AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​​ಪಿಯಲ್ಲಿ ‘ಪುಟ್ಟಕ್ಕ’ನೇ ನಂಬರ್ 1; ಆದರೂ ಧಾರಾವಾಹಿ ಪ್ರಸಾರ ಸಮಯದಲ್ಲಿ ಬದಲಾವಣೆ

ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ವಾರದ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದ್ದಾರೆ. ಹಳ್ಳಿ ಭಾಗದಲ್ಲಿ ಮಾತ್ರವಲ್ಲದೆ, ನಗರ ಭಾಗದಲ್ಲೂ ಈ ಧಾರಾವಾಹಿಗೆ ದೊಡ್ಡ ವೀಕ್ಷಕ ಬಳಗ ಸೃಷ್ಟಿ ಆಗಿದೆ

ಟಿಆರ್​​ಪಿಯಲ್ಲಿ ‘ಪುಟ್ಟಕ್ಕ’ನೇ ನಂಬರ್ 1; ಆದರೂ ಧಾರಾವಾಹಿ ಪ್ರಸಾರ ಸಮಯದಲ್ಲಿ ಬದಲಾವಣೆ
ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: Aug 01, 2024 | 2:20 PM

Share

2024ನೇ ಸಾಲಿನ 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಆದರೆ, ಶೀಘ್ರವೇ ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ‘ಪುಟ್ಟಕನ ಮಕ್ಕಳು’ ಧಾರಾವಾಹಿಯ ವೀಕ್ಷಕರು ಬೇಸರ ಹೊರಹಾಕುತ್ತಿದ್ದಾರೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ವಾರದ ಟಿಆರ್​ಪಿಯಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದ್ದಾರೆ. ಹಳ್ಳಿ ಭಾಗದಲ್ಲಿ ಮಾತ್ರವಲ್ಲದೆ, ನಗರ ಭಾಗದಲ್ಲೂ ಈ ಧಾರಾವಾಹಿಗೆ ದೊಡ್ಡ ವೀಕ್ಷಕ ಬಳಗ ಸೃಷ್ಟಿ ಆಗಿದೆ. ‘ಅಣ್ಣಯ್ಯ’ ಹೆಸರಿನ ಹೊಸ ಧಾರಾವಾಹಿ ಇದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಇದನ್ನೂ ಓದಿ: ‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ