದಾರೆ.

ಪ್ರಶಾಂತ್ ಸಂಬರ್ಗಿ ಅವರಿಂದ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಜಗಳಗಳು ನಡೆದಿವೆ. ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ಜತೆ ಪ್ರಶಾಂತ್ ಪದೇಪದೇ ಜಗಳಕ್ಕೆ ಇಳಿಯುತ್ತಿದ್ದಾರೆ. ರೂಪೇಶ್ ರಾಜಣ್ಣ ವಿರುದ್ಧ ಕೂಗಾಡುವಾಗ ಅವರು ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು.

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ವಾದಕ್ಕೆ ಇಳಿದಿದ್ದರು. ಈಗ ಕನ್ನಡ ಹೋರಾಟಗಾರರ ಬಳಿ ಪ್ರಶಾಂತ್ ಸಂಬರ್ಗಿ ಕ್ಷಮೆ ಕೇಳಿದ್ದಾರೆ.

ಪ್ರಶಾಂತ್ ಸಂಬರ್ಗಿ ಅವರನ್ನು ಬಿಗ್ ಬಾಸ್ ಕನ್ಫೆಷನ್ ರೂಂಗೆ ಕರೆಸಲಾಯಿತು. ಅಲ್ಲಿ ಪ್ರಶಾಂತ್ ಮಾಡಿದ ತಪ್ಪನ್ನು ಹೇಳಲಾಯಿತು. ಈ ಬಗ್ಗೆ ಮಾತನಾಡಿದ ಪ್ರಶಾಂತ್ ಸಂಬರ್ಗಿ, ‘ನಾನು ಆಟದ ರಭಸದಲ್ಲಿ ಹೇಳಿದ್ದೇನೆ. ಕನ್ನಡ ಪ್ರೀತಿ ಮಾಡುವವರು, ಕನ್ನಡ ಹೋರಾಟಗಾರರಿಗೆ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ. ಇದು ಒಬ್ಬರ ವಿರುದ್ಧ ಮಾಡಿದ ಆರೋಪ. ನಾನು ಆ ರೀತಿ ಉದ್ದೇಶ ಇರಲಿಲ್ಲ. ನಾನು ಮಾತನ್ನು ಹಿಂಪಡೆಯುತ್ತೇನೆ’ ಎನ್ನುತ್ತ ಪ್ರಶಾಂತ್ ಸಂಬರ್ಗಿ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: ಸಂಬಂಧ ಇಲ್ಲದಿರುವ ಜಗಳಕ್ಕೆ ತಲೆ ಹಾಕಿದ ಪ್ರಶಾಂತ್ ಸಂಬರ್ಗಿ; ಮುಂದೇನಾಯ್ತು?  

ಪ್ರಶಾಂತ್ ಸಂಬರ್ಗಿ ಅವರು ಕ್ಷಮೆ ಕೇಳಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಕಲರ್ಸ್ ಕನ್ನಡ ಪೋಸ್ಟ್ ಮಾಡಿದೆ.  ಈ ವಿಡಿಯೋಗೆ ವಿವಿಧ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಅನೇಕರು ಪ್ರಶಾಂತ್ ಸಂಬರ್ಗಿ ಅವರು ಕೇಳಿದ ಕ್ಷಮೆಯನ್ನು ಒಪ್ಪಿದ್ದಾರೆ. ಇನ್ನೂ ಕೆಲವರು ಪ್ರಶಾಂತ್ ಸಂಬರ್ಗಿ ಅವರನ್ನು ಮನೆಯಿಂದ ಹೊರಗೆ ಕಳುಹಿಸಬೇಕು ಎಂಬುದನ್ನು ಮುಂದುವರಿಸಿದ್ದಾರೆ.

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್