AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ; ಗುರು ಕಿರಣ್ ಹೇಳಿದ್ದೇನು?

ಆಗಸ್ಟ್​ 14ರಂದು ಈ ರಿಯಾಲಿಟಿ ಶೋ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇದ್ದಾರೆ. ಈ ವೇದಿಕೆ ಮೇಲೆ ಪುನೀತ್​ ಅವರಿಗೆ ನಮನ ಸಲ್ಲಿಸಲಾಗಿದೆ.

ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ; ಗುರು ಕಿರಣ್ ಹೇಳಿದ್ದೇನು?
ಗುರುಕಿರಣ್​
TV9 Web
| Edited By: |

Updated on:Nov 04, 2021 | 7:16 PM

Share

ನಟ ಪುನೀತ್​ ರಾಜ್​ಕುಮಾರ್​ ಇಲ್ಲ ಎನ್ನುವ ವಿಚಾರವನ್ನು ಯಾರಿಂದಲೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಜನರು ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿಯಲ್ಲಿ ಪ್ರಸಾರವಾಗುತ್ತಿರುವ​ ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ ಸಲ್ಲಿಸಲಾಗಿದೆ. ಈ ವಾರದ ಎಪಿಸೋಡ್ ಸಂಪೂರ್ಣವಾಗಿ​ ಪುನೀತ್​ ನೆನಪು ಮಾಡಿಕೊಳ್ಳುವ ಹಾಗೂ ಅವರಿಗೆ ನಮನ ಸಲ್ಲಿಸುವ ಕೆಲಸ ವೇದಿಕೆ ಮೇಲೆ ಆಗಲಿದೆ ಎನ್ನಲಾಗುತ್ತಿದೆ.

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸಿದೆ. ಆಗಸ್ಟ್​ 14ರಂದು ಈ ರಿಯಾಲಿಟಿ ಶೋ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇದ್ದಾರೆ. ಈ ವೇದಿಕೆ ಮೇಲೆ ಪುನೀತ್​ ಅವರಿಗೆ ನಮನ ಸಲ್ಲಿಸಲಾಗಿದೆ.

ಪುನೀತ್​ ಹೃದಯಾಘಾತದಿಂದ ನಿಧನ ಹೊಂದುವ ಹಿಂದಿನ ದಿನ ಅಂದರೆ ಅಕ್ಟೋಬರ್​ 28ರ ರಾತ್ರಿ ಅವರು ಗಾಯಕ ಗುರುಕಿರಣ್​ ಅವರ ಮನೆಗೆ ತೆರಳಿದ್ದರು. ಗುರುಕಿರಣ್​ ಬರ್ತ್​ಡೇ ಪಾರ್ಟಿಯಲ್ಲಿ ಪುನೀತ್​ ನಗುತ್ತಾ ಓಡಾಡಿಕೊಂಡಿದ್ದರು. ಆದರೆ, ಮರುದಿನ 11 ಗಂಟೆ ಸುಮಾರಿಗೆ ಪುನೀತ್ ನಿಧನ ಹೊಂದಿದ್ದರು. ಈ ಘಟನೆ ಗುರುಕಿರಣ್​​ಗೆ ಶಾಕ್​ ನೀಡಿದೆ. ರಾತ್ರಿ ಪಾರ್ಟಿಯಲ್ಲಿ ಹಾಯಾಗಿ ಸಮಯ ಕಳೆದಿದ್ದ ಅಪ್ಪು ಮುಂಜಾನೆ ಇಲ್ಲ ಎನ್ನುವುದನ್ನು ಅವರ ಬಳಿ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅವರು ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ. ಮಾತು ಪೂರ್ಣಗೊಳ್ಳುವ ವೇಳೆ ಅವರ ಕಣ್ಣೀರ ಕೋಡಿ ಒಡೆದಿತ್ತು. ‘ರಾತ್ರಿ ನೋಡಿದ ವ್ಯಕ್ತಿ ಬೆಳಗ್ಗೆ ಇಲ್ಲ ಎಂದರೆ..’ ಎಂದು ಗುರುಕಿರಣ್​ ಭಾವುಕರಾದರು. ​​

ಇದನ್ನೂ ಓದಿ: ಬೆಂಗಳೂರಿನ ಎಸ್​ಆರ್​ವಿ ಥಿಯೇಟರ್​ನಲ್ಲಿ ಕೊನೆಯದಾಗಿ ಅಟೆಂಡ್​ ಮಾಡಿದ್ದ ಪುನೀತ್​; ಇಲ್ಲಿದೆ ಸಿಸಿಟಿವಿ ವಿಡಿಯೋ

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​

Published On - 6:54 pm, Thu, 4 November 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು