AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕ’ನ ಮಗಳು ಸ್ನೇಹಾ ಅಂತ್ಯ ಸಂಸ್ಕಾರ; ಕಣ್ಣೀರು ಹಾಕಿದ ವೀಕ್ಷಕರು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ (ಸಂಜನಾ ಬುರ್ಲಿ) ಅವರ ಅನಿರೀಕ್ಷಿತ ಮರಣವು ವೀಕ್ಷಕರನ್ನು ಆಘಾತಕ್ಕೀಡು ಮಾಡಿದೆ. ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಸ್ನೇಹಾ ಅವರ ಸಾವು ಧಾರಾವಾಹಿಯ ಮುಂದಿನ ಭಾಗಗಳ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದು ಕುತೂಹಲಕರವಾಗಿದೆ. ವೀಕ್ಷಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಧಾರಾವಾಹಿಯ ನಿರ್ದೇಶಕರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಪುಟ್ಟಕ್ಕ’ನ ಮಗಳು ಸ್ನೇಹಾ ಅಂತ್ಯ ಸಂಸ್ಕಾರ; ಕಣ್ಣೀರು ಹಾಕಿದ ವೀಕ್ಷಕರು
ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on:Oct 26, 2024 | 8:36 PM

Share

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಯಾರೂ ಊಹಿಸದ ಟ್ವಿಸ್ಟ್ ಬಂದುಬಿಟ್ಟಿದೆ. ಪುಟ್ಟಕ್ಕನ ಮಗಳು ಸ್ನೇಹಾ (ಸಂಜನಾ ಬುರ್ಲಿ) ನಿಧನ ಹೊಂದಿದ್ದಾಳೆ. ಈ ಬೆಳವಣಿಗೆಯಿಂದ ಧಾರಾವಾಹಿಯ ನಿರ್ದೇಶಕರ ಮೇಲೆ ವೀಕ್ಷಕರಿಗೆ ಸಿಟ್ಟು ಬರುವಂತೆ ಆಗಿದೆ. ಸದ್ಯ ಈ ಟ್ವಿಸ್ಟ್​ನ ಯಾರೂ ಒಪ್ಪಿಕೊಳ್ಳುತ್ತಿಲ್ಲ. ಸದ್ಯ ಜೀ ಕನ್ನಡ ಬಿಡುಗಡೆ ಮಾಡಿರೋ ಪ್ರೋಮೋ ನೋಡಿ ಎಲ್ಲರೂ ಭಾವುಕರಾಗಿದ್ದಾರೆ.

ಸ್ನೇಹಾ ಡಿಸಿ ಆಗಬೇಕು ಎಂದು ಕನಸು ಕಂಡವಳು. ಆ ಕನಸನ್ನು ಈಡೇರಿಸಿಕೊಂಡಳು. ಡಿಸಿ ಆದ ವಿಚಾರ ಎಲ್ಲರಿಗೂ ಖುಷಿ ನೀಡಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಉಳಿದಿಲ್ಲ. ಸ್ನೇಹಾ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾಳೆ. ಈ ರೀತಿ ಅಪಘಾತ ಆಗೋದು ನಂತರ ಬದುಕಿ ಬರೋದೆಲ್ಲ ಧಾರಾವಾಹಿಯಲ್ಲಿ ಸಾಮಾನ್ಯ. ‘ಪುಟ್ಟಕನ್ನ ಮಕ್ಕಳು’ ಧಾರಾವಾಹಿಯಲ್ಲೂ ಹಾಗೆಯೇ ಆಗಬಹುದು ಎಂದು ವೀಕ್ಷಕರು ಊಹಿಸಿದ್ದರು. ಆದರೆ, ಊಹೆ ತಪ್ಪಾಗಿದೆ.

ಅಪಘಾತದ ಬಳಿಕ ಅಂಬುಲೆನ್ಸ್​ಗಾಗಿ ಕಂಠಿ ಹುಡುಕಾಡಿದ್ದ. ಆದರೆ, ಅಂಬುಲೆನ್ಸ್ ಸಿಗಲೇ ಇಲ್ಲ. ಕೊನೆಗೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಸ್ನೇಹಾ ನಿಧನ ಹೊಂದಿದ್ದಾಳೆ. ‘ಚಿಕಿತ್ಸೆ ಫಲಕಾರಿ ಆಗಿಲ್ಲ’ ಎಂದು ವೈದ್ಯರು ಹೇಳಿದರು. ಇದನ್ನು ಕೇಳಿ ಕಂಠಿ ಅರಗಿಸಿಕೊಳ್ಳೋಕೆ ಆಗಿಲ್ಲ. ವೀಕ್ಷಕರಿಗೂ ಹಾಗೆಯೇ ಆಗಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’: ಅಪಘಾತದಲ್ಲಿ ಸ್ನೇಹಾ ಮರಣ; ಕೊನೆ ಆಯಿತು ಸಂಜನಾ ಬುರ್ಲಿ ಪಾತ್ರ

‘ಆರಿಹೋಗಿದೆ ಪುಟ್ಟಕ್ಕನ ಮನೆಯ ಬೆಳಕು. ಮುದ್ದಿನ ಮಡದಿ ಸ್ನೇಹಾಗೆ ಕಂಠಿಯ ಕಣ್ಣೀರ ವಿದಾಯ’ ಎಂದು ಪ್ರೋಮೋ ಹಂಚಿಕೊಳ್ಳಲಾಗಿದೆ. ‘ಈ ಧಾರವಾಹಿ ಅಲ್ಲಿ ಸ್ನೇಹನೆ ಮುಖ್ಯ ಪಾತ್ರದಲ್ಲಿ ಇದ್ದಿದ್ದು. ಈಗ ಅವಳೇ ಇಲ್ಲ ಅಂದಮೇಲೆ ಈ ಧಾರಾವಾಹಿ ಯಾಕೆ ನೋಡಬೇಕು. ನಾವು ಇನ್ನೂ ಮುಂದೆ ನೋಡಲ್ಲ’ ಎಂದು ಕಮೆಂಟ್ ಮಾಡಿದ್ದಾರೆ. ‘ಮುಂದೆ ಸೀರಿಯಲ್ ಆಸಕ್ತಿದಾಯಕವಾಗಿ ಇರೋದಿಲ್ಲ. ಸ್ನೇಹ ಕ್ಯಾರೆಕ್ಟರ್ ಇಲ್ಲ ಅಂದರೆ ಜನ ಸೀರಿಯಲ್ ನೋಡುದು ಕಡಿಮೆ ಮಾಡುತ್ತಾರೆ. ಹಾಗಾಗಿ ಸೀರಿಯಲ್ ಎಂಡಿಂಗ್ ಮಾಡೋದು ಬೆಟರ್ ಅನಿಸುತ್ತದೆ’ ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:29 pm, Sat, 26 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು