AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಫೈಟ್​; ಕೂಗಾಡಿದ ಪ್ರಶಾಂತ್​ ಸಂಬರ್ಗಿ

Prashanth Sambargi: ಪ್ರಶಾಂತ್​ ಸಂಬರ್ಗಿ ಸವಾಲು ಹಾಕಿದ್ದಾರೆ. ಅವರಿಗೆ ತಿರುಗೇಟು ನೀಡಲು ಆರ್ಯವರ್ಧನ್​ ಗುರೂಜಿ ಸಜ್ಜಾಗಿದ್ದಾರೆ. ಸಂಬರ್ಗಿ ವರ್ತನೆಯನ್ನು ಮನೆಯ ಇತರೆ ಸದಸ್ಯರು ಖಂಡಿಸಿದ್ದಾರೆ. 

BBK9: ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಫೈಟ್​; ಕೂಗಾಡಿದ ಪ್ರಶಾಂತ್​ ಸಂಬರ್ಗಿ
ಪ್ರಶಾಂತ್​ ಸಂಬರ್ಗಿ, ಆರ್ಯವರ್ಧನ್​ ಗುರೂಜಿ, ದರ್ಶ್​
TV9 Web
| Edited By: |

Updated on: Sep 25, 2022 | 3:48 PM

Share

ಪ್ರಶಾಂತ್​ ಸಂಬರಗಿ (Prashanth Sambargi) ಇದ್ದಲ್ಲಿ ಜಗಳ ಖಚಿತ. ಎಲ್ಲರ ಜೊತೆಗೂ ಅವರು ಕಿರಿಕ್​ ಮಾಡಿಕೊಳ್ಳುತ್ತಾರೆ. ಕಳೆದ ಸೀಸನ್​ನಲ್ಲಿ ಅವರು ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ಅನೇಕರ ಜತೆ ಜಗಳ ಮಾಡಿಕೊಂಡಿದ್ದರು. ಈಗ ಅವರು ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ (Bigg Boss Kannada Season 9) ಸ್ಪರ್ಧಿಯಾಗಿ ಮತ್ತೆ ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಆರಂಭದಲ್ಲಿಯೇ ಅವರು ತಮ್ಮ ವರಸೆ ತೋರಿಸಿದ್ದಾರೆ. ಅದರಿಂದಾಗಿ ಪ್ರಶಾಂತ್​ ಸಂಬರ್ಗಿ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಉಂಟಾಗಿದೆ. ಆರ್ಯವರ್ಧನ್​ ಗುರೂಜಿ (Aryavardhan Guruji) ವಿಚಾರದಲ್ಲಿ ಪ್ರಶಾಂತ್​ ಸಂಬರ್ಗಿ ಕಿರಿಕ್​ ತೆಗೆದಿದ್ದಾರೆ. ಅಲ್ಲಿಂದ ಶುರುವಾದ ಜಗಳ ಬೇರೊಂದು ಹಂತಕ್ಕೆ ಹೋಗಿದೆ.

ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಅದರಲ್ಲಿ 9 ಜನರು ಹಳಬರು. ಅಂದರೆ ಈ ಹಿಂದಿನ ಸೀಸನ್​ಗಳಿಂದ 5​ ಹಾಗೂ ಇತ್ತೀಚೆಗೆ ಅಂತ್ಯವಾದ ಬಿಗ್​ ಬಾಸ್​ ಕನ್ನಡ ಒಟಿಟಿ ಆವೃತ್ತಿಯ 4 ಜನರು ಈ ಹೊಸ ಸೀಸನ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಹಳೇ ಸ್ಪರ್ಧಿಗಳ ಗುಣ ಏನೆಂಬುದು ಪ್ರೇಕ್ಷಕರಿಗೆ ಈಗಾಗಲೇ ಗೊತ್ತಾಗಿದೆ. ಕಿರಿಕ್​ ಸ್ವಭಾವದ ಪ್ರಶಾಂತ್​ ಸಂಬರ್ಗಿ ಕಿಂಚಿತ್ತೂ ಬದಲಾದಂತೆ ಕಾಣುತ್ತಿಲ್ಲ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ಮೊದಲ ದಿನ ಏನೆಲ್ಲ ನಡೆಯಿತು ಎಂಬುದರ ಝಲಕ್​ ತೋರಿಸಲು ‘ಕಲರ್ಸ್​ ಕನ್ನಡ’ ವಾಹಿನಿ ತನ್ನ ಸೋಶಿಯಲ್​ ಮೀಡಿಯಾದಲ್ಲಿ ಒಂದು ಪ್ರೋಮೋ ಹಂಚಿಕೊಂಡಿದೆ. ಎಲ್ಲರೂ ಕುಳಿತು ಮಾತನಾಡುತ್ತಿರುವಾಗ ‘ನಾನು 10 ಲಕ್ಷ ಜನರಿಗೆ ಜೋತಿಷ್ಯ ಹೇಳಿರಬಹುದು’ ಎಂದು ಆರ್ಯವರ್ಧನ್​ ಗುರೂಜಿ ಹೇಳಿದರು. ಅದಕ್ಕೆ ಪ್ರಶಾಂತ್​ ಸಂಬರ್ಗಿ ವಿರೋಧ ವ್ಯಕ್ತಪಡಿಸಿದರು. ‘ಗುರುಗಳೇ 10 ಲಕ್ಷ ಅಂತ ಏನೇನೋ ಮಾತಾಡಬೇಡಿ’ ಎಂದು ತಕರಾರು ತೆಗೆದರು. ಅಲ್ಲಿಂದ ಜಗಳ ತಾರಕಕ್ಕೇರಿತು.

‘ಗುರೂಜಿಯ ನಿಜವಾದ ಹೆಸರು ಆರ್ಯವರ್ಧನ್​ ಅಲ್ಲ. ನಿಜವಾದ ಹೆಸರು ಹೇಳ್ಲಾ?’ ಎಂದು ಪ್ರಶಾಂತ್​ ಸಂಬರ್ಗಿ ಸವಾಲು ಹಾಕಿದ್ದಾರೆ. ಅತ್ತ ಆರ್ಯವರ್ಧನ್​ ಗುರೂಜಿ ಕೂಡ ತಿರುಗೇಟು ನೀಡಲು ಸಜ್ಜಾಗಿದ್ದಾರೆ. ಪ್ರಶಾಂತ್​ ಸಂಬರ್ಗಿ ಆಡಿದ ಮಾತುಗಳನ್ನೆಲ್ಲ ಕೇಳಿಸಿಕೊಂಡು ಮನೆಯ ಇತರೆ ಸದಸ್ಯರು ಸುಮ್ಮನೆ ಕುಳಿತಿಲ್ಲ. ಅವರ ವರ್ತನೆಯನ್ನು ಖಂಡಿಸಿದ್ದಾರೆ. ಈ ಹಿಂದಿನ ಸೀಸನ್​ನಲ್ಲಿ ಅವರು ತೋರಿಸಿದ ಡಬಲ್​ ಗೇಮ್​ ಬುದ್ಧಿಯ ಬಗ್ಗೆ ಖಂಡನೆ ವ್ಯಕ್ತವಾಗಿದೆ. ‘ಬಿಗ್​ ಬಾಸ್​ನಲ್ಲಿ ಇರುವಾಗ ಚೆನ್ನಾಗಿದ್ದು, ನಂತರ ಹೊರಬಂದ ಬಳಿಕ ಹೆಣ್ಮಕ್ಕಳ ಬಗ್ಗೆ ಕಚಡವಾಗಿ ಮಾತನಾಡುತ್ತಿದ್ದರು’ ಎಂದು ನಟ ದರ್ಶ್​ ಛಾಟಿ ಬೀಸಿದ್ದಾರೆ.

ಶನಿವಾರ (ಸೆ.24) ಅದ್ದೂರಿಯಾಗಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಿದೆ. ಪ್ರತಿ ರಾತ್ರಿ 9.30ಕ್ಕೆ ಹೊಸ ಎಪಿಸೋಡ್​ ಬಿತ್ತರ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?