AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  

ಈ ಸುದ್ದಿ ನೋಡಿ ಪ್ರಿಯಾ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಅವರಿಗೆ ಅನೇಕರು ಮೆಸೇಜ್​ ಮಾಡಿ ಪರಿಸ್ಥಿತಿ ವಿಚಾರಿಸಿದ್ದರು. ಇದು ಪ್ರಿಯಾ ಗಮನಕ್ಕೂ ಬಂದಿದೆ.

ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  
ಪ್ರಿಯಾ ಮೋಹನ್
TV9 Web
| Edited By: |

Updated on: Feb 28, 2022 | 5:07 PM

Share

ರಷ್ಯಾ (Russia)ಹಾಗೂ ಉಕ್ರೇನ್ (Ukraine)​ ನಡುವೆ ಯುದ್ಧ ನಡೆಯುತ್ತಿದೆ. ಉಕ್ರೇನ್​ನಲ್ಲಿರುವ ಅನೇಕ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಭಾರತಕ್ಕೆ ಕರೆತರೋಕೆ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ರಷ್ಯಾದ ದಾಳಿಯಿಂದ ಉಕ್ರೇನ್​ ತತ್ತರಿಸಿ ಹೋಗಿದ್ದು, ಅಲ್ಲಿನ ಜನರು ಪ್ರಾಣವನ್ನು ಕೈಯಲ್ಲಿ ಹಿಡಿದು ಕೂತಿದ್ದಾರೆ. ಆ ದೇಶದಲ್ಲಿ ಸಿಲುಕಿರುವ ಅನೇಕ ಭಾರತೀಯರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ದುಃಖ ತೋಡಿಕೊಳ್ಳುತ್ತಿದ್ದಾರೆ. ಕಿರುತೆರೆ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುವ ನಟಿ ಪ್ರಿಯಾ ಮೋಹನ್ (Priya Mohan) ಕೂಡ ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ನಟಿಯ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ನಟ, ಉದ್ಯಮಿ ನಿಹಾಲ್ ಪಿಳ್ಳೆ ಅವರನ್ನು ಪ್ರಿಯಾ ಮೋಹನ್​ ಮದುವೆ ಆಗಿದ್ದಾರೆ. ಮದುವೆ ನಂತರ ಅವರು ನಟನೆಯಿಂದ ಬ್ರೇಕ್​ ತೆಗೆದುಕೊಂಡು, ಕುಟುಂಬಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರು ಯೂಟ್ಯೂಬ್​ ಚಾನೆಲ್​ ಕೂಡ ನಡೆಸುತ್ತಿದ್ದು, ಅದರ ಮೂಲಕ ಒಂದಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಇವರು ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಎಂದು ವರದಿ ಆಗಿತ್ತು.

ಈ ಸುದ್ದಿ ನೋಡಿ ಪ್ರಿಯಾ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಅವರಿಗೆ ಅನೇಕರು ಮೆಸೇಜ್​ ಮಾಡಿ ಪರಿಸ್ಥಿತಿ ವಿಚಾರಿಸಿದ್ದರು. ಈ ವಿಚಾರವನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು, ಪ್ರಿಯಾ ಅವರನ್ನು ರಕ್ಷಣೆ ಮಾಡಿ ಎಂದು ಕೋರಿಕೊಂಡಿದ್ದರು. ಇದು ಪ್ರಿಯಾ ಗಮನಕ್ಕೂ ಬಂದಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇದು ಫೇಕ್ ನ್ಯೂಸ್​. ನಾನು ಕೊಚ್ಚಿಯಲ್ಲಿ ಕುಟುಂಬದ ಜತೆಗೆ ಹಾಯಾಗಿದ್ದೇನೆ. ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಬೇಡಿ’ ಎಂದು ಅವರು ಕೋರಿದ್ದಾರೆ.

ಪ್ರಿಯಾ ಮೋಹನ್​, ನಿಹಾಲ್​ ಹಾಗೂ ಅವರ ಮಗ ಕೆಲ ತಿಂಗಳ ಹಿಂದೆ ಉಕ್ರೇನ್​ಗೆ ತೆರಳಿದ್ದರು. ಅಲ್ಲಿ ಕೆಲ ಫೋಟೋಗಳನ್ನು ಅವರು ಕ್ಲಿಕ್ಕಿಸಿಕೊಂಡಿದ್ದರು. ಅಲ್ಲಿ ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಫೋಟೋ-ವಿಡಿಯೋಗಳನ್ನು ತಿರುಚಿ ತಪ್ಪಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ.

ಪ್ರಿಯಾ ಮೋಹನ್​ ಸಹೋದರಿ ಪೂರ್ಣಿಮಾ ಇಂದ್ರಜಿತ್​. ಮಲಯಾಳಂನ ಖ್ಯಾತ ನಟ ಇಂದ್ರಜಿತ್​ ಸುಕುಮಾರನ್​ ಅವರನ್ನು ಪೂರ್ಣಿಮಾ ವರಿಸಿದ್ದಾರೆ. ಪೂರ್ಣಿಮಾ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಪ್ರಿಯಾ ಮೋಹನ್​ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಸುದ್ದಿ ಪೂರ್ಣಿಮಾ ಅಭಿಮಾನಿಗಳಲ್ಲೂ ಆತಂಕ ತಂದೊಡ್ಡಿತ್ತು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಉಡಾವಣೆ ಆಗಲಿದೆ ಉಪಗ್ರಹ; ಇದಕ್ಕೆ ತಗಲುತ್ತಿರುವ ವೆಚ್ಚ ಎಷ್ಟು?

ಬೆನ್ನತ್ತಿ ಬಂತು ಯುದ್ಧ; ಅಫ್ಘಾನ್​​ನಿಂದ ತಪ್ಪಿಸಿಕೊಂಡು ಉಕ್ರೇನ್​ಗೆ ಬಂದಿದ್ದ ವ್ಯಕ್ತಿಯ ದುರದೃಷ್ಟದ ಕತೆ ಇದು

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?