ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಯುವರತ್ನ’ ಚಿತ್ರ; ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ವಿವರ

ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಚಿತ್ರ 2021ರ ಏಪ್ರಿಲ್​ 1ರಂದು ಥಿಯೇಟರ್​​​ನಲ್ಲಿ ಬಿಡುಗಡೆ ಆಗಿತ್ತು. ಆಗ ಕೊರೊನಾ 2ನೇ ಅಲೆ ಶುರುವಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ಸಿನಿಮಾ ನೋಡಲು ಸಾಧ್ಯವಾಗಿರಲಿಲ್ಲ.

ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಯುವರತ್ನ’ ಚಿತ್ರ; ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ವಿವರ
ಪುನೀತ್​ ರಾಜ್​ಕುಮಾರ್
Follow us
| Edited By: ಮದನ್​ ಕುಮಾರ್​

Updated on: Jan 07, 2022 | 8:38 AM

ಪುನೀತ್​ ರಾಜ್​ಕುಮಾರ್​ (Puneeth Rajkumar) ಇದ್ದಾಗ ಬಿಡುಗಡೆಯಾದ ಅವರ ಕೊನೇ ಸಿನಿಮಾ ‘ಯುವರತ್ನ’. ಕೊರೊನಾ ಹಾವಳಿಯ ಕಾರಣದಿಂದ ಚಿತ್ರಮಂದಿರದಲ್ಲಿ ಆ ಸಿನಿಮಾ ಹೆಚ್ಚು ದಿನ ಪ್ರದರ್ಶನ ಕಾಣಲು ಸಾಧ್ಯವಾಗಿರಲಿಲ್ಲ. ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆ ಆಯಿತು. ಅಲ್ಲಿಯೂ ಸಿನಿಮಾವನ್ನು ಮಿಸ್​ ಮಾಡಿಕೊಂಡವರಿಗೆ ಈಗ ಇನ್ನೊಂದು ಸೂಪರ್​ ಅವಕಾಶ ಸಿಗುತ್ತಿದೆ. ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ‘ಯುವರತ್ನ’ (Yuvarathnaa Movie) ಸಿನಿಮಾವನ್ನು ಪ್ರಸಾರ ಮಾಡಲು ದಿನಾಂಕ ನಿಗದಿ ಆಗಿದೆ. ಉದಯ ಟಿವಿ (Udaya TV) ಪ್ರೇಕ್ಷಕರು ಆ ದಿನಕ್ಕಾಗಿ ಕಾದಿದ್ದಾರೆ. ಜ.15ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಜೆ 6.30ಕ್ಕೆ ‘ಯುವರತ್ನ’ ಚಿತ್ರ ಪ್ರಸಾರ ಆಗಲಿದೆ. ಈ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದು, ಸಾಯೆಶಾ ಸೈಗಲ್ ನಾಯಕಿಯಾಗಿ ನಟಿಸಿದ್ದಾರೆ.

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ‘ಯುವರತ್ನ’ ಸಿನಿಮಾ ನಿರ್ಮಾಣ ಆಗಿದೆ. 2021ರ ಏಪ್ರಿಲ್​ 1ರಂದು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆ ಸಂದರ್ಭದಲ್ಲಿ ಕೊರೊನಾ 2ನೇ ಅಲೆಯ ಹಾವಳಿ ಇದ್ದಿದ್ದರಿಂದ ಚಿತ್ರಮಂದಿರದಲ್ಲಿ ಶೇ.50 ಆಸನ ಮಿತಿ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಚಿತ್ರದ ಕಲೆಕ್ಷನ್​ಗೆ ಹೊಡೆತಬಿದ್ದಿತ್ತು. ಅಲ್ಲದೇ ಬಹುಪಾಲು ಪ್ರೇಕ್ಷಕರಿಗೆ ಈ ಚಿತ್ರವನ್ನು ನೋಡಲು ಸಾಧ್ಯವಾಗಿರಲಿಲ್ಲ.

ಈಗ ಕಿರುತೆರೆಯಲ್ಲಿ ‘ಯುವರತ್ನ’ ಪ್ರಸಾರ ಆಗಲಿರುವುದರಿಂದ ಅಪ್ಪು ಅಭಿಮಾನಿಗಳು, ಕನ್ನಡ ಸಿನಿಮಾ ಪ್ರಿಯರು ಈ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು. ಸೋಶಿಯಲ್​ ಮೀಡಿಯಾದಲ್ಲಿ ಉದಯ ವಾಹಿನಿ ಈಗಾಗಲೇ ಪ್ರೋಮೋ ಹಂಚಿಕೊಂಡಿದೆ. ಆ ಮೂಲಕ ವೀಕ್ಷಕರ ಮನದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​​ಕುಮಾರ್​ ಅವರು ಎರಡನೇ ಬಾರಿಗೆ ಜೊತೆಯಾಗಿ ಕೆಲಸ ಮಾಡಿದ ಸಿನಿಮಾ ಇದು. ಇವರಿಬ್ಬರ ಕಾಂಬಿನೇಷನ್​ ಇಷ್ಟಪಡುವ ಪ್ರೇಕ್ಷಕರಿಗೆ ‘ಯುವರತ್ನ’ ಹೆಚ್ಚು ಮನರಂಜನೆ ನೀಡಲಿದೆ.

ಕೆಲಸ ಮುಂದುವರಿಸಿದ ಜೇಮ್ಸ್​ ಸಿನಿಮಾ:

ಪುನೀತ್​ ರಾಜ್​ಕುಮಾರ್​ ನಿಧನದಿಂದಾಗಿ ಕನ್ನಡ ಚಿತ್ರರಂಗಕ್ಕೆ ನಷ್ಟ ಆಗಿದೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದ ಅವರು ಎಲ್ಲ ಕೆಲಸಗಳನ್ನು ಅರ್ಧಕ್ಕೆ ಬಿಟ್ಟು ಇಹಲೋಕ ತ್ಯಜಿಸಿದರು. ಪುನೀತ್​ ನಟಿಸುತ್ತಿದ್ದ ‘ಜೇಮ್ಸ್​​’ ಸಿನಿಮಾದ ಮೇಲೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಆ ಚಿತ್ರದ ಶೂಟಿಂಗ್​ ಮುಗಿಯುವುದಕ್ಕೂ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದು ಬೇಸರದ ಸಂಗತಿ. ಚೇತನ್​ ಕುಮಾರ್​ ನಿರ್ದೇಶನದ ಈ ಚಿತ್ರದ ಶೂಟಿಂಗ್​ ಅರ್ಧಕ್ಕೆ ನಿಂತಿತ್ತು. ಈಗ ಪುನೀತ್​ ಇಲ್ಲ ಎಂಬ ನೋವಿನ ನಡುವೆಯೂ ಸಿನಿಮಾದ ಶೂಟಿಂಗ್​ ಪುನಾರಂಭ ಆಗಿದೆ. ಪುನೀತ್​ ನಟಿಸಿದ್ದ ‘ಲಕ್ಕಿ ಮ್ಯಾನ್​’ ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ:

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ಪುನೀತ್​ ರಾಜ್​ಕುಮಾರ್​ಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ; ವೇದಿಕೆಯಲ್ಲಿ ಭಾವುಕರಾದ ಶಿವಣ್ಣ

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ