AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನೆನಪಲ್ಲಿ ಇನ್ನೊಂದು ದೊಡ್ಡ ಕಾರ್ಯಕ್ರಮ ‘ಅಪ್ಪು ಅಮರ’; ಇದು ಕಿರುತೆರೆ ಮಂದಿಯ ನಮನ

Puneeth Rajkumar: ನ.28ರ ಭಾನುವಾರದಂದು ಸಂಜೆ 4 ಗಂಟೆಗೆ ‘ಅಪ್ಪು ಅಮರ’ ಕಾರ್ಯಕ್ರಮ ನಡೆಯಲಿದೆ. ಜಯನಗರ ನ್ಯಾಷನಲ್​ ಕಾಲೇಜಿನ ಎಚ್​.ಎನ್​. ಕಲಾಕ್ಷೇತ್ರದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ.

ಪುನೀತ್​ ನೆನಪಲ್ಲಿ ಇನ್ನೊಂದು ದೊಡ್ಡ ಕಾರ್ಯಕ್ರಮ ‘ಅಪ್ಪು ಅಮರ’; ಇದು ಕಿರುತೆರೆ ಮಂದಿಯ ನಮನ
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Nov 22, 2021 | 8:01 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಇಡೀ ದಕ್ಷಿಣ ಭಾರತ ಚಿತ್ರರಂಗವೇ ಮಿಸ್​ ಮಾಡಿಕೊಳ್ಳುತ್ತಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳೆಲ್ಲರೂ ಸೇರಿ ಇತ್ತೀಚೆಗೆ ‘ಪುನೀತ ನಮನ’ ಕಾರ್ಯಕ್ರಮ ನಡೆಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಆ ಕಾರ್ಯಕ್ರಮ ಮಾಡಲಾಗಿತ್ತು. ಈಗ ಕನ್ನಡ ಕಿರುತೆರೆ ಧಾರಾವಾಹಿ (Kannada Serials) ಕಲಾವಿದರು ಮತ್ತು ತಂತ್ರಜ್ಞರು ಕೂಡ ಅಂಥದ್ದೇ ಮತ್ತೊಂದು ಕಾರ್ಯಕ್ರಮ ಏರ್ಪಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿರಲಿಲ್ಲ. ಕಿರುತೆರೆಯಲ್ಲೂ ಅವರು ಛಾಪು ಮೂಡಿಸಿದ್ದರು. ‘ಕನ್ನಡದ ಕೋಟ್ಯಧಿಪತಿ’, ‘ಫ್ಯಾಮಿಲಿ ಪವರ್​’ ಶೋಗಳನ್ನು ಅವರು ನಡೆಸಿಕೊಟ್ಟಿದ್ದರು. ‘ನೇತ್ರಾವತಿ’ ಮುಂತಾದ ಸೀರಿಯಲ್​ಗಳನ್ನು ನಿರ್ಮಾಣ ಮಾಡಿದ್ದರು. ಹಾಗಾಗಿ ಅವರಿಗೆ ಮನರಂಜನಾ ವಾಹಿನಿಗಳ ಜತೆ ಇದ್ದ ಒಡನಾಟ ಕೂಡ ಸದಾ ನೆನಪಿನಲ್ಲಿ ಉಳಿಯುವಂಥದ್ದು. ಆದ್ದರಿಂದ ‘ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​’ (Karnataka Television Association) ವತಿಯಿಂದ ‘ಅಪ್ಪು ಅಮರ’ (Appu Amara) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ನ.28ರ ಭಾನುವಾರದಂದು ಸಂಜೆ 4 ಗಂಟೆಗೆ ‘ಅಪ್ಪು ಅಮರ’ ಕಾರ್ಯಕ್ರಮ ನಡೆಯಲಿದೆ. ಜಯನಗರ ನ್ಯಾಷನಲ್​ ಕಾಲೇಜಿನ ಎಚ್​.ಎನ್​. ಕಲಾಕ್ಷೇತ್ರದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಕಿರುತೆರೆಯ ಬಹುತೇಕ ಎಲ್ಲ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸುವುದರ ಜೊತೆಗೆ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ವಿಶೇಷ ಕಾರ್ಯಕ್ರಮವಾಗಿ ‘ಅಪ್ಪು ಅಮರ’ ಇವೆಂಟ್​ ನಡೆಯಲಿದೆ.

‘ಅಪ್ಪು ಅಮರ’ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲ ಧಾರಾವಾಹಿ ನಿರ್ಮಾಣ ಸಂಸ್ಥೆಗಳ ಮುಖ್ಯಸ್ಥರ ಜೊತೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​ ಅಧ್ಯಕ್ಷ ಎಸ್​.ವಿ. ಶಿವಕುಮಾರ್​ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನ.28ರಂದು ಎಲ್ಲ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲು ಸೂಚಿಸಲಾಗಿದೆ. ಆ ಮೂಲಕ ಎಲ್ಲ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲ ಆಗುವಂತೆ ಮಾಡಿಕೊಡಲಾಗುತ್ತಿದೆ. ಯಾವೆಲ್ಲ ಕಲಾವಿದರು ಈ ಕಾರ್ಯಕ್ರಮಕ್ಕೆ ಬರುತ್ತಾರೆ? ಬೇರೆ ಯಾರಿಗೆಲ್ಲ ಪ್ರವೇಶ ಇದೆ? ಒಟ್ಟಾರೆ ಕಾರ್ಯಕ್ರಮದ ರೂಪುರೇಷೆ ಹೇಗಿರಲಿದೆ ಎಂಬ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳುವುದಾಗಿ ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​ ತಿಳಿಸಿದೆ.

ಇದನ್ನೂ ಓದಿ:

ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ರಾಜ್​-ಪುನೀತ್​ ಜೀವನ ಚರಿತ್ರೆ; ಇಲ್ಲಿದೆ ಅಭಿಮಾನಿಗಳಿಗೆ ಸಿಹಿ ಸುದ್ದಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ