AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ರಾಜೇಶ್ ದುಗ್ಗುಮನೆ
|

Updated on:Jun 06, 2024 | 2:14 PM

Share

ಕನ್ನಡ ಕಿರುತೆರೆಯಲ್ಲಿ ಸ್ಪರ್ಧೆ ಜೋರಾಗಿಯೇ ಇದೆ. ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಲೇ ಇವೆ. ಟಿಆರ್​ಪಿ ರೇಸ್​ನಲ್ಲಿ ಈ ಮೊದಲು ಪ್ರಸಾರ ಕಾಣುತ್ತಿರುವ ಧಾರಾವಾಹಿಗಳ ಜೊತೆ ಹೊಸ ಧಾರಾವಾಹಿಗಳು ಇವೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu) ಮೊದಲ ಸ್ಥಾನದಲ್ಲಿ ಇತ್ತು. ಈ ವಾರವೂ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಅಷ್ಟೇ ಅಲ್ಲ ಮತ್ತೆ ಈ ಧಾರಾವಾಹಿ ದಾಖಲೆ ಬರೆಯೋ ಸಾಧ್ಯತೆ ಇದೆ.

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿ ಎರಡಂಕಿ ತಲುಪಲು ಬೇಕಿರೋದು ಕೇವಲ 0.5 ಅಂಕ ಮಾತ್ರ. ಹಾಗಾದಲ್ಲಿ, ಈ ಧಾರಾವಾಹಿ ಡಬಲ್ ಡಿಜಿಟ್ ಕಾಣಲಿದೆ.

ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಇತ್ತೀಚೆಗೆ ಆರಂಭ ಆಗಿದ್ದು, ಬೇಡಿಕೆ ಉಳಿಸಿಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಹಾಗೂ ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿಗಳು ಇವೆ. ಈ ಎರಡೂ ಧಾರಾವಾಹಿಗಳು ಸರಿ ಸುಮಾರು ಒಂದೇ ರೀತಿಯ ಬೇಡಿಕೆ ಹೊಂದಿದೆ.

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್​ಪಿಯಲ್ಲಿ ಸಖತ್ ಏರಿಕೆ

ಕಲರ್ಸ್ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆದ ‘ನಿನಗಾಗಿ’ ಧಾರಾವಾಹಿ ಆರನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ಇದು ನಿಧಾನವಾಗಿ ಜನರಿಗೆ ಇಷ್ಟ ಆಗುತ್ತಿದೆ. ಹೀಗಾಗಿ, ಇದರ ಟಿಆರ್​ಪಿ ಹೆಚ್ಚುತ್ತಿದೆ. ‘ಶ್ರೀಗೌರಿ’ ಕೂಡ ಬೇಡಿಕೆ ಉಳಿಸಿಕೊಂಡಿದೆ. ‘ಭಾಗ್ಯಲಕ್ಷ್ಮೀ’ ಹಾಗೂ ‘ಲಕ್ಷ್ಮಿ ಬಾರಮ್ಮ’ಗೆ ಮೊದಲಿನಷ್ಟು ಬೇಡಿಕೆ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:13 pm, Thu, 6 June 24

Follow Us
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ