AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ರಾಜೇಶ್ ದುಗ್ಗುಮನೆ
|

Updated on:Jun 06, 2024 | 2:14 PM

Share

ಕನ್ನಡ ಕಿರುತೆರೆಯಲ್ಲಿ ಸ್ಪರ್ಧೆ ಜೋರಾಗಿಯೇ ಇದೆ. ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಲೇ ಇವೆ. ಟಿಆರ್​ಪಿ ರೇಸ್​ನಲ್ಲಿ ಈ ಮೊದಲು ಪ್ರಸಾರ ಕಾಣುತ್ತಿರುವ ಧಾರಾವಾಹಿಗಳ ಜೊತೆ ಹೊಸ ಧಾರಾವಾಹಿಗಳು ಇವೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu) ಮೊದಲ ಸ್ಥಾನದಲ್ಲಿ ಇತ್ತು. ಈ ವಾರವೂ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಅಷ್ಟೇ ಅಲ್ಲ ಮತ್ತೆ ಈ ಧಾರಾವಾಹಿ ದಾಖಲೆ ಬರೆಯೋ ಸಾಧ್ಯತೆ ಇದೆ.

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿ ಎರಡಂಕಿ ತಲುಪಲು ಬೇಕಿರೋದು ಕೇವಲ 0.5 ಅಂಕ ಮಾತ್ರ. ಹಾಗಾದಲ್ಲಿ, ಈ ಧಾರಾವಾಹಿ ಡಬಲ್ ಡಿಜಿಟ್ ಕಾಣಲಿದೆ.

ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಇತ್ತೀಚೆಗೆ ಆರಂಭ ಆಗಿದ್ದು, ಬೇಡಿಕೆ ಉಳಿಸಿಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಹಾಗೂ ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿಗಳು ಇವೆ. ಈ ಎರಡೂ ಧಾರಾವಾಹಿಗಳು ಸರಿ ಸುಮಾರು ಒಂದೇ ರೀತಿಯ ಬೇಡಿಕೆ ಹೊಂದಿದೆ.

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್​ಪಿಯಲ್ಲಿ ಸಖತ್ ಏರಿಕೆ

ಕಲರ್ಸ್ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆದ ‘ನಿನಗಾಗಿ’ ಧಾರಾವಾಹಿ ಆರನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ಇದು ನಿಧಾನವಾಗಿ ಜನರಿಗೆ ಇಷ್ಟ ಆಗುತ್ತಿದೆ. ಹೀಗಾಗಿ, ಇದರ ಟಿಆರ್​ಪಿ ಹೆಚ್ಚುತ್ತಿದೆ. ‘ಶ್ರೀಗೌರಿ’ ಕೂಡ ಬೇಡಿಕೆ ಉಳಿಸಿಕೊಂಡಿದೆ. ‘ಭಾಗ್ಯಲಕ್ಷ್ಮೀ’ ಹಾಗೂ ‘ಲಕ್ಷ್ಮಿ ಬಾರಮ್ಮ’ಗೆ ಮೊದಲಿನಷ್ಟು ಬೇಡಿಕೆ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:13 pm, Thu, 6 June 24

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ