AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿದ ವಿರೋಧ: ಕನ್ನಡ ಹೋರಾಟಗಾರರ ಬಳಿ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ವಾದಕ್ಕೆ ಇಳಿದಿದ್ದರು.

ಹೆಚ್ಚಿದ ವಿರೋಧ: ಕನ್ನಡ ಹೋರಾಟಗಾರರ ಬಳಿ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ
ಪ್ರಶಾಂತ್
TV9 Web
| Edited By: |

Updated on: Nov 04, 2022 | 9:14 PM

Share

ಪ್ರಶಾಂತ್ ಸಂಬರ್ಗಿ (Prashanth Sambargi)  ಅವರು ಬಿಗ್ ಬಾಸ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಕೆಲವೊಮ್ಮೆ ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುವುದಿಲ್ಲ. ಮಾತನಾಡುವ ರಭಸದಲ್ಲಿ ಬಾಯಿಗೆ ಬಂದಂತೆ ಅವರು ಮಾತನಾಡಿದ ಉದಾಹರಣೆ ಸಾಕಷ್ಟು ಇದೆ. ಕನ್ನಡ ಹೋರಾಟಗಾರರನ್ನು ಕಂಡರೆ ಪ್ರಶಾಂತ್​ಗೆ ಆಗುವುದಿಲ್ಲ ಎಂದು ರೂಪೇಶ್ ರಾಜಣ್ಣ (Roopesh Rajanna) ಅವರು ಈ ಮೊದಲು ಆರೋಪ ಮಾಡಿದ್ದರು. ಈಗ ಬಿಗ್​ ಬಾಸ್​ನಲ್ಲಿ ಪ್ರಶಾಂತ್ ಅವರು ಕನ್ನಡ ಪರ ಹೋರಾಟಗಾರರಿಗೆ ಅವಮಾನ ಮಾಡಿದ್ದರು. ಈ ಸಂಬಂಧ ಪ್ರತಿಭಟನೆಗಳು ಕೂಡ ನಡೆದಿದ್ದವು. ಈಗ ಬಿಗ್ ಬಾಸ್ ಮನೆಯಿಂದ ಪ್ರಶಾಂತ್ ಸಂಬರ್ಗಿ ಅವರು ಕ್ಷಮೆ ಕೇಳಿದ್ದಾರೆ.

ಪ್ರಶಾಂತ್ ಸಂಬರ್ಗಿ ಅವರಿಂದ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಜಗಳಗಳು ನಡೆದಿವೆ. ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ಜತೆ ಪ್ರಶಾಂತ್ ಪದೇಪದೇ ಜಗಳಕ್ಕೆ ಇಳಿಯುತ್ತಿದ್ದಾರೆ. ರೂಪೇಶ್ ರಾಜಣ್ಣ ವಿರುದ್ಧ ಕೂಗಾಡುವಾಗ ಅವರು ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು.

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ವಾದಕ್ಕೆ ಇಳಿದಿದ್ದರು. ಈಗ ಕನ್ನಡ ಹೋರಾಟಗಾರರ ಬಳಿ ಪ್ರಶಾಂತ್ ಸಂಬರ್ಗಿ ಕ್ಷಮೆ ಕೇಳಿದ್ದಾರೆ.

ಪ್ರಶಾಂತ್ ಸಂಬರ್ಗಿ ಅವರನ್ನು ಬಿಗ್ ಬಾಸ್ ಕನ್ಫೆಷನ್ ರೂಂಗೆ ಕರೆಸಲಾಯಿತು. ಅಲ್ಲಿ ಪ್ರಶಾಂತ್ ಮಾಡಿದ ತಪ್ಪನ್ನು ಹೇಳಲಾಯಿತು. ಈ ಬಗ್ಗೆ ಮಾತನಾಡಿದ ಪ್ರಶಾಂತ್ ಸಂಬರ್ಗಿ, ‘ನಾನು ಆಟದ ರಭಸದಲ್ಲಿ ಹೇಳಿದ್ದೇನೆ. ಕನ್ನಡ ಪ್ರೀತಿ ಮಾಡುವವರು, ಕನ್ನಡ ಹೋರಾಟಗಾರರಿಗೆ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ. ಇದು ಒಬ್ಬರ ವಿರುದ್ಧ ಮಾಡಿದ ಆರೋಪ. ನಾನು ಆ ರೀತಿ ಉದ್ದೇಶ ಇರಲಿಲ್ಲ. ನಾನು ಮಾತನ್ನು ಹಿಂಪಡೆಯುತ್ತೇನೆ’ ಎನ್ನುತ್ತ ಪ್ರಶಾಂತ್ ಸಂಬರ್ಗಿ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: ಸಂಬಂಧ ಇಲ್ಲದಿರುವ ಜಗಳಕ್ಕೆ ತಲೆ ಹಾಕಿದ ಪ್ರಶಾಂತ್ ಸಂಬರ್ಗಿ; ಮುಂದೇನಾಯ್ತು?  

ಪ್ರಶಾಂತ್ ಸಂಬರ್ಗಿ ಅವರು ಕ್ಷಮೆ ಕೇಳಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಕಲರ್ಸ್ ಕನ್ನಡ ಪೋಸ್ಟ್ ಮಾಡಿದೆ.  ಈ ವಿಡಿಯೋಗೆ ವಿವಿಧ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಅನೇಕರು ಪ್ರಶಾಂತ್ ಸಂಬರ್ಗಿ ಅವರು ಕೇಳಿದ ಕ್ಷಮೆಯನ್ನು ಒಪ್ಪಿದ್ದಾರೆ. ಇನ್ನೂ ಕೆಲವರು ಪ್ರಶಾಂತ್ ಸಂಬರ್ಗಿ ಅವರನ್ನು ಮನೆಯಿಂದ ಹೊರಗೆ ಕಳುಹಿಸಬೇಕು ಎಂಬುದನ್ನು ಮುಂದುವರಿಸಿದ್ದಾರೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್