AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಯುವರತ್ನ’ ಚಿತ್ರ; ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ವಿವರ

ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಚಿತ್ರ 2021ರ ಏಪ್ರಿಲ್​ 1ರಂದು ಥಿಯೇಟರ್​​​ನಲ್ಲಿ ಬಿಡುಗಡೆ ಆಗಿತ್ತು. ಆಗ ಕೊರೊನಾ 2ನೇ ಅಲೆ ಶುರುವಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ಸಿನಿಮಾ ನೋಡಲು ಸಾಧ್ಯವಾಗಿರಲಿಲ್ಲ.

ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಯುವರತ್ನ’ ಚಿತ್ರ; ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ವಿವರ
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Jan 07, 2022 | 8:38 AM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಇದ್ದಾಗ ಬಿಡುಗಡೆಯಾದ ಅವರ ಕೊನೇ ಸಿನಿಮಾ ‘ಯುವರತ್ನ’. ಕೊರೊನಾ ಹಾವಳಿಯ ಕಾರಣದಿಂದ ಚಿತ್ರಮಂದಿರದಲ್ಲಿ ಆ ಸಿನಿಮಾ ಹೆಚ್ಚು ದಿನ ಪ್ರದರ್ಶನ ಕಾಣಲು ಸಾಧ್ಯವಾಗಿರಲಿಲ್ಲ. ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆ ಆಯಿತು. ಅಲ್ಲಿಯೂ ಸಿನಿಮಾವನ್ನು ಮಿಸ್​ ಮಾಡಿಕೊಂಡವರಿಗೆ ಈಗ ಇನ್ನೊಂದು ಸೂಪರ್​ ಅವಕಾಶ ಸಿಗುತ್ತಿದೆ. ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ‘ಯುವರತ್ನ’ (Yuvarathnaa Movie) ಸಿನಿಮಾವನ್ನು ಪ್ರಸಾರ ಮಾಡಲು ದಿನಾಂಕ ನಿಗದಿ ಆಗಿದೆ. ಉದಯ ಟಿವಿ (Udaya TV) ಪ್ರೇಕ್ಷಕರು ಆ ದಿನಕ್ಕಾಗಿ ಕಾದಿದ್ದಾರೆ. ಜ.15ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಜೆ 6.30ಕ್ಕೆ ‘ಯುವರತ್ನ’ ಚಿತ್ರ ಪ್ರಸಾರ ಆಗಲಿದೆ. ಈ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದು, ಸಾಯೆಶಾ ಸೈಗಲ್ ನಾಯಕಿಯಾಗಿ ನಟಿಸಿದ್ದಾರೆ.

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ‘ಯುವರತ್ನ’ ಸಿನಿಮಾ ನಿರ್ಮಾಣ ಆಗಿದೆ. 2021ರ ಏಪ್ರಿಲ್​ 1ರಂದು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆ ಸಂದರ್ಭದಲ್ಲಿ ಕೊರೊನಾ 2ನೇ ಅಲೆಯ ಹಾವಳಿ ಇದ್ದಿದ್ದರಿಂದ ಚಿತ್ರಮಂದಿರದಲ್ಲಿ ಶೇ.50 ಆಸನ ಮಿತಿ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಚಿತ್ರದ ಕಲೆಕ್ಷನ್​ಗೆ ಹೊಡೆತಬಿದ್ದಿತ್ತು. ಅಲ್ಲದೇ ಬಹುಪಾಲು ಪ್ರೇಕ್ಷಕರಿಗೆ ಈ ಚಿತ್ರವನ್ನು ನೋಡಲು ಸಾಧ್ಯವಾಗಿರಲಿಲ್ಲ.

ಈಗ ಕಿರುತೆರೆಯಲ್ಲಿ ‘ಯುವರತ್ನ’ ಪ್ರಸಾರ ಆಗಲಿರುವುದರಿಂದ ಅಪ್ಪು ಅಭಿಮಾನಿಗಳು, ಕನ್ನಡ ಸಿನಿಮಾ ಪ್ರಿಯರು ಈ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು. ಸೋಶಿಯಲ್​ ಮೀಡಿಯಾದಲ್ಲಿ ಉದಯ ವಾಹಿನಿ ಈಗಾಗಲೇ ಪ್ರೋಮೋ ಹಂಚಿಕೊಂಡಿದೆ. ಆ ಮೂಲಕ ವೀಕ್ಷಕರ ಮನದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​​ಕುಮಾರ್​ ಅವರು ಎರಡನೇ ಬಾರಿಗೆ ಜೊತೆಯಾಗಿ ಕೆಲಸ ಮಾಡಿದ ಸಿನಿಮಾ ಇದು. ಇವರಿಬ್ಬರ ಕಾಂಬಿನೇಷನ್​ ಇಷ್ಟಪಡುವ ಪ್ರೇಕ್ಷಕರಿಗೆ ‘ಯುವರತ್ನ’ ಹೆಚ್ಚು ಮನರಂಜನೆ ನೀಡಲಿದೆ.

ಕೆಲಸ ಮುಂದುವರಿಸಿದ ಜೇಮ್ಸ್​ ಸಿನಿಮಾ:

ಪುನೀತ್​ ರಾಜ್​ಕುಮಾರ್​ ನಿಧನದಿಂದಾಗಿ ಕನ್ನಡ ಚಿತ್ರರಂಗಕ್ಕೆ ನಷ್ಟ ಆಗಿದೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದ ಅವರು ಎಲ್ಲ ಕೆಲಸಗಳನ್ನು ಅರ್ಧಕ್ಕೆ ಬಿಟ್ಟು ಇಹಲೋಕ ತ್ಯಜಿಸಿದರು. ಪುನೀತ್​ ನಟಿಸುತ್ತಿದ್ದ ‘ಜೇಮ್ಸ್​​’ ಸಿನಿಮಾದ ಮೇಲೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಆ ಚಿತ್ರದ ಶೂಟಿಂಗ್​ ಮುಗಿಯುವುದಕ್ಕೂ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದು ಬೇಸರದ ಸಂಗತಿ. ಚೇತನ್​ ಕುಮಾರ್​ ನಿರ್ದೇಶನದ ಈ ಚಿತ್ರದ ಶೂಟಿಂಗ್​ ಅರ್ಧಕ್ಕೆ ನಿಂತಿತ್ತು. ಈಗ ಪುನೀತ್​ ಇಲ್ಲ ಎಂಬ ನೋವಿನ ನಡುವೆಯೂ ಸಿನಿಮಾದ ಶೂಟಿಂಗ್​ ಪುನಾರಂಭ ಆಗಿದೆ. ಪುನೀತ್​ ನಟಿಸಿದ್ದ ‘ಲಕ್ಕಿ ಮ್ಯಾನ್​’ ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ:

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ಪುನೀತ್​ ರಾಜ್​ಕುಮಾರ್​ಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ; ವೇದಿಕೆಯಲ್ಲಿ ಭಾವುಕರಾದ ಶಿವಣ್ಣ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ