AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ದಾಖಲೆ ಬರೆದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ

Puttakkana Makkalu serial: ಉಮಾಶ್ರೀ, ಮಂಜುಭಾಷಿಣಿ, ರಮೇಶ್ ಪಂಡಿತ್ ಇನ್ನೂ ಹಲವು ಹಿರಿಯ ಕಲಾವಿದರು ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಸಾವಿರ ಕಂತುಗಳನ್ನು ಪೂರೈಸಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಕೆಲವು ಅಪರೂಪದ ದಾಖಲೆಗಳನ್ನು ಸಹ ಬರೆದಿದೆ. ಧಾರಾವಾಹಿ ಯಶಸ್ವಿಯಾಗಿ ಸಾಗುತ್ತಿರುವುದಕ್ಕೆ ಧಾರಾವಾಹಿ ತಂಡ ಸಂಭ್ರಮಾಚರಣೆ ಮಾಡಿದೆ.

ಅಪರೂಪದ ದಾಖಲೆ ಬರೆದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ
Puttakkana Makkalu
ಮಂಜುನಾಥ ಸಿ.
|

Updated on: Jun 08, 2025 | 6:45 PM

Share

ನಟಿ ಉಮಾಶ್ರಿ (Umashree) ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಯಶಸ್ವಿಯಾಗಿ 1000 ಕಂತುಗಳನ್ನು ಪೂರೈಸಿದೆ. 2021 ರ ಡಿಸೆಂಬರ್ 13 ರಂದು ಪ್ರಸಾರ ಆರಂಭಿಸಿದ ಈ ಧಾರಾವಾಹಿ ನಾಲ್ಕು ವರ್ಷಗಳ ಸತತ ಪ್ರಸಾರ ಕಂಡಿದೆ. ಈಗಲೂ ಕಾಣುತ್ತಿದೆ. ಧಾರಾವಾಹಿ ಪ್ರಸಾರ ಆರಂಭಿಸಿದ ಆರಂಭದಲ್ಲಿ ಮೊದಲ ವಾರವೇ ದಾಖಲೆಯ ಟಿಆರ್​​ಪಿ ಕಂಡಿತ್ತು ಈ ಧಾರಾವಾಹಿ. ಆರಂಭದ ಎಪಿಸೋಡುಗಳನ್ನು ನೋಡಿ, ಸಣ್ಣ ಪರದೆಯ ಸಿನಿಮಾ ಎಂದು ಮೆಚ್ಚುಗೆಗೆ ಪ್ರಾಪ್ತವಾಗಿತ್ತು. ಹಲವು ದಾಖಲೆಗಳನ್ನು ಈ ಧಾರಾವಾಹಿ ತಮ್ಮ ಮುಡಿಗೇರಿಸಿಕೊಂಡಿದೆ.

ಆರೂರು ಜಗದೀಶ್ ನಿರ್ದೇಶನ ಮಾಡಿರುವ ಈ ಧಾರಾವಾಹಿ ರಾಜ್ಯದ ಮಾತ್ರವಲ್ಲದೆ ಅನಿವಾಸಿ ಕನ್ನಡಿಗರ ಮೆಚ್ಚಿನ ಧಾರಾವಾಹಿ ಆಗಿದೆ. ರಾಜ್ಯದಲ್ಲಿ ಮಾತ್ರವಲ್ಲದೆ ಹೊರ ರಾಜ್ಯ, ಹೊರ ದೇಶಗಳಲ್ಲಿಯೂ ಈ ಧಾರಾವಾಹಿಗೆ ಅಭಿಮಾನಿಗಳಿದ್ದಾರೆ. ನಿರ್ಮಾಪಕಿ ಸ್ಮಿತಾ ಜೆ ಶೆಟ್ಟಿಯವರ, ಜೆ ಎಸ್ ಪ್ರೊಡಕ್ಷನ್ಸ್ ಸಂಸ್ಥೆಯು ‘ಶುಭ ವಿವಾಹ, ಜೋಡಿ ಹಕ್ಕಿ, ಜೊತೆ ಜೊತೆಯಲಿ’ ಯಂತಹ ಯಶಸ್ವಿ ಧಾರಾವಾಹಿಗಳನ್ನು ನೀಡಿದ್ದು, ಈಗ ‘ಪುಟ್ಟಕ್ಕನ ಮಕ್ಕಳು’ ಸಾವಿರ ಕಂತು ದಾಟಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ.

ಉಮಾಶ್ರೀ, ಮಂಜು ಭಾಷಿಣಿ, ರಮೇಶ್ ಪಂಡಿತ್, ಸಾರಿಕಾ, ಗುರು ಹೆಗ್ಡೆ ಇನ್ನೂ ಕೆಲವು ಹಿರಿಯ ಕಲಾವಿದರ ಜೊತೆಗೆ, ಧನುಷ್, ಅಕ್ಷರ, ವಿದ್ಯಾ, ಶಿಲ್ಪ, ಅನಿರೀಶ್, ಮುಂತಾದ ಉದಯೋನ್ಮುಖ ಕಲಾವಿದರ ತಾರಾಗಣ ಹೊಂದಿರುವ ಪುಟ್ಟಕ್ಕನ ಮಕ್ಕಳು, ರಾಜ್ಯದ ಪ್ರತಿ ಮನೆಯಲ್ಲಿಯೂ ಸ್ಥಾನ ಪಡೆದಿದೆ. ಧಾರಾವಾಹಿಯಲ್ಲಿ ನಟಿಸಿದ ಕಲಾವಿದರಿಗೆ ಹೊಸ ಜೀವನವನ್ನು ನೀಡಿದೆ.

ಬರಹಗಾರರಾದ ಸತ್ಯಕಿಯವರ ಚಿತ್ರಕಥೆ ಮತ್ತು ಸಂಭಾಷಣೆ ಈ ಧಾರಾವಾಹಿಯ ಜೀವಾಳ. ಪ್ರಧಾನ ನಿರ್ದೇಶಕರಾದ ಆರೂರು ಜಗದೀಶ್, ಸಂಚಿಕೆ ನಿರ್ದೇಶಕರಾದ ಮಹೇಶ್ ಸಾರಂಗ್, ಸಹ ನಿರ್ದೇಶಕರಾದ ಮುರಳಿ, ಸಂಕಲನರಾದ ಜಯಚಂದ್ರ, ಹಾಗು ಪ್ರೊಡಕ್ಷನ್ ಮ್ಯಾನೇಜರಿಂದ ಹಿಡಿದು, ಸೆಟ್ ಹುಡುಗರು, ಕ್ಯಾಮೆರಾ ಮತ್ತು ಲೈಟ್ ವಿಭಾಗ, ಮೇಕಪ್, ಊಟೋಪಚಾರ, ಆಫೀಸಿನ ಅಕೌಂಟ್ ಸೆಕ್ಷನ್ ಹೀಗೆ ಎಲ್ಲರ ಶ್ರಮವೂ ಈ ಧಾರಾವಾಹಿಯ ಯಶಸ್ಸಿಗೆ ಕಾರಣವಾಗಿದ್ದಾರೆ.

ಇದನ್ನೂ ಓದಿ:ಹೊಸ ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಐಶ್ವರ್ಯಾ; ನೆಗೆಟಿವ್ ಪಾತ್ರ

ಈ ಧಾರಾವಾಹಿ ಕೇವಲ ಮನೊರಂಜನೆಗೆ ಮಾತ್ರವೇ ಸೀಮಿತ ಆಗದೆ. ಸಾಕಷ್ಟು ಸಾಮಾಜಿಕ ವಿಷಯಗಳನ್ನು ಚರ್ಚಿಸುತ್ತಾ ಬಂದಿದೆ. ಕೌಟುಂಬಿಕ ಮೌಲ್ಯಗಳು, ಹೊಂದಾಣಿಕೆ, ತ್ಯಾಗ, ಪ್ರಾಮಾಣಿಕತೆ, ಸಮಸ್ಯೆಗಳನ್ನು ಎದುರಿಸುವ ಛಲ ಇನ್ನಿತರೆ ಜೀವನ ಪಾಠಗಳನ್ನು ಪುಟ್ಟಕ್ಕ ಧಾರಾವಾಹಿಯಲ್ಲಿ ಬೋಧಿಸುತ್ತಾ ಬಂದಿದ್ದಾಳೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಸ್ಪೂರ್ತಿಯಿಂದ ಹೋಟೆಲ್ ಆರಂಭಿಸಿದ ಮಹಿಳೆಯರು ರಾಜ್ಯದಲ್ಲಿದ್ದಾರೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ 1000 ಕಂತು ಪೂರೈಸಿದ ಖುಷಿಯಲ್ಲಿ ಧಾರಾವಾಹಿ ತಂಡವು ಸಂಭ್ರಮಾಚರಣೆ ಮಾಡಿದ್ದು, ಉಮಾಶ್ರೀ ಹಾಗೂ ಇತರೆ ಕಲಾವಿದರು, ತಂತ್ರಜ್ಞರಿಗೆ ಅಭಿನಂದನೆ ಸಲ್ಲಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು