AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರದ ಧಾರಾವಾಹಿ ಟಿಆರ್​ಪಿಯಲ್ಲಿ ಯಾರು ಕಿಂಗ್? ಇಲ್ಲಿದೆ ವಿವರ

ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಈ ಧಾರಾವಾಹಿಯನ್ನು ನೋಡುತ್ತಿದ್ದಾರೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ನಂಬರ್ 1 ಸ್ಥಾನದಲ್ಲಿ ಮುಂದುವರಿಯುತ್ತಿದೆ.

ಈ ವಾರದ ಧಾರಾವಾಹಿ ಟಿಆರ್​ಪಿಯಲ್ಲಿ ಯಾರು ಕಿಂಗ್? ಇಲ್ಲಿದೆ ವಿವರ
ಈ ವಾರದ ಧಾರಾವಾಹಿ ಟಿಆರ್​ಪಿಯಲ್ಲಿ ಯಾರು ಕಿಂಗ್? ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on: Aug 09, 2024 | 8:41 AM

Share

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳುಗಳಿಂದ ನಂಬರ್ 1 ಸ್ಥಾನ ಪಡೆಯುತ್ತಾ ಬಂದಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಆರಂಭ ಆದಾಗ ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಪಡೆದಿತ್ತು. ಈಗ ಮತ್ತೆ ಈ ಸ್ಥಾನ ಪುಟ್ಟಕ್ಕನಿಗೆ ಸಿಕ್ಕಿದೆ. 31ನೇ ವಾರದ ಟಿಆರ್​ಪಿ ರಿವೀಲ್ ಆಗಿದೆ. ಇದರಲ್ಲಿ ಪುಟ್ಟಕ್ಕನ ಮಕ್ಕಳು ಧಾರಾವಾಹಿಗೆ ಒಂದನೇ ಸ್ಥಾನ ಸಿಕ್ಕಿದೆ. ನಗರ ಹಾಗೂ ಗ್ರಾಮೀಣ ವಿಭಾಗದಲ್ಲಿ ಈ ಧಾರಾವಾಹಿ ಒಂದನೇ ಸ್ಥಾನದಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಸೇರಿ ಅನೇಕರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಪ್ರೇಕ್ಷಕರ ಗಮನ ಸೆಳೆದಿದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾಗೂ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮಧ್ಯೆ ಈ ಬಾರಿ ಸ್ವಲ್ಪ ದೊಡ್ಡ ಅಂತರವೇ ಇದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಸೀತಾ ಹಾಗೂ ರಾಮ್ ಮಧ್ಯೆ ಮದುವೆ ನಡೆದಿದೆ. ಸೀತಾಳಿಂದ ಮಗಳು ಸಿಹಿಯನ್ನು ದೂರ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಮದುವೆ ಸಂದರ್ಭದಲ್ಲಿ ಟಿಆರ್​ಪಿ ಹೆಚ್ಚಾಗಿತ್ತು.

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್​ಪಿಯಲ್ಲಿ ಸಖತ್ ಏರಿಕೆ

ಐದನೇ ಸ್ಥಾನ ಈ ಬಾರಿ ‘ರಾಮಾಚಾರಿ’ ಧಾರಾವಾಹಿಗೆ ಸಿಕ್ಕಿದೆ. ಈ ಧಾರಾವಾಹಿ ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ‘ಅಮೃತಧಾರೆ’ ಧಾರಾವಾಹಿಯ ಟಿಆರ್​ಪಿ ದಿನ ಕಳೆದಂತೆ ಕುಸಿಯುತ್ತಿದೆ. ಈ ಧಾರಾವಾಹಿಯ ಕಥೆಯಲ್ಲಿ ಕೊಂಚ ಬದಲಾವಣೆ ಮಾಡುವ ಅಗತ್ಯವಿದೆ. ಅಂದಾಗ ಮಾತ್ರ ಟಿಆರ್​ಪಿ ಹೆಚ್ಚಲು ಸಾಧ್ಯ. ಇನ್ನು, ಹೊಸ ಧಾರಾವಾಹಿಗಳಾದ ‘ನಿನಗಾಗಿ’, ‘ಕರಿಮಣಿ’ ಹಾಗೂ ಶ್ರೀಗೌರಿ ಒಂದೇ ರೀತಿಯ ಟಿಆರ್​ಪಿ ಪಡೆದು ಸಾಗುತ್ತಿವೆ. ಈ ಧಾರಾವಾಹಿಗಳಿಗೆ ಪಾಸಿಟಿವ್ ಪ್ರತಿಕ್ರಿಯೆ ವೀಕ್ಷಕರಿಂದ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ