Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಷ್ಟೇ ವರ್ಷ ನನ್ನ ಹಿಂದೆ ಬಂದರೂ ನಿಮಗೆ ಬೀಳಲ್ಲ’; ನೇರವಾಗಿ ಹೇಳಿದ ರಚಿತಾ ರಾಮ್

ರಚಿತಾ ರಾಮ್ ಅವರು ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಭರ್ಜರಿ ಬ್ಯಾಚುಲರ್ಸ್’ನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶೋನ ಪ್ರೋಮೋದಲ್ಲಿ ರಚಿತಾ ರಾಮ್ ಅವರು ತಮ್ಮನ್ನು ಗೆಲ್ಲಲು ಪ್ರಯತ್ನಿಸುವವರಿಗೆ ‘ಎಷ್ಟೇ ವರ್ಷ ನನ್ನ ಹಿಂದೆ ಬಂದರೂ ನಾನು ನಿಮಗೆ ಬೀಳಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

‘ಎಷ್ಟೇ ವರ್ಷ ನನ್ನ ಹಿಂದೆ ಬಂದರೂ ನಿಮಗೆ ಬೀಳಲ್ಲ’; ನೇರವಾಗಿ ಹೇಳಿದ ರಚಿತಾ ರಾಮ್
ರಚಿತಾ
Follow us
ರಾಜೇಶ್ ದುಗ್ಗುಮನೆ
|

Updated on: Feb 06, 2025 | 10:45 AM

ನಟಿ ರಚಿತಾ ರಾಮ್ ಅವರಿಗೆ ಈಗ 32 ವರ್ಷ ವಯಸ್ಸು. ಈವರೆಗೆ ಅವರು ವಿವಾಹ ಆಗಿಲ್ಲ. ಚಿತ್ರರಂಗದಲ್ಲಿ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೈ ತುಂಬಾ ಸಿನಿಮಾ ಇರೋ ಕಾರಣಕ್ಕೆ ಸದ್ಯಕ್ಕಂತೂ ಅವರು ವಿವಾಹದ ಬಗ್ಗೆ ಆಲೋಚಿಸಿಲ್ಲ. ಈಗ ಅವರು ಒಂದು ಮಾತನ್ನು ನೇರವಾಗಿ ಹೇಳಿದ್ದಾರೆ. ‘ಎಷ್ಟೇ ವರ್ಷ ನನ್ನ ಹಿಂದೆ ಬಂದರೂ ನಾನು ನಿಮಗೆ ಬೀಳಲ್ಲ’ ಎಂದಿದ್ದಾರೆ. ಅಷ್ಟಕ್ಕೂ ರಚಿತಾ ರಾಮ್ ಅವರು ಹೀಗೆ ಹೇಳಲು ಕಾರಣವೇನು? ಆ ಬಗ್ಗೆ ಇಲ್ಲಿದೆ ವಿವರ.

ಜೀ ಕನ್ನಡದಲ್ಲಿ ‘ಭರ್ಜರಿ ಬ್ಯಾಚುಲರ್ಸ್’ ಆರಂಭ ಆಗುತ್ತಿದೆ. ಇದಕ್ಕೆ ರಚಿತಾ ರಾಮ್ ಅವರು ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಇದರ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಭಿನ್ನವಾಗಿ ಈ ಪ್ರೋಮೋನ ಮಾಡಲಾಗಿದ್ದು, ಗಮನ ಸೆಳೆದಿದೆ. ತಮ್ಮನ್ನು ಬೀಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದವರಿಗೆ ಅವರು ನೇರ ಮಾತುಗಳಲ್ಲಿ ಹೇಳಿದ್ದಾರೆ.

‘10 ಸಾವಿರ ವರ್ಷಗಳ ಹಿಂದೆ ಸುಂದರಿಯನ್ನು ಪಟಾಯಿಸಲು ಆದಿ ಮಾನವ ಗಾಲಿಯನ್ನು ಕಂಡು ಹಿಡಿದ. ಗಾಲಿ ಮನದಾಳದ ಬದಲು ಪಾತಾಳಕ್ಕೆ ಇಳಿಯಿತು. ಪ್ರೀತಿಯ ಕಿಚ್ಚು ಹಚ್ಚಲು ಬಂದವ ಬೆಂಕಿಯಲ್ಲಿ ಮರೆಯಾಗಿ ಹೋದ. ಹೂವು ತಂದವ ಮಿಂಚಿನಂತೆ ಮರೆಯಾದ. ಇವರ ಪ್ರೀತಿಯ ಹಸಿವು ಸ್ವಯಂವರಕ್ಕೂ ಕಾಲಿಟ್ಟಿತು. ಕಾಡಿನಿಂದ ನಾಡಿಗೆ ಬಂದರೂ ಬ್ಯಾಚುಲರ್​ಗಳಾಗಿಯೇ ಉಳಿದರು’ ಎಂದು ಪ್ರೋಮೋದಲ್ಲಿ ಹೇಳಲಾಗಿದೆ.

View this post on Instagram

A post shared by Zee Kannada (@zeekannada)

ಇವರೆಲ್ಲ ಮದುವೆ ಆಗೋಕೆ ಪ್ರಯತ್ನಿಸುತ್ತಿರೋದು ರಚಿತಾ ರಾಮ್ ಅವರನ್ನು! ಇದಕ್ಕೆ ರಚಿತಾ ರಾಮ್​, ‘ನೀವುಗಳು ನನ್ನ ಹಿಂದೆ ಎಷ್ಟೇ ವರ್ಷ ಬಂದರೂ ನಾನು ನಿಮಗೆ ಬೀಳಲ್ಲ’ ಎಂದಿದ್ದಾರೆ. ಈ ವೇಳೆ ರವಿಚಂದ್ರನ್ ಎಂಟ್ರಿ ಆಗುತ್ತದೆ. ಈ ರೀತಿಯಲ್ಲಿ ‘ಭರ್ಜರಿ ಬ್ಯಾಚುಲರ್ಸ್’ ಪ್ರೋಮೋ ಮೂಡಿ ಬಂದಿದೆ.

ಇದನ್ನೂ ಓದಿ: ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್’ ಶೋಗೆ ಕಾಲಿಟ್ಟ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್

ಡ್ರೋನ್ ಪ್ರತಾಪ್, ಹುಲಿ ಪ್ರತಾಪ್, ಉಲ್ಲಾಸ್, ಪ್ರವೀಣ್ ಜೈನ್ ಮೊದಲಾದವರು ‘ಭರ್ಜರಿ ಬ್ಯಾಚುಲರ್ಸ್’ ಶೋನ ಭಾಗವಾಗಲಿದ್ದಾರೆ. ಈ ಬಾರಿ ಈ ರಿಯಾಲಿಟಿ ಶೋ ಯಾವ ರೀತಿಯಲ್ಲಿ ಮನರಂಜನೆ ನೀಡಲಿದೆ ಎನ್ನುವ ಕುತೂಹಲ ಮೂಡಿದೆ. ರಚಿತಾ ರಾಮ್ ಹಾಗೂ ರವಿಚಂದ್ರನ್ ಜಡ್ಜ್ ಸ್ಥಾನದಲ್ಲಿ ಇರೋದ್ರಿಂದ ಮನರಂಜನೆ ಡಬಲ್ ಆಗೋದು ಗ್ಯಾರಂಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಕರ್ನಾಟಕ ಲೋಕಸೇವಾ ಆಯೋಗದ ಪ್ರಮಾದಗಳನ್ನು ಅಂಗೀಕರಿಸಿದ ಸಿದ್ದರಾಮಯ್ಯ
ಕರ್ನಾಟಕ ಲೋಕಸೇವಾ ಆಯೋಗದ ಪ್ರಮಾದಗಳನ್ನು ಅಂಗೀಕರಿಸಿದ ಸಿದ್ದರಾಮಯ್ಯ
ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಪ್ರಧಾನಿ ಮೋದಿ
ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಪ್ರಧಾನಿ ಮೋದಿ
ಮಾರ್ಚ್ 22 ರಂದು ತಮಿಳುನಾಡು ನಡೆಸುವ ಸಭೆಯಲ್ಲಿ ಭಾಗವಹಿಸಲು ಆಹ್ವಾನ
ಮಾರ್ಚ್ 22 ರಂದು ತಮಿಳುನಾಡು ನಡೆಸುವ ಸಭೆಯಲ್ಲಿ ಭಾಗವಹಿಸಲು ಆಹ್ವಾನ
ಬಲೂಚ್ ದಂಗೆಕೋರರು ಪಾಕ್ ರೈಲನ್ನು ಹೈಜಾಕ್ ಮಾಡಿದ್ದು ಹೇಗೆಂದು ನೋಡಿ
ಬಲೂಚ್ ದಂಗೆಕೋರರು ಪಾಕ್ ರೈಲನ್ನು ಹೈಜಾಕ್ ಮಾಡಿದ್ದು ಹೇಗೆಂದು ನೋಡಿ