AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ?

ಜೀ ಕನ್ನಡದ ಯಶಸ್ವಿ ಧಾರಾವಾಹಿ 'ಪುಟ್ಟಕ್ಕನ ಮಕ್ಕಳು' 1100ಕ್ಕೂ ಹೆಚ್ಚು ಸಂಚಿಕೆಗಳ ನಂತರ ಮುಕ್ತಾಯಗೊಳ್ಳಲು ಸಿದ್ಧವಾಗಿದೆ. ಅತ್ಯಧಿಕ ಟಿಆರ್‌ಪಿ ಗಳಿಸಿದ್ದ ಈ ಧಾರಾವಾಹಿಯ ಅಂತ್ಯ ವೀಕ್ಷಕರಿಗೆ ನಿರಾಶೆ ಮೂಡಿಸಿದೆ. ಇದರ ಬದಲು 'ಕೃಷ್ಣ ರುಕ್ಕು' ಎಂಬ ಹೊಸ ಧಾರಾವಾಹಿ ಪ್ರಸಾರವಾಗಲಿದ್ದು, ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ.

ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ?
ಜೀ ಕನ್ನಡ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 17, 2026 | 7:52 AM

Share

ಜೀ ಕನ್ನಡ ವಾಹಿನಿಯಲ್ಲಿ ಹಲವು ಸೂಪರ್ ಹಿಟ್ ಧಾರಾವಾಹಿಗಳು ಬರುತ್ತಾ ಇವೆ. ಈ ಧಾರಾವಾಹಿಗಳು ಟಿಆರ್ಪಿಯಲ್ಲಿ ಉತ್ತಮ ವಿಮರ್ಶೆ ಪಡೆದು ಮುಂದೆ ಸಾಗುತ್ತಿವೆ. ಈ ರೀತಿ ಉತ್ತಮ ಟಿಆರ್ಪಿ ಪಡೆದ ಧಾರಾವಾಹಿಗಳ ಪೈಕಿ ಒಂದು ಧಾರಾವಾಹಿಯು ಕೊನೆಗೊಳ್ಳುವ ಸಮಯ ಬಂದಿದೆ ಎಂದರೆ ನೀವು ನಂಬಲೇ ಬೇಕು. ಅಷ್ಟಕ್ಕೂ ಯಾವುದು ಆ ಧಾರಾವಾಹಿ? ಪುಟ್ಟಕನ್ನ ಮಕ್ಕಳು.

ಈ ಧಾರಾವಾಹಿ ವೀಕ್ಷಕರ ವಲಯದಲ್ಲಿ ಸಾಕಷ್ಟು ಹಲ್ ಚಲ್ ಸೃಷ್ಟಿಸಿತ್ತು. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯಿತು. ಧಾರಾವಾಹಿಯನ್ನು ಜನರು ಸಾಕಷ್ಟು ಇಷ್ಟಪಟ್ಟರು. ಟಿಆರ್ಪಿಯಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆಯಿತು. ಹಲವು ತಿಂಗಳಕಾಲ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಇತ್ತು. ಈ ಧಾರಾವಾಹಿಯನ್ನು ಯಾರು ಕೂಡ ಬೀಟ್ ಮಾಡಲು ಸಾಧ್ಯ ಆಗಿರಲೇ ಇಲ್ಲ.

ಮೊದಲು ಪ್ರೈಮ್ ಟೈಮ್ನಲ್ಲಿ ಪುಟ್ಟಕ್ಕನ ಮಕ್ಕಳು ಪ್ರಸಾರ ಕಾಣುತ್ತಾ ಇತ್ತು. ನಂತರ ಒಂದು ಹಂತದ ಬಳಿಕ ಈ ಧಾರಾವಾಹಿಯ ಟೈಮ್ನಲ್ಲಿ ಬದಲಾವಣೆ ಮಾಡಲಾಯಿತು. ಸಂಜೆ 6 ಗಂಟೆಗೆ ಧಾರಾವಾಹಿ ಪ್ರಸಾರ ಕಾಣಲು ಆರಂಭ ಆಯಿತು. ಈ ಧಾರಾವಾಹಿಯ ಪ್ರಮುಖ ಪಾತ್ರಗಳನ್ನೇ ಕೊನೆ ಮಾಡಿ ವೀಕ್ಷಕರಿಗೆ ಬೇಸರ ಮೂಡುವಂತೆ ಮಾಡಿದರು. ಈಗ ಧಾರಾವಾಹಿ ಕಿನೆ ಆಗೋ ಸಮಯ ಬಂದಿದೆ ಎಂದು ವರದಿ ಆಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈಗಾಗಲೇ 1100+ ಎಪಿಸೋಡ್ಗಳು ಪ್ರಸಾರ ಕಂಡಿವೆ. ಇದು ಧಾರಾವಾಹಿ ಹೆಚ್ಚುಗಾರಿಕೆ. ಹಲವು ವರ್ಷಗಳ ಕಾಲ ಧಾರಾವಾಹಿ ಪ್ರಸಾರ ಕಂಡು ಕೊನೆ ಆಗುತ್ತಿದೆ. ಇದು ವೀಕ್ಷಕರಿಗೆ ಬೇಸರ ಮೂಡಿಸುತ್ತಿದೆ.

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಿಡಲು ನಿಜವಾದ ಕಾರಣ ಹೇಳಿದ ಸಂಜನಾ ಬುರ್ಲಿ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಳಿಕ ‘ಕೃಷ್ಣ ರುಕ್ಕು’ ಹೆಸರಿನ ಧಾರಾವಾಹಿಯು ಪ್ರಸಾರ ಕಾಣುವ ಸಾಧ್ಯತೆ ಇದೆ. ಈ ಧಾರಾವಾಹಿಯ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕಲರ್ಸ್ ಕನ್ನಡದ ಮೌನ ಗುಡ್ಡೆ ಮನೆ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More