AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್, ನಿರ್ಮಾಪಕರ ನಡು ರಸ್ತೆಯಲ್ಲಿ ಅಡ್ಡ ಹಾಕಿದ ಹಂಸ

Vasudeva Kutumba serial: ಮಾಜಿ ಬಿಗ್​​ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ, ಹಿರಿಯ ನಟ ಅವಿನಾಶ್ ಸೇರಿದಂತೆ ಕೆಲವು ಪ್ರಮುಖ ಕಲಾವಿದರು ನಟಿಸುತ್ತಿರುವ ಧಾರಾವಾಹಿ ಇದಾಗಿದ್ದು, ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದು, ಇಂದು (ಏಪ್ರಿಲ್ 01) ನಿರ್ಮಾಪಕರನ್ನು ನಡು ರಸ್ತೆಯಲ್ಲಿ ಅಡ್ಡಹಾಕಿ ಪೇಮೆಂಟ್ ಕೊಡುವಂತೆ ಧಾರಾವಾಹಿಯ ನಟಿಯರಾದ ಹಂಸ ಮತ್ತು ಚೈತ್ರಾ ಕೇಳಿದ್ದು, ನಿರ್ಮಾಪಕರು ಸ್ಥಳದಿಂದ ಪರಾರಿ ಆಗಿದ್ದಾರೆ.

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್, ನಿರ್ಮಾಪಕರ ನಡು ರಸ್ತೆಯಲ್ಲಿ ಅಡ್ಡ ಹಾಕಿದ ಹಂಸ
Vasudeva Kutumba
ಮಂಜುನಾಥ ಸಿ.
|

Updated on:May 01, 2026 | 1:49 PM

Share

‘ವಸುದೇವ ಕುಟುಂಬ’ ಧಾರಾವಾಹಿಯ (Serial) ನಟ, ನಟಿಯರು ಮತ್ತು ತಂತ್ರಜ್ಞರು ಧಾರಾವಾಹಿಯ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ, ಹಿರಿಯ ನಟ ಅವಿನಾಶ್ ಸೇರಿದಂತೆ ಕೆಲವು ಪ್ರಮುಖ ಕಲಾವಿದರು ನಟಿಸುತ್ತಿರುವ ಧಾರಾವಾಹಿ ಇದಾಗಿದ್ದು, ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದು, ಇಂದು (ಏಪ್ರಿಲ್ 01) ನಿರ್ಮಾಪಕರನ್ನು ನಡು ರಸ್ತೆಯಲ್ಲಿ ಅಡ್ಡಹಾಕಿ ಪೇಮೆಂಟ್ ಕೊಡುವಂತೆ ಧಾರಾವಾಹಿಯ ನಟಿಯರಾದ ಹಂಸ ಮತ್ತು ಚೈತ್ರಾ ಕೇಳಿದ್ದು, ನಿರ್ಮಾಪಕರು ಸ್ಥಳದಿಂದ ಪರಾರಿ ಆಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಪೇಮೆಂಟ್ ಬಂದಿಲ್ಲದ ಕಾರಣ ಬೇಸತ್ತು ಬಿಗ್ ಬಾಸ್ ಸೀಸನ್ 11 ಸ್ಪರ್ದಿ ನಟಿ ಹಂಸ ಹಾಗೂ ನಟಿ ಚೈತ್ರ ಜೊತೆ ಯೂನಿಟ್ ಸದಸ್ಯರು ನಿರ್ಮಾಪಕರನ್ನು ಮುಖಾ-ಮುಖಿ ಭೇಟಿಯಾಗಿ ಪೇಮೆಂಟ್​​ಗೆ ಒತ್ತಾಯಿಸಿದ್ದಾರೆ. ಕೋರಮಂಗಲ ಅನಿಲ್ ಎಂಬುವರು, ಕೋರಮಂಗಲ ಟಾಕೀಸ್ ಹೆಸರಲ್ಲಿ ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದು, ನಾಗರಬಾವಿಯಲ್ಲಿ ಅವರು ನಡೆಸುತ್ತಿರುವ ‘ತತ್ಸವಿ ಹೋಟೆಲ್’ ಬಳಿ ಇಂದು ಮಧ್ಯಾಹ್ನ ಆಗಮಿಸಿದ ಹಂಸ, ಚೈತ್ರಾ ಹಾಗೂ ಯೂನಿಟ್​​ನ ಇತರೆ ಕೆಲವು ಮಂದಿ ನಿರ್ಮಾಪಕರನ್ನು ಸಂಭಾವನೆಗಾಗಿ ಒತ್ತಾಯಿಸಿದ್ದಾರೆ. ಆದರೆ ನಿರ್ಮಾಪಕ ಅನಿಲ್ ಮತ್ತು ಅವರ ಪತ್ನಿ ಕೂಡಲೇ ಸ್ಥಳದಿಂದ ಪಲಾಯನ ಮಾಡಿದ್ದಾರೆ.

ಇದನ್ನೂ ಓದಿ:‘ಆಸೆ’ ಧಾರಾವಾಹಿ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ರಾ ಅಮೃತಾ ರಾಮಮೂರ್ತಿ?

ನಟಿ ಹಂಸ ಅವರಿಗೆ ಮೂರು ಲಕ್ಷ ರೂಪಾಯಿ, ಚೈತ್ರಾ ಅವರಿಗೂ ಸಹ ದೊಡ್ಡ ಮೊತ್ತದ ಹಣವನ್ನು ನಿರ್ಮಾಪಕರು ಬಾಕಿ ಉಳಿಸಿಕೊಂಡಿದ್ದಾರಂತೆ. ಚೈತ್ರಾ ಅವರು ಈ ಹಿಂದೆ ಕಣ್ಣೀರು ಹಾಕಿ ನಿರ್ಮಾಪಕರ ಬಳಿ ಹಣ ಕೇಳಿದ್ದರೂ ಸಹ ಅವರು ಕೊಟ್ಟಿಲ್ಲ, ಇದೀಗ ಹಂಸ ಅವರು ಹೋಟೆಲ್ ಬಳಿ ಬಂದು ನೇರಾ-ನೇರ ನಿರ್ಮಾಪಕರನ್ನು ಹಣ ಕೇಳಿದ್ದಾರೆ. ಆದರೆ ಹಂಸ ಅವರನ್ನು ‘ರೌಡಿಸಂ ಮಾಡುತ್ತಿದ್ದೀರ’ ಎಂದು ಕೇಳಿದ ನಿರ್ಮಾಪಕ ಮತ್ತು ಅವರ ಪತ್ನಿ, ಹಂಸ ಅವರು ಧ್ವನಿ ಎತ್ತರಿಸುತ್ತಿದ್ದಂತೆ ಅಲ್ಲಿಂದ ಪರಾರಿ ಆಗಿದ್ದಾರೆ.

ಬಳಿಕ ಮಾಧ್ಯಮಗಳ ಬಳಿ ಮಾತನಾಡಿರುವ ಹಂಸ, ಅವರು ಇದೊಂದು ಕಚಡಾ ನಿರ್ಮಾಣ ಸಂಸ್ಥೆ, ಯಾರಿಗೂ ಸಹ ಸರಿಯಾಗಿ ಪೇಮೆಂಟ್ ಕೊಟ್ಟಿಲ್ಲ. ಇವರಿಂದ ಬೇರೆ ಧಾರಾವಾಹಿ ಅವಕಾಶವನ್ನೂ ಸಹ ಕಳೆದುಕೊಂಡಿದ್ದೇವೆ. ಹಣ ಕೇಳಿದ ನಟ-ನಟಿಯರನ್ನು ಬದಲಾವಣೆ ಮಾಡಿಬಿಟ್ಟಿದ್ದಾರೆ. ಯೂನಿಟ್ ಅವರನ್ನು ಕ್ಷುಲ್ಲಕವಾಗಿ ನೋಡಿಕೊಂಡಿದ್ದಾರೆ. ಹಳಸಿದ ಅನ್ನ ಹಾಕಿದ್ದಾರೆ. ಈ ನಿರ್ಮಾಪಕರ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿಯೂ ಹಂಸ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:47 pm, Fri, 1 May 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ