AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಮಸ್ತ್​ ಟಿಆರ್​ಪಿ; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?

ಜೂನ್ 3ರಿಂದ ಜೂನ್ 9ರವರೆಗಿನ ಅವಧಿಯ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದರಲ್ಲಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ಅವರ ಧಾರಾವಾಹಿಗೆ ಮೆಚ್ಚುಗೆ ಸಿಕ್ಕಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಮಸ್ತ್​ ಟಿಆರ್​ಪಿ; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
ಜೊತೆ ಜೊತೆಯಲಿ ಧಾರಾವಾಹಿ-ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on: Jun 15, 2023 | 1:02 PM

Share

ಟಿಆರ್​ಪಿ ರೇಸ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ 400ಕ್ಕೂ ಅಧಿಕ ಎಪಿಸೋಡ್ ಪೂರೈಸಿದೆ. ಆದಾಗ್ಯೂ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಕೂಡ ಟಿಆರ್​ಪಿ ಹೆಚ್ಚಿಸಿಕೊಳ್ಳುತ್ತಿದೆ. ಈ ವಾರ ಯಾವ ಧಾರಾವಾಹಿ ಎಷ್ಟನೇ ಸ್ಥಾನದಲ್ಲಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಜೂನ್ 3ರಿಂದ ಜೂನ್ 9ರವರೆಗಿನ ಅವಧಿಯ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದರಲ್ಲಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ಅವರ ಧಾರಾವಾಹಿಗೆ ಮೆಚ್ಚುಗೆ ಸಿಕ್ಕಿದೆ. ಈ ಧಾರಾವಾಹಿ ಬಳಿ ಯಾವುದೇ ಧಾರಾವಾಹಿ ಸುಳಿದಿಲ್ಲ. ‘ಗಟ್ಟಿಮೇಳ’ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್ ಅವರು ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಮೂರನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ. ಸುಧಾರಾಣಿ, ಅಜಿತ್ ಹಂಡೆ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಮೊದಲ ಟಾಪ್​ ನಾಲ್ಕು ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಕೂಡ ‘ಸತ್ಯ’ ಧಾರಾವಾಹಿಯಷ್ಟೇ ಟಿಆರ್​ಪಿ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ

‘ನಮ್ಮ ಲಚ್ಚಿ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಆರನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆರಂಭ ಆದ ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿ ಟಿಆರ್​ಪಿ ಹೆಚ್ಚಿಸಿಕೊಳ್ಳುತ್ತಿದೆ. ಈ ಧಾರಾವಾಹಿಗೂ ಆರನೇ ಸ್ಥಾನ ಸಿಕ್ಕಿದೆ. ವಾರ ಕಳೆದಂತೆ ಧಾರಾವಾಹಿಯ ಟಿಆರ್​ಪಿ ಹೆಚ್ಚುತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿಹಿ ಕಹಿ ಚಂದ್ರು, ಸಾರಾ ಅಣ್ಣಯ್ಯ ಮೊದಲಾದವರು ಈ ಧಾರಾವಾಹಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More