AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  

ಈ ಸುದ್ದಿ ನೋಡಿ ಪ್ರಿಯಾ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಅವರಿಗೆ ಅನೇಕರು ಮೆಸೇಜ್​ ಮಾಡಿ ಪರಿಸ್ಥಿತಿ ವಿಚಾರಿಸಿದ್ದರು. ಇದು ಪ್ರಿಯಾ ಗಮನಕ್ಕೂ ಬಂದಿದೆ.

ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  
ಪ್ರಿಯಾ ಮೋಹನ್
TV9 Web
| Edited By: |

Updated on: Feb 28, 2022 | 5:07 PM

Share

ರಷ್ಯಾ (Russia)ಹಾಗೂ ಉಕ್ರೇನ್ (Ukraine)​ ನಡುವೆ ಯುದ್ಧ ನಡೆಯುತ್ತಿದೆ. ಉಕ್ರೇನ್​ನಲ್ಲಿರುವ ಅನೇಕ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಭಾರತಕ್ಕೆ ಕರೆತರೋಕೆ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ರಷ್ಯಾದ ದಾಳಿಯಿಂದ ಉಕ್ರೇನ್​ ತತ್ತರಿಸಿ ಹೋಗಿದ್ದು, ಅಲ್ಲಿನ ಜನರು ಪ್ರಾಣವನ್ನು ಕೈಯಲ್ಲಿ ಹಿಡಿದು ಕೂತಿದ್ದಾರೆ. ಆ ದೇಶದಲ್ಲಿ ಸಿಲುಕಿರುವ ಅನೇಕ ಭಾರತೀಯರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ದುಃಖ ತೋಡಿಕೊಳ್ಳುತ್ತಿದ್ದಾರೆ. ಕಿರುತೆರೆ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುವ ನಟಿ ಪ್ರಿಯಾ ಮೋಹನ್ (Priya Mohan) ಕೂಡ ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ನಟಿಯ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ನಟ, ಉದ್ಯಮಿ ನಿಹಾಲ್ ಪಿಳ್ಳೆ ಅವರನ್ನು ಪ್ರಿಯಾ ಮೋಹನ್​ ಮದುವೆ ಆಗಿದ್ದಾರೆ. ಮದುವೆ ನಂತರ ಅವರು ನಟನೆಯಿಂದ ಬ್ರೇಕ್​ ತೆಗೆದುಕೊಂಡು, ಕುಟುಂಬಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರು ಯೂಟ್ಯೂಬ್​ ಚಾನೆಲ್​ ಕೂಡ ನಡೆಸುತ್ತಿದ್ದು, ಅದರ ಮೂಲಕ ಒಂದಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಇವರು ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಎಂದು ವರದಿ ಆಗಿತ್ತು.

ಈ ಸುದ್ದಿ ನೋಡಿ ಪ್ರಿಯಾ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಅವರಿಗೆ ಅನೇಕರು ಮೆಸೇಜ್​ ಮಾಡಿ ಪರಿಸ್ಥಿತಿ ವಿಚಾರಿಸಿದ್ದರು. ಈ ವಿಚಾರವನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು, ಪ್ರಿಯಾ ಅವರನ್ನು ರಕ್ಷಣೆ ಮಾಡಿ ಎಂದು ಕೋರಿಕೊಂಡಿದ್ದರು. ಇದು ಪ್ರಿಯಾ ಗಮನಕ್ಕೂ ಬಂದಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇದು ಫೇಕ್ ನ್ಯೂಸ್​. ನಾನು ಕೊಚ್ಚಿಯಲ್ಲಿ ಕುಟುಂಬದ ಜತೆಗೆ ಹಾಯಾಗಿದ್ದೇನೆ. ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಬೇಡಿ’ ಎಂದು ಅವರು ಕೋರಿದ್ದಾರೆ.

ಪ್ರಿಯಾ ಮೋಹನ್​, ನಿಹಾಲ್​ ಹಾಗೂ ಅವರ ಮಗ ಕೆಲ ತಿಂಗಳ ಹಿಂದೆ ಉಕ್ರೇನ್​ಗೆ ತೆರಳಿದ್ದರು. ಅಲ್ಲಿ ಕೆಲ ಫೋಟೋಗಳನ್ನು ಅವರು ಕ್ಲಿಕ್ಕಿಸಿಕೊಂಡಿದ್ದರು. ಅಲ್ಲಿ ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಫೋಟೋ-ವಿಡಿಯೋಗಳನ್ನು ತಿರುಚಿ ತಪ್ಪಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ.

ಪ್ರಿಯಾ ಮೋಹನ್​ ಸಹೋದರಿ ಪೂರ್ಣಿಮಾ ಇಂದ್ರಜಿತ್​. ಮಲಯಾಳಂನ ಖ್ಯಾತ ನಟ ಇಂದ್ರಜಿತ್​ ಸುಕುಮಾರನ್​ ಅವರನ್ನು ಪೂರ್ಣಿಮಾ ವರಿಸಿದ್ದಾರೆ. ಪೂರ್ಣಿಮಾ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಪ್ರಿಯಾ ಮೋಹನ್​ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಸುದ್ದಿ ಪೂರ್ಣಿಮಾ ಅಭಿಮಾನಿಗಳಲ್ಲೂ ಆತಂಕ ತಂದೊಡ್ಡಿತ್ತು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಉಡಾವಣೆ ಆಗಲಿದೆ ಉಪಗ್ರಹ; ಇದಕ್ಕೆ ತಗಲುತ್ತಿರುವ ವೆಚ್ಚ ಎಷ್ಟು?

ಬೆನ್ನತ್ತಿ ಬಂತು ಯುದ್ಧ; ಅಫ್ಘಾನ್​​ನಿಂದ ತಪ್ಪಿಸಿಕೊಂಡು ಉಕ್ರೇನ್​ಗೆ ಬಂದಿದ್ದ ವ್ಯಕ್ತಿಯ ದುರದೃಷ್ಟದ ಕತೆ ಇದು

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ