AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​​ಪಿಯಲ್ಲಿ ‘ಪುಟ್ಟಕ್ಕ’ನೇ ನಂಬರ್ 1; ಆದರೂ ಧಾರಾವಾಹಿ ಪ್ರಸಾರ ಸಮಯದಲ್ಲಿ ಬದಲಾವಣೆ

ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ವಾರದ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದ್ದಾರೆ. ಹಳ್ಳಿ ಭಾಗದಲ್ಲಿ ಮಾತ್ರವಲ್ಲದೆ, ನಗರ ಭಾಗದಲ್ಲೂ ಈ ಧಾರಾವಾಹಿಗೆ ದೊಡ್ಡ ವೀಕ್ಷಕ ಬಳಗ ಸೃಷ್ಟಿ ಆಗಿದೆ

ಟಿಆರ್​​ಪಿಯಲ್ಲಿ ‘ಪುಟ್ಟಕ್ಕ’ನೇ ನಂಬರ್ 1; ಆದರೂ ಧಾರಾವಾಹಿ ಪ್ರಸಾರ ಸಮಯದಲ್ಲಿ ಬದಲಾವಣೆ
ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: Aug 01, 2024 | 2:20 PM

Share

2024ನೇ ಸಾಲಿನ 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಆದರೆ, ಶೀಘ್ರವೇ ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ‘ಪುಟ್ಟಕನ ಮಕ್ಕಳು’ ಧಾರಾವಾಹಿಯ ವೀಕ್ಷಕರು ಬೇಸರ ಹೊರಹಾಕುತ್ತಿದ್ದಾರೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ವಾರದ ಟಿಆರ್​ಪಿಯಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದ್ದಾರೆ. ಹಳ್ಳಿ ಭಾಗದಲ್ಲಿ ಮಾತ್ರವಲ್ಲದೆ, ನಗರ ಭಾಗದಲ್ಲೂ ಈ ಧಾರಾವಾಹಿಗೆ ದೊಡ್ಡ ವೀಕ್ಷಕ ಬಳಗ ಸೃಷ್ಟಿ ಆಗಿದೆ. ‘ಅಣ್ಣಯ್ಯ’ ಹೆಸರಿನ ಹೊಸ ಧಾರಾವಾಹಿ ಇದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಇದನ್ನೂ ಓದಿ: ‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು