AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರೋನ್ ನಿರ್ಮಾಣ ಎಲ್ಲಾ ಸುಳ್ಳು’; ಮತ್ತೆ ಹಿಂದಿನಿಂದ ಮಾತನಾಡಲು ಶುರು ಮಾಡಿದ ವಿನಯ್

ಮೈಕಲ್, ವಿನಯ್, ನಮ್ರತಾ ಹಾಗೂ ಕಾರ್ತಿಕ್ ಒಂದು ಕಡೆ ನಿಂತು ಮಾತನಾಡುತ್ತಿದ್ದರು. ಈ ವೇಳೆ ಮೈಕಲ್ ಅವರು ಡ್ರೋನ್ ವಿಚಾರ ತೆಗೆದರು. ವಿನಯ್ ತಮ್ಮ ಅಭಿಪ್ರಾಯ ತಿಳಿಸಿದರು.

‘ಡ್ರೋನ್ ನಿರ್ಮಾಣ ಎಲ್ಲಾ ಸುಳ್ಳು’; ಮತ್ತೆ ಹಿಂದಿನಿಂದ ಮಾತನಾಡಲು ಶುರು ಮಾಡಿದ ವಿನಯ್
ವಿನಯ್-ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Dec 30, 2023 | 12:53 PM

Share

ಡ್ರೋನ್ ಪ್ರತಾಪ್ ಅವರು ಹೊರ ಜಗತ್ತಿನಲ್ಲಿ ಸಾಕಷ್ಟು ಸುಳ್ಳುಗಳನ್ನು ಹೇಳಿದ್ದರು. ಬಿಗ್ ಬಾಸ್​ಗೆ ಹೋದ ಬಳಿಕ ಅವರು ಈ ವಿಚಾರಗಳನ್ನು ಒಪ್ಪಿಕೊಂಡರು. ಎಲ್ಲರ ಬಳಿ ಕ್ಷಮೆ ಕೂಡ ಕೇಳಿದರು. ಬಿಗ್ ಬಾಸ್ (Bigg Boss) ಆರಂಭ ಆದಾಗಿನಿಂದಲೂ ಈ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ವಿಚಾರ ಇತ್ತೀಚೆಗೆ ತಣ್ಣಗಾಗಿತ್ತು. ಈಗ ಮೈಕಲ್ ಅಜಯ್ ಹಾಗೂ ವಿನಯ್ ಅವರು ಮತ್ತೆ ಈ ವಿಚಾರ ತೆಗೆದಿದ್ದಾರೆ. ಪ್ರತಾಪ್ ಸುಳ್ಳು ಹೇಳುತ್ತಿದ್ದಾರೆ ಎಂಬುದನ್ನು ಅವರು ಪುನರುಚ್ಛರಿಸಿದ್ದಾರೆ.

ಈ ವಾರ ಫ್ಯಾಮಿಲಿ ವೀಕ್ ಆಗಿತ್ತು. ಎಲ್ಲಾ ಸ್ಪರ್ಧಿಗಳಿಂದ ಕುಟುಂಬದವರು ಬಂದಿದ್ದರು. ಪ್ರತಾಪ್ ತಂದೆ ತಾಯಿ ಕೂಡ ಆಗಮಿಸಿದ್ದರು. ಅದಕ್ಕೂ ಮೊದಲು ಬಿಗ್ ಬಾಸ್ ಆವರಣದಲ್ಲಿ ಡ್ರೋನ್ ಹಾರಾಟ ನಡೆಸಿದೆ. ‘ನನ್ನ ಡ್ರೋನ್’ ಎಂದು ಪ್ರತಾಪ್ ಖುಷಿಯಿಂದ ಕುಣಿದಿದ್ದಾರೆ. ‘ಈ ಡ್ರೋನ್​​ನ ಹೇಗೆ ಆಪರೇಟ್ ಮಾಡೋದು’ ಎಂಬಿತ್ಯಾದಿ ಪ್ರಶ್ನೆಗಳನ್ನು ಸಂತೋಷ್ ಅವರು ಪ್ರತಾಪ್​ಗೆ ಕೇಳಿದ್ದರು. ಇದಕ್ಕೆ ಪ್ರತಾಪ್ ಕಡೆಯಿಂದ ಉತ್ತರ ಬಂದಿಲ್ಲ. ರಾತ್ರಿ ಈ ವಿಚಾರ ಚರ್ಚೆ ಆಗಿದೆ.

ಮೈಕಲ್, ವಿನಯ್, ನಮ್ರತಾ ಹಾಗೂ ಕಾರ್ತಿಕ್ ಒಂದು ಕಡೆ ನಿಂತು ಮಾತನಾಡುತ್ತಿದ್ದರು. ಈ ವೇಳೆ ಮೈಕಲ್ ಅವರು ಡ್ರೋನ್ ವಿಚಾರ ತೆಗೆದರು. ‘ಡ್ರೋನ್ ಹೇಗೆ ಪ್ಲೇ ಮಾಡೋದು ಎಂದು ಪ್ರತಾಪ್ ಬಳಿ ತುಕಾಲಿ ಕೇಳ್ತಾ ಇದಾನೆ. ಪ್ರತಾಪ್​ಗೆ ಡ್ರೋನ್​ನ ಹೇಗೆ ಆಪರೇಟ್ ಮಾಡೋದು ಅನ್ನೋದು ಗೊತ್ತಿಲ್ಲ’ ಎಂದರು ಮೈಕಲ್. ವಿನಯ್ ಇದನ್ನು ಒಪ್ಪಲಿಲ್ಲ. ‘ಆತ ಅಷ್ಟು ಮುಗ್ಧನಾ? ಬಹುಶಃ ಡ್ರೋನ್ ಆಪರೇಟ್ ಮಾಡೋಕೆ ಬರಹುದು. ಡ್ರೋನ್ ನಿರ್ಮಾಣ ಎಲ್ಲಾ ಸುಳ್ಳು’ ಎಂದರು.

ಇದನ್ನೂ ಓದಿ: ‘ನೀನು ಏನು ಅನ್ನೋದು ಇಲ್ಲಿ ಯಾರಿಗೂ ಗೊತ್ತಿಲ್ಲ, ನಿನ್ನದು ಮಗು ಮನಸ್ಸು’; ವಿನಯ್​ಗೆ​ ಪತ್ನಿಯ ಧೈರ್ಯ

ಇತ್ತೀಚೆಗೆ ವಿನಯ್ ಅವರು ಎಲ್ಲರ ಜೊತೆಯೂ ಒಳ್ಳೆಯವರ ರೀತಿ ಇರೋಕೆ ಪ್ರಯತ್ನಿಸಿದ್ದಾರೆ. ಪ್ರತಾಪ್ ಜೊತೆ ಮೊದಲಿನಿಂದಲೂ ಜಗಳ ಮಾಡುತ್ತಿದ್ದರು. ಆದರೆ, ಈಗ ಅವರು ಸೈಲೆಂಟ್ ಆಗಿದ್ದರು. ಈಗ ಮತ್ತೆ ಹಿಂದಿನಿಂದ ಮಾತನಾಡೋಕೆ ಆರಂಭಿಸಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ