AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಲ್ಡ್ ಕಾರ್ಡ್ ಸ್ಪರ್ಧಿ ‘ಕಾಂತಾರ’ ವಿಲನ್ ರಘುಗೆ ಕಿವಿಮಾತು ಹೇಳಿದ ಸುದೀಪ್

ಇತ್ತೀಚೆಗೆ ಕ್ವಾಟ್ಲೆ ಕಿಚನ್ ಫಿನಾಲೆ ನಡೆಯಿತು. ಈ ಶೋ ಫಿನಾಲೆಯಲ್ಲಿ ರಘು ಅವರು ವಿನ್ ಆಗಿದ್ದಾರೆ. ಸಾಕಷ್ಟು ಕಷ್ಟಪಟ್ಟು ಫಿನಾಲೆ ತಲುಪಿದ್ದೂ ಅಲ್ಲದೆ ಅವರು ಶೋನ ವಿನ್ ಕೂಡ ಆದರು. ಮಾತಿನ ಮೂಲಕ ಗಮನ ಸೆಳೆಯುವ ಅವರು ದೊಡ್ಮನೆಯಲ್ಲಿ ಹೇಗೆ ಯಶಸ್ಸು ಕಾಣುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವೈಲ್ಡ್ ಕಾರ್ಡ್ ಸ್ಪರ್ಧಿ ‘ಕಾಂತಾರ’ ವಿಲನ್ ರಘುಗೆ ಕಿವಿಮಾತು ಹೇಳಿದ ಸುದೀಪ್
ರಘು-ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 19, 2025 | 10:16 PM

Share

ಬಿಗ್ ಬಾಸ್ (Bigg Boss) ಮೂರನೇ ವಾರವೇ ಫಿನಾಲೆ ನಡೆದಿದೆ. ಇದು ಕನ್ನಡ ಬಿಗ್ ಬಾಸ್ ಪಾಲಿಗೆ ನಿಜಕ್ಕೂ ಹೊಸದು. ಯಾವೆಲ್ಲ ಸ್ಪರ್ಧಿಗಳು ಬಿಗ್ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ, ಯಾವೆಲ್ಲ ಸ್ಪರ್ಧಿಗಳು ದೊಡ್ಮನೆಗೆ ಬರುತ್ತಾರೆ ಎನ್ನುವ ಕುತೂಹಲ ಇತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅಶ್ವಿನಿ ಹಾಗೂ ಮಂಜು ಭಾಷಿಣಿ ಹೊರ ಹೋಗಿದ್ದಾರೆ. ಹೀಗಿರುವಾಗಲೇ ಬಿಗ್ ಬಾಸ್ ಮೊದಲ ಫಿನಾಲೆಯಲ್ಲಿ ರಘು ಅವರು ದೊಡ್ಮನೆಗೆ ಪ್ರವೇಶ ಮಾಡಿದ್ದಾರೆ. ಒಟ್ಟೂ ಮೂವರು ದೊಡ್ಮನೆಗೆ ಬಂದಿದ್ದಾರೆ.

ಇತ್ತೀಚೆಗೆ ಕ್ವಾಟ್ಲೆ ಕಿಚನ್ ಫಿನಾಲೆ ನಡೆಯಿತು. ಈ ಶೋ ಫಿನಾಲೆಯಲ್ಲಿ ರಘು ಅವರು ವಿನ್ ಆಗಿದ್ದಾರೆ. ಸಾಕಷ್ಟು ಕಷ್ಟಪಟ್ಟು ಫಿನಾಲೆ ತಲುಪಿದ್ದೂ ಅಲ್ಲದೆ ಅವರು ಶೋನ ವಿನ್ ಕೂಡ ಆದರು. ಮಾತಿನ ಮೂಲಕ ಗಮನ ಸೆಳೆಯುವ ಅವರು ದೊಡ್ಮನೆಯಲ್ಲಿ ಹೇಗೆ ಯಶಸ್ಸು ಕಾಣುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವೇದಿಕೆ ಮೇಲೆ ರಘು ಮಾತನಾಡಿದರು. ‘ಬಿಗ್ ಬಾಸ್ ಅಂತಾರಾಷ್ಟ್ರೀಯ ಈವೆಂಟ್. ದೊಡ್ಡ ವಿಲನ್ ಆಗಬೇಕು ಎಂಬ ಆಸೆ ಇದೆ. ಕಾಂತಾರ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದೆ. ತುಂಬಾ ಫೇಮ್ ಸಿಕ್ತು. ಬಿಗ್ ಬಾಸ್ 4 ಎಪಿಸೋಡ್ ನೋಡಿದ್ದೇನೆ. ಗಿಲ್ಲಿ-ರಕ್ಷಿತಾ ಇಷ್ಟ. ಇಬ್ಬರೂ ಚೇಂಜ್ ಆಗಿಲ್ಲ. ಉಳಿದವರು ಬದಲಾಗಿದ್ದಾರೆ’ ಎಂದರು ರಘು. ಅವರಿಗೆ ತಾಳ್ಮೆ ಕಡಿಮೆ ಅಂತೆ. ಹೀಗಾಗಿ, ‘ತಾಳ್ಮೆ ಕಳೆದುಕೊಂಡು ಯಾರಿಗೂ ಹೊಡೆದು ಬರಬೇಡಿ’ ಎಂದು ಸುದೀಪ್ ಕಿವಿಮಾತು ಹೇಳಿದರು.

ರಘು ಅವರು ಸೆಲೆಬ್ರಿಟಿಗಳಿಗೆ ಜಿಮ್ ಕೋಚ್. ಅನೇಕ ಸೆಲೆಬ್ರಿಟಿಗಳಿಗೆ ಅವರು ಟ್ರೇನಿಂಗ್ ಮಾಡಿದ್ದಾರೆ. ಅವರು ಕೂಡ ಕಟ್ಟುಮಸ್ತಾದ ದೇಹ ಹೊಂದಿದ್ದಾರೆ. ‘ಕಾಟೇರ’ ಹಾಗೂ ‘ಕ್ರಾಂತಿ’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿಯೂ ಅವರು ವಿಲನ್ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬರೋ ಕಪ್ಪು ಜನಾಂಗದವರ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇದರ ಮೇಕಿಂಗ್ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದರು.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್-ಪ್ರಿಯಾ ಆ್ಯನಿವರ್ಸರಿಗೆ ಶುಭಾಶಯ ಕೋರಿದ ನಾಗಾರ್ಜುನ

ರಘು ಅವರು ತುಂಬಾನೇ ಗಟ್ಟಿ. ಹೀಗಾಗಿ, ಫಿಸಿಕಲ್ ಟಾಸ್ಕ್ ವಿಚಾರ ಬಂದಾಗ ಅವರು ಗಮನ ಸೆಳೆಯುವ ಸಾಧ್ಯತೆ ಇದೆ. ಈ ಬಗ್ಗೆ ಅಭಿಮಾನಿಗಳಿಗೂ ಸಾಕಷ್ಟು ಕುತೂಹಲ ಇದೆ. ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಬಗ್ಗೆ ಫ್ಯಾನ್ಸ್​ಗೆ ಖುಷಿ ಇದೆ. ಅವರು ದೊಡ್ಮನೆ ವಾತಾವರಣ ಬದಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 pm, Sun, 19 October 25

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ