AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಮಸ್ತ್​ ಟಿಆರ್​ಪಿ; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?

ಜೂನ್ 3ರಿಂದ ಜೂನ್ 9ರವರೆಗಿನ ಅವಧಿಯ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದರಲ್ಲಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ಅವರ ಧಾರಾವಾಹಿಗೆ ಮೆಚ್ಚುಗೆ ಸಿಕ್ಕಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಮಸ್ತ್​ ಟಿಆರ್​ಪಿ; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
ಜೊತೆ ಜೊತೆಯಲಿ ಧಾರಾವಾಹಿ-ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on: Jun 15, 2023 | 1:02 PM

Share

ಟಿಆರ್​ಪಿ ರೇಸ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ 400ಕ್ಕೂ ಅಧಿಕ ಎಪಿಸೋಡ್ ಪೂರೈಸಿದೆ. ಆದಾಗ್ಯೂ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಕೂಡ ಟಿಆರ್​ಪಿ ಹೆಚ್ಚಿಸಿಕೊಳ್ಳುತ್ತಿದೆ. ಈ ವಾರ ಯಾವ ಧಾರಾವಾಹಿ ಎಷ್ಟನೇ ಸ್ಥಾನದಲ್ಲಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಜೂನ್ 3ರಿಂದ ಜೂನ್ 9ರವರೆಗಿನ ಅವಧಿಯ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದರಲ್ಲಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ಅವರ ಧಾರಾವಾಹಿಗೆ ಮೆಚ್ಚುಗೆ ಸಿಕ್ಕಿದೆ. ಈ ಧಾರಾವಾಹಿ ಬಳಿ ಯಾವುದೇ ಧಾರಾವಾಹಿ ಸುಳಿದಿಲ್ಲ. ‘ಗಟ್ಟಿಮೇಳ’ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್ ಅವರು ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಮೂರನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ. ಸುಧಾರಾಣಿ, ಅಜಿತ್ ಹಂಡೆ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಮೊದಲ ಟಾಪ್​ ನಾಲ್ಕು ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಕೂಡ ‘ಸತ್ಯ’ ಧಾರಾವಾಹಿಯಷ್ಟೇ ಟಿಆರ್​ಪಿ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ

‘ನಮ್ಮ ಲಚ್ಚಿ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಆರನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆರಂಭ ಆದ ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿ ಟಿಆರ್​ಪಿ ಹೆಚ್ಚಿಸಿಕೊಳ್ಳುತ್ತಿದೆ. ಈ ಧಾರಾವಾಹಿಗೂ ಆರನೇ ಸ್ಥಾನ ಸಿಕ್ಕಿದೆ. ವಾರ ಕಳೆದಂತೆ ಧಾರಾವಾಹಿಯ ಟಿಆರ್​ಪಿ ಹೆಚ್ಚುತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿಹಿ ಕಹಿ ಚಂದ್ರು, ಸಾರಾ ಅಣ್ಣಯ್ಯ ಮೊದಲಾದವರು ಈ ಧಾರಾವಾಹಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ