AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​ನಲ್ಲಿ 3ನೇ ಸ್ಥಾನಕ್ಕೇರಿದ ‘ಅಮೃತಧಾರೆ’; ಟಾಪ್ 5ರಿಂದ ಹೊರನಡೆದ ‘ಭಾಗ್ಯಲಕ್ಷ್ಮೀ’, ‘ಲಕ್ಷ್ಮೀ ಬಾರಮ್ಮ’

‘ಅಮೃತಧಾರೆ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮುನ್ನುಗ್ಗುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ದಾಖಲೆಯ ಟಿಆರ್​ಪಿ ಪಡೆದಿದೆ.

ಟಿಆರ್​ಪಿ ರೇಸ್​ನಲ್ಲಿ 3ನೇ ಸ್ಥಾನಕ್ಕೇರಿದ ‘ಅಮೃತಧಾರೆ’; ಟಾಪ್ 5ರಿಂದ ಹೊರನಡೆದ ‘ಭಾಗ್ಯಲಕ್ಷ್ಮೀ’, ‘ಲಕ್ಷ್ಮೀ ಬಾರಮ್ಮ’
ಕನ್ನಡ ಸೀರಿಯಲ್ಸ್​ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Jun 29, 2023 | 1:58 PM

Share

ಟಿಆರ್​ಪಿ ರೇಸ್​ನಲ್ಲಿ ಒಬ್ಬರು ಮೇಲೆ ಹೋದರೆ, ಮತ್ತೊಬ್ಬರು ಕೆಳಗೆ ಬರುತ್ತಾರೆ. ಇತ್ತೀಚೆಗೆ ಆರಂಭ ಆದ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಟಿಆರ್​ಪಿ ರೇಸ್​ನಲ್ಲಿ ಮುನ್ನುಗ್ಗುತ್ತಿದೆ. ಈ ಮೊದಲು ಏಳನೇ ಸ್ಥಾನದಲ್ಲಿ ಇದ್ದ ಈ ಧಾರಾವಾಹಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಈ ಧಾರಾವಾಹಿಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ (Puttukkana Makkalu) ಧಾರಾವಾಹಿ ದಾಖಲೆಯ ಟಿಆರ್​ಪಿ ಪಡೆದಿದೆ. ಜೂನ್ 16ರಿಂದ ಜೂನ್ 23ರವರೆಗೆ ಯಾವ ಧಾರಾವಾಹಿ ಟಾಪ್ ಏಳರಲ್ಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಉಳಿದಂತೆ ‘ಲಕ್ಷ್ಮೀ ಬಾರಮ್ಮ’, ‘ಭಾಗ್ಯ ಲಕ್ಷ್ಮೀ’ ಧಾರಾವಾಹಿಗಳು ಟಾಪ್​ ಐದರಲ್ಲಿ ಸ್ಥಾನ ಪಡೆದಿಲ್ಲ.

‘ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಪುಟ್ಟಕ್ಕನ ಮಕ್ಕಳ ಮದುವೆಯ ಎಪಿಸೋಡ್​ಗಳು ಪ್ರಸಾರ ಕಾಣುತ್ತಿವೆ. ಈ ಕಾರಣಕ್ಕೆ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಈ ಧಾರಾವಾಹಿ ಡಬಲ್ ಡಿಜಿಟ್ ಟಿಆರ್​ಪಿ ಪಡೆದಿದೆ. ಈ ಮೂಲಕ ದಾಖಲೆ ಬರೆದಿದೆ. ಇತ್ತೀಚಿನ ದಿನಗಳಲ್ಲಿ ಯಾವ ಧಾರಾವಾಹಿಯೂ ಈ ಮಟ್ಟದ ಟಿಆರ್​ಪಿ ಪಡೆದಿರಲಿಲ್ಲ.

‘ಗಟ್ಟಿಮೇಳ’

ಇತ್ತೀಚಿನ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಒಂದೇ ರೀತಿಯ ಟಿಆರ್​ಪಿ ಕಾಯ್ದುಕೊಂಡು ಹೋಗುತ್ತಿದೆ. ಈ ಧಾರಾವಾಹಿ ಎರಡನೇ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. 1000+ ಎಪಿಸೋಡ್ ಆದರೂ ವೀಕ್ಷಕರ ವರ್ಗ ಕಡಿಮೆ ಆಗಿಲ್ಲ.

‘ಅಮೃತಧಾರೆ’

ರಾಜೇಶ್ ನಟರಂಗ, ಛಾಯಾ ಸಿಂಗ್, ಸಿಹಿ ಕಹಿ ಚಂದ್ರು ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಅಮೃತಧಾರೆ’ ಧಾರಾವಾಹಿ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಧಾರಾವಾಹಿಯ ಟಿಆರ್​ಪಿ ದಿನ ಕಳೆದಂತೆ ಹೆಚ್ಚುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ.

ಶ್ರೀರಸ್ತು ಶುಭಮಸ್ತು

ಸುಧಾರಾಣಿ ಮೊದಲಾದವರು ನಟಿಸುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ನಾಲ್ಕನೇ ಸ್ಥಾನ ಕಾಯ್ದುಕೊಂಡಿದೆ. ಈ ಧಾರಾವಾಹಿ ಬೇಡಿಕೆ ಕಾಯ್ದುಕೊಂಡಿದೆ.

‘ನಮ್ಮ ಲಚ್ಚಿ’

‘ನಮ್ಮ ಲಚ್ಚಿ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ

‘ಭಾಗ್ಯಲಕ್ಷ್ಮೀ’-ಲಕ್ಷ್ಮೀ ಬಾರಮ್ಮ

‘ಭಾಗ್ಯಲಕ್ಷ್ಮೀ’ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಈಗ ಈ ಧಾರಾವಾಹಿ ಏಳನೇ ಸ್ಥಾನಕ್ಕೆ ಇಳಿದಿದೆ. ಟಾಪ್ ಐದರಲ್ಲಿ ಇರುತ್ತಿದ್ದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಆರನೇ ಸ್ಥಾನಕ್ಕೆ ಇಳಿದಿದೆ. ಈ ಎರಡೂ ಧಾರಾವಾಹಿಗಳ ಟಿಆರ್​ಪಿ ಕೊಂಚ ತಗ್ಗಿದೆ. ಈ ಧಾರಾವಾಹಿಗಳು ಮತ್ತೆ ಕಂಬ್ಯಾಕ್ ಮಾಡಲಿದೆ ಅನ್ನೋದು ವೀಕ್ಷಕರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ