ಸ್ಪರ್ಧಿಗಳಿಂದ ವಿವಾದವಾದಾಗ ಬಿಗ್​ಬಾಸ್ ಏನು ಮಾಡುತ್ತಾರೆ? ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ

Bigg Boss: ಬಿಗ್​ಬಾಸ್ ಮನೆಯ ಸದಸ್ಯರ ಮಾತುಗಳು ಹೊರಗೆ ವಿವಾದ ಎಬ್ಬಿಸಿವೆ. ಇಂಥಹಾ ಸೂಕ್ಷ್ಮ ಸಂದರ್ಭದಲ್ಲಿ ಬಿಗ್​ಬಾಸ್ ಆಯೋಜಕರು ಏನು ಮಾಡುತ್ತಾರೆ ಎಂಬ ಬಗ್ಗೆ ಮಾಜಿ ಬಿಗ್​ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ.

ಸ್ಪರ್ಧಿಗಳಿಂದ ವಿವಾದವಾದಾಗ ಬಿಗ್​ಬಾಸ್ ಏನು ಮಾಡುತ್ತಾರೆ? ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ
Follow us
|

Updated on: Nov 16, 2023 | 11:33 PM

ಬಿಗ್​ಬಾಸ್ ಕನ್ನಡ ಸೀಸನ್ 10 (Bigg Boss) ಮನೊರಂಜನೆಯ ಜೊತೆಗೆ ವಿವಾದಗಳಿಂದಲೂ ಸುದ್ದಿಯಾಗುತ್ತಿದೆ. ಮೊದಲಿಗೆ ಬಿಗ್​ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಪ್ರಕರಣದಲ್ಲಿ ಬಿಗ್​ಬಾಸ್ ಮನೆಯಿಂದ ನೇರ ಜೈಲಿಗೆ ಹೋದರು. ಜಾಮೀನಿನ ಮೇಲೆ ಹೊರಬಂದು ಈಗಲೂ ಬಿಗ್​ಬಾಸ್ ಮನೆಯಲ್ಲಿಯೇ ಇದ್ದಾರೆ. ಅದಾದ ಬಳಿಕ ಈಗ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಎಫ್​ಐಆರ್ ದಾಖಲಾಗಿದ್ದು ಬಿಗ್​ಬಾಸ್ ಆಯೋಜಕರಿಗೆ ಪೊಲೀಸರು ನೊಟೀಸ್ ನೀಡಿ, ತನಿಷಾ ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾಗುತ್ತಿರುವ ಸನ್ನಿವೇಶದ ವಿಡಿಯೋ ನೀಡುವಂತೆ ಸೂಚಿಸಿದ್ದಾರೆ.

ಬಿಗ್​ಬಾಸ್ ಮನೆಯ ಸ್ಪರ್ಧಿಗಳಿಂದ ಹೊರಗಡೆ ವಿವಾದಗಳು ಪ್ರಾರಂಭವಾದಾಗ ಬಿಗ್​ಬಾಸ್ ಆಯೋಜಕರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಎರಡೆರಡು ಬಾರಿ ಬಿಗ್​ಬಾಸ್ ಮನೆಯ ವಾಸಿಯಾಗಿರುವ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ. ಬಿಗ್​ಬಾಸ್ ಸ್ಪರ್ಧಿಯಿಂದ ಹೊರಗಡೆ ವಿವಾದ ಸೃಷ್ಟಿಯಾದರೆ ಬಿಗ್​ಬಾಸ್ ಆಯೋಜಕರು ಸ್ಪರ್ಧಿಯ ಪರವಾಗಿ ಗಟ್ಟಿಯಾಗಿ ನಿಲ್ಲುತ್ತಾರೆ. ಎಲ್ಲ ರೀತಿಯ ನಿಯಮಗಳನ್ನು ಪಾಲಿಸಿ, ಸ್ಪರ್ಧಿಯನ್ನು ಬೆಂಬಲಿಸುತ್ತಾರೆ ಎಂದಿದ್ದಾರೆ.

”ನಾನು ಬಿಗ್​ಬಾಸ್ ಮನೆ ಒಳಗೆ ಇದ್ದಾಗ ನೀಡಿದ ಹೇಳಿಕೆ ಒಂದರಿಂದ ಹೊರಗೆ ಗಲಾಟೆ ಆಗಿತ್ತು. ಯಾರೋ ಕೆಲವರು ಕನ್ನಡ ಪರ ಸಂಘಟನೆ ಸದಸ್ಯರ ಬಗ್ಗೆ ಆಡಿದ ಮಾತಿನ ಬಗ್ಗೆ ಹೊರಗೆ ಕನ್ನಡಪರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ನನ್ನ ವಿರುದ್ಧ ದೂರು ದಾಖಲಾಯ್ತು. ಸತತವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ನನ್ನ ವಿರುದ್ಧ ಪ್ರತಿಭಟನೆ ನಡೆಸಲಾಯ್ತು. ಆದರೆ ಆಗೆಲ್ಲ ಬಿಗ್​ಬಾಸ್​ ನನ್ನನ್ನು ಬಿಟ್ಟುಕೊಟ್ಟಿರಲಿಲ್ಲ. ಕೊನೆಗೆ ನಾನು ನನ್ನ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಗ್ಗೆ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತು

ಬಿಗ್​ಬಾಸ್​ಗೆ ಎರಡನೇ ಬಾರಿ ಅಂದರೆ ಒಂಬತ್ತನೇ ಸೀಸನ್​ಗೆ ಪ್ರಶಾಂತ್ ಸಂಬರ್ಗಿ ಹೋದಾಗ ಅಲ್ಲಿ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಹ ಸ್ಪರ್ಧಿಯಾಗಿದ್ದರು. ಪ್ರಶಾಂತ್ ಸಂಬರ್ಗಿ ಹಾಗೂ ರೂಪೇಶ್ ನಡುವೆ ಆಗಾಗ್ಗೆ ಜಗಳ ಆಗುತ್ತಲೇ ಇತ್ತು. ಹೀಗೆಯೇ ಜಗಳ ಆಡುವಾಗ ಎಲ್ಲೆ ಮೀರಿದ ಪ್ರಶಾಂತ್ ಸಂಬರ್ಗಿ, ರೂಪೇಶ್ ರಾಜಣ್ಣನನ್ನು ಬೈಯ್ಯುವ ಭರದಲ್ಲಿ ಕನ್ನಡಪರ ಸಂಘಟನೆಗಳನ್ನು ಬೈದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಬಿಗ್​ಬಾಸ್ ಮನೆ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಮನೆ ಒಳಗೆ ನುಗ್ಗುವ ಬೆದರಿಕೆ ಹಾಕಿದ್ದವು. ಆಗ ಬಿಗ್​ಬಾಸ್ ಮನೆಗೆ ಪೊಲೀಸ್ ಬಂದೋಬಸ್ತ್ ಸಹ ನೀಡಲಾಗಿತ್ತು. ಕೊನೆಗೆ ಮನೆಯ ಒಳಗಿನಿಂದಲೇ ಸಂಬರ್ಗಿ, ಕಣ್ಣೀರು ಹಾಕುತ್ತಾ ಕನ್ನಡಪರ ಸಂಘಟನೆಗಳ ಕ್ಷಮೆ ಕೇಳಿದರು.

ಈಗ ತನಿಷಾ, ಡ್ರೋನ್ ಪ್ರತಾಪ್​ಗೆ ಟಾಸ್ಕ್​ ಒಂದರ ಸಂಬಂಧ ಬೈಯ್ಯುತ್ತಾ ಬಳಸಿದ ಮಾತೊಂದು ವಿವಾದಕ್ಕೆ ಕಾರಣವಾಗಿದೆ. ಭೋವಿ ಸಮುದಾಯದ ಕೆಲ ಮುಖಂಡರು, ತಮ್ಮ ಸಮುದಾಯಕ್ಕೆ ತನಿಷಾ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ