AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳಿಂದ ವಿವಾದವಾದಾಗ ಬಿಗ್​ಬಾಸ್ ಏನು ಮಾಡುತ್ತಾರೆ? ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ

Bigg Boss: ಬಿಗ್​ಬಾಸ್ ಮನೆಯ ಸದಸ್ಯರ ಮಾತುಗಳು ಹೊರಗೆ ವಿವಾದ ಎಬ್ಬಿಸಿವೆ. ಇಂಥಹಾ ಸೂಕ್ಷ್ಮ ಸಂದರ್ಭದಲ್ಲಿ ಬಿಗ್​ಬಾಸ್ ಆಯೋಜಕರು ಏನು ಮಾಡುತ್ತಾರೆ ಎಂಬ ಬಗ್ಗೆ ಮಾಜಿ ಬಿಗ್​ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ.

ಸ್ಪರ್ಧಿಗಳಿಂದ ವಿವಾದವಾದಾಗ ಬಿಗ್​ಬಾಸ್ ಏನು ಮಾಡುತ್ತಾರೆ? ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ
ಮಂಜುನಾಥ ಸಿ.
|

Updated on: Nov 16, 2023 | 11:33 PM

Share

ಬಿಗ್​ಬಾಸ್ ಕನ್ನಡ ಸೀಸನ್ 10 (Bigg Boss) ಮನೊರಂಜನೆಯ ಜೊತೆಗೆ ವಿವಾದಗಳಿಂದಲೂ ಸುದ್ದಿಯಾಗುತ್ತಿದೆ. ಮೊದಲಿಗೆ ಬಿಗ್​ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಪ್ರಕರಣದಲ್ಲಿ ಬಿಗ್​ಬಾಸ್ ಮನೆಯಿಂದ ನೇರ ಜೈಲಿಗೆ ಹೋದರು. ಜಾಮೀನಿನ ಮೇಲೆ ಹೊರಬಂದು ಈಗಲೂ ಬಿಗ್​ಬಾಸ್ ಮನೆಯಲ್ಲಿಯೇ ಇದ್ದಾರೆ. ಅದಾದ ಬಳಿಕ ಈಗ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಎಫ್​ಐಆರ್ ದಾಖಲಾಗಿದ್ದು ಬಿಗ್​ಬಾಸ್ ಆಯೋಜಕರಿಗೆ ಪೊಲೀಸರು ನೊಟೀಸ್ ನೀಡಿ, ತನಿಷಾ ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾಗುತ್ತಿರುವ ಸನ್ನಿವೇಶದ ವಿಡಿಯೋ ನೀಡುವಂತೆ ಸೂಚಿಸಿದ್ದಾರೆ.

ಬಿಗ್​ಬಾಸ್ ಮನೆಯ ಸ್ಪರ್ಧಿಗಳಿಂದ ಹೊರಗಡೆ ವಿವಾದಗಳು ಪ್ರಾರಂಭವಾದಾಗ ಬಿಗ್​ಬಾಸ್ ಆಯೋಜಕರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಎರಡೆರಡು ಬಾರಿ ಬಿಗ್​ಬಾಸ್ ಮನೆಯ ವಾಸಿಯಾಗಿರುವ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ. ಬಿಗ್​ಬಾಸ್ ಸ್ಪರ್ಧಿಯಿಂದ ಹೊರಗಡೆ ವಿವಾದ ಸೃಷ್ಟಿಯಾದರೆ ಬಿಗ್​ಬಾಸ್ ಆಯೋಜಕರು ಸ್ಪರ್ಧಿಯ ಪರವಾಗಿ ಗಟ್ಟಿಯಾಗಿ ನಿಲ್ಲುತ್ತಾರೆ. ಎಲ್ಲ ರೀತಿಯ ನಿಯಮಗಳನ್ನು ಪಾಲಿಸಿ, ಸ್ಪರ್ಧಿಯನ್ನು ಬೆಂಬಲಿಸುತ್ತಾರೆ ಎಂದಿದ್ದಾರೆ.

”ನಾನು ಬಿಗ್​ಬಾಸ್ ಮನೆ ಒಳಗೆ ಇದ್ದಾಗ ನೀಡಿದ ಹೇಳಿಕೆ ಒಂದರಿಂದ ಹೊರಗೆ ಗಲಾಟೆ ಆಗಿತ್ತು. ಯಾರೋ ಕೆಲವರು ಕನ್ನಡ ಪರ ಸಂಘಟನೆ ಸದಸ್ಯರ ಬಗ್ಗೆ ಆಡಿದ ಮಾತಿನ ಬಗ್ಗೆ ಹೊರಗೆ ಕನ್ನಡಪರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ನನ್ನ ವಿರುದ್ಧ ದೂರು ದಾಖಲಾಯ್ತು. ಸತತವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ನನ್ನ ವಿರುದ್ಧ ಪ್ರತಿಭಟನೆ ನಡೆಸಲಾಯ್ತು. ಆದರೆ ಆಗೆಲ್ಲ ಬಿಗ್​ಬಾಸ್​ ನನ್ನನ್ನು ಬಿಟ್ಟುಕೊಟ್ಟಿರಲಿಲ್ಲ. ಕೊನೆಗೆ ನಾನು ನನ್ನ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಗ್ಗೆ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತು

ಬಿಗ್​ಬಾಸ್​ಗೆ ಎರಡನೇ ಬಾರಿ ಅಂದರೆ ಒಂಬತ್ತನೇ ಸೀಸನ್​ಗೆ ಪ್ರಶಾಂತ್ ಸಂಬರ್ಗಿ ಹೋದಾಗ ಅಲ್ಲಿ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಹ ಸ್ಪರ್ಧಿಯಾಗಿದ್ದರು. ಪ್ರಶಾಂತ್ ಸಂಬರ್ಗಿ ಹಾಗೂ ರೂಪೇಶ್ ನಡುವೆ ಆಗಾಗ್ಗೆ ಜಗಳ ಆಗುತ್ತಲೇ ಇತ್ತು. ಹೀಗೆಯೇ ಜಗಳ ಆಡುವಾಗ ಎಲ್ಲೆ ಮೀರಿದ ಪ್ರಶಾಂತ್ ಸಂಬರ್ಗಿ, ರೂಪೇಶ್ ರಾಜಣ್ಣನನ್ನು ಬೈಯ್ಯುವ ಭರದಲ್ಲಿ ಕನ್ನಡಪರ ಸಂಘಟನೆಗಳನ್ನು ಬೈದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಬಿಗ್​ಬಾಸ್ ಮನೆ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಮನೆ ಒಳಗೆ ನುಗ್ಗುವ ಬೆದರಿಕೆ ಹಾಕಿದ್ದವು. ಆಗ ಬಿಗ್​ಬಾಸ್ ಮನೆಗೆ ಪೊಲೀಸ್ ಬಂದೋಬಸ್ತ್ ಸಹ ನೀಡಲಾಗಿತ್ತು. ಕೊನೆಗೆ ಮನೆಯ ಒಳಗಿನಿಂದಲೇ ಸಂಬರ್ಗಿ, ಕಣ್ಣೀರು ಹಾಕುತ್ತಾ ಕನ್ನಡಪರ ಸಂಘಟನೆಗಳ ಕ್ಷಮೆ ಕೇಳಿದರು.

ಈಗ ತನಿಷಾ, ಡ್ರೋನ್ ಪ್ರತಾಪ್​ಗೆ ಟಾಸ್ಕ್​ ಒಂದರ ಸಂಬಂಧ ಬೈಯ್ಯುತ್ತಾ ಬಳಸಿದ ಮಾತೊಂದು ವಿವಾದಕ್ಕೆ ಕಾರಣವಾಗಿದೆ. ಭೋವಿ ಸಮುದಾಯದ ಕೆಲ ಮುಖಂಡರು, ತಮ್ಮ ಸಮುದಾಯಕ್ಕೆ ತನಿಷಾ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ