AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ; ಗುರು ಕಿರಣ್ ಹೇಳಿದ್ದೇನು?

ಆಗಸ್ಟ್​ 14ರಂದು ಈ ರಿಯಾಲಿಟಿ ಶೋ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇದ್ದಾರೆ. ಈ ವೇದಿಕೆ ಮೇಲೆ ಪುನೀತ್​ ಅವರಿಗೆ ನಮನ ಸಲ್ಲಿಸಲಾಗಿದೆ.

ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ; ಗುರು ಕಿರಣ್ ಹೇಳಿದ್ದೇನು?
ಗುರುಕಿರಣ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 04, 2021 | 7:16 PM

ನಟ ಪುನೀತ್​ ರಾಜ್​ಕುಮಾರ್​ ಇಲ್ಲ ಎನ್ನುವ ವಿಚಾರವನ್ನು ಯಾರಿಂದಲೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಜನರು ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿಯಲ್ಲಿ ಪ್ರಸಾರವಾಗುತ್ತಿರುವ​ ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ ಸಲ್ಲಿಸಲಾಗಿದೆ. ಈ ವಾರದ ಎಪಿಸೋಡ್ ಸಂಪೂರ್ಣವಾಗಿ​ ಪುನೀತ್​ ನೆನಪು ಮಾಡಿಕೊಳ್ಳುವ ಹಾಗೂ ಅವರಿಗೆ ನಮನ ಸಲ್ಲಿಸುವ ಕೆಲಸ ವೇದಿಕೆ ಮೇಲೆ ಆಗಲಿದೆ ಎನ್ನಲಾಗುತ್ತಿದೆ.

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸಿದೆ. ಆಗಸ್ಟ್​ 14ರಂದು ಈ ರಿಯಾಲಿಟಿ ಶೋ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇದ್ದಾರೆ. ಈ ವೇದಿಕೆ ಮೇಲೆ ಪುನೀತ್​ ಅವರಿಗೆ ನಮನ ಸಲ್ಲಿಸಲಾಗಿದೆ.

ಪುನೀತ್​ ಹೃದಯಾಘಾತದಿಂದ ನಿಧನ ಹೊಂದುವ ಹಿಂದಿನ ದಿನ ಅಂದರೆ ಅಕ್ಟೋಬರ್​ 28ರ ರಾತ್ರಿ ಅವರು ಗಾಯಕ ಗುರುಕಿರಣ್​ ಅವರ ಮನೆಗೆ ತೆರಳಿದ್ದರು. ಗುರುಕಿರಣ್​ ಬರ್ತ್​ಡೇ ಪಾರ್ಟಿಯಲ್ಲಿ ಪುನೀತ್​ ನಗುತ್ತಾ ಓಡಾಡಿಕೊಂಡಿದ್ದರು. ಆದರೆ, ಮರುದಿನ 11 ಗಂಟೆ ಸುಮಾರಿಗೆ ಪುನೀತ್ ನಿಧನ ಹೊಂದಿದ್ದರು. ಈ ಘಟನೆ ಗುರುಕಿರಣ್​​ಗೆ ಶಾಕ್​ ನೀಡಿದೆ. ರಾತ್ರಿ ಪಾರ್ಟಿಯಲ್ಲಿ ಹಾಯಾಗಿ ಸಮಯ ಕಳೆದಿದ್ದ ಅಪ್ಪು ಮುಂಜಾನೆ ಇಲ್ಲ ಎನ್ನುವುದನ್ನು ಅವರ ಬಳಿ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅವರು ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ. ಮಾತು ಪೂರ್ಣಗೊಳ್ಳುವ ವೇಳೆ ಅವರ ಕಣ್ಣೀರ ಕೋಡಿ ಒಡೆದಿತ್ತು. ‘ರಾತ್ರಿ ನೋಡಿದ ವ್ಯಕ್ತಿ ಬೆಳಗ್ಗೆ ಇಲ್ಲ ಎಂದರೆ..’ ಎಂದು ಗುರುಕಿರಣ್​ ಭಾವುಕರಾದರು. ​​

ಇದನ್ನೂ ಓದಿ: ಬೆಂಗಳೂರಿನ ಎಸ್​ಆರ್​ವಿ ಥಿಯೇಟರ್​ನಲ್ಲಿ ಕೊನೆಯದಾಗಿ ಅಟೆಂಡ್​ ಮಾಡಿದ್ದ ಪುನೀತ್​; ಇಲ್ಲಿದೆ ಸಿಸಿಟಿವಿ ವಿಡಿಯೋ

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​

Published On - 6:54 pm, Thu, 4 November 21

ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ