AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಧಾರಾವಾಹಿ ನಿರ್ಮಾಣಕ್ಕೆ ಇಳಿದ ರಾಘವೇಂದ್ರ ರಾಜ್​ಕುಮಾರ್​; ಆಗಸ್ಟ್ 1ರಿಂದ ‘ವಿಜಯದಶಮಿ’ ಪ್ರಸಾರ

ಸಿರಿ ಕನ್ನಡ ವಾಹಿನಿಯಲ್ಲಿ ಆಗಸ್ಟ್ 1ರಿಂದ ‘ವಿಜಯದಶಮಿ’ ಹಾಗೂ ‘ಅಮ್ಮನ ಮದುವೆ’ ಎಂಬ ಎರಡು ಹೊಸ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಆ ಪೈಕಿ ‘ವಿಜಯದಶಮಿ’ ಧಾರಾವಾಹಿಗೆ ರಾಘವೇಂದ್ರ ರಾಜಕುಮಾರ್ ಬಂಡವಾಳ ಹೂಡುತ್ತಿದ್ದಾರೆ.

ಮತ್ತೆ ಧಾರಾವಾಹಿ ನಿರ್ಮಾಣಕ್ಕೆ ಇಳಿದ ರಾಘವೇಂದ್ರ ರಾಜ್​ಕುಮಾರ್​; ಆಗಸ್ಟ್ 1ರಿಂದ ‘ವಿಜಯದಶಮಿ’ ಪ್ರಸಾರ
ವಿಜಯ ದಶಮಿ ತಂಡ
TV9 Web
| Edited By: |

Updated on: Jul 30, 2022 | 12:39 PM

Share

ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರು ನಟನೆ ಜತೆಗೆ ಸಿನಿಮಾ ಹಾಗೂ ಧಾರಾವಾಹಿ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ಮತ್ತೆ ಧಾರಾವಾಹಿ ನಿರ್ಮಾಣಕ್ಕೆ ಇಳಿದಿದ್ದಾರೆ. ‘ವಿಜಯದಶಮಿ’ (Vijayadashami) ಹೆಸರಿನ ಧಾರಾವಾಹಿಯನ್ನು ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ರಾಘವೇಂದ್ರ ರಾಜ್​ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಸಿರಿ ಕನ್ನಡ’ ವಾಹಿನಿಯಲ್ಲಿ ಈ ಧಾರಾವಾಹಿ ಆಗಸ್ಟ್ 1ರಿಂದ ಪ್ರಸಾರ ಆರಂಭಿಸಲಿದೆ.

ಸಿರಿ ಕನ್ನಡ ವಾಹಿನಿಯಲ್ಲಿ ಆಗಸ್ಟ್ 1ರಿಂದ ‘ವಿಜಯದಶಮಿ’ ಹಾಗೂ ‘ಅಮ್ಮನ ಮದುವೆ’ ಎಂಬ ಎರಡು ಹೊಸ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಆ ಪೈಕಿ ‘ವಿಜಯದಶಮಿ’ ಧಾರಾವಾಹಿಗೆ ರಾಘವೇಂದ್ರ ರಾಜಕುಮಾರ್ ಹಾಗೂ ಅವರ ಪತ್ನಿ ಮಂಗಳಾ ರಾಘವೇಂದ್ರ ರಾಜಕುಮಾರ್ ಬಂಡವಾಳ ಹೂಡುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಹತ್ತೊಂಭತ್ತಕ್ಕೂ ಅಧಿಕ ಮುಖ್ಯಪಾತ್ರಧಾರಿಗಳಿದ್ದು, 70ಕ್ಕೂ ಅಧಿಕ ಕಲಾವಿದರು ಅಭಿನಯಿಸುತ್ತಿದ್ದಾರೆ ಅನ್ನೋದು ವಿಶೇಷ.

ರಾಘವೇಂದ್ರ ರಾಜ್​ಕುಮಾರ್ ಅವರು ಈಗಾಗಲೇ ‘ಮರಳಿ ಬಂದಳು ಸೀತೆ’ (2019), ‘ಜೀವ ಹೂವಾಗಿದೆ’ (2020) ಹೆಸರಿನ ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ‘ವಿಜಯದಶಮಿ’ ಮೂಲಕ ಮತ್ತೆ ನಿರ್ಮಾಣಕ್ಕೆ ಇಳಿದಿದ್ದಾರೆ. ಭಾರತದ ವಿವಿಧ ಸ್ಥಳಗಳಲ್ಲಿ ಈ ಧಾರಾವಾಹಿಯ ಚಿತ್ರೀಕರಣ ನಡೆಯಲಿದೆ.

ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8.30ಕ್ಕೆ ‘ವಿಜಯದಶಮಿ’ ಪ್ರಸಾರ ಕಾಣಲಿದೆ. ಇತ್ತೀಚೆಗೆ ಈ ಧಾರಾವಾಹಿಯ ಟ್ರೇಲರ್ ರಿಲೀಸ್ ಆಗಿದೆ. ಶ್ರೀಮುರಳಿ, ನಿರ್ದೇಶಕ-ನಟ ರಿಷಬ್ ಶೆಟ್ಟಿ ಮೊದಲಾದವರು ಈ ಧಾರಾವಾಹಿ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಶಶಿ ಈ ಧಾರಾವಾಹಿಗೆ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕದಿಂದ ಬೆಂಗಳೂರಿಗೆ ಮರಳಿದ ‘ಕನ್ನಡತಿ’ ಧಾರಾವಾಹಿಯ ರತ್ನಮಾಲಾ; ಶೀಘ್ರವೇ ಧಾರವಾಹಿಗೆ ರೀ ಎಂಟ್ರಿ

ಅಮ್ಮನ ಮದುವೆ ಕಥೆ ಏನು?

ಅಮ್ಮ-ಮಗಳ ವಾತ್ಸಲ್ಯದ ಕಥೆಯನ್ನು ‘ಅಮ್ಮನ ಮದುವೆ’ ಧಾರಾವಾಹಿ ಹೊಂದಿದೆ. ಆಗಸ್ಟ್ 1ರಿಂದ ಆರಂಭವಾಗುತ್ತಿರುವ ಈ ಧಾರಾವಾಹಿ ಸೋಮವಾರದಿಂದ-ಶುಕ್ರವಾರದವರೆಗೆ ರಾತ್ರಿ 8ಕ್ಕೆ ಪ್ರಸಾರ ಕಾಣಲಿದೆ. ನ್ಯೂ ಡಿ2 ಮೀಡಿಯಾ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ. ಮಗಳು ಮದುವೆ ವಯಸ್ಸಿಗೆ ಬಂದಿರುತ್ತಾಳೆ. ಆದರೆ, ‌ಆಕೆ ತಾಯಿಯ ಒಂಟಿತನ ದೂರವಾಗಿಸಲು ಪ್ರಯತ್ನಿಸುತ್ತಾಳೆ. ಇದು ಧಾರಾವಾಹಿಯ ಕಥೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?