AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​
TV9 Web
| Edited By: |

Updated on:Jul 25, 2021 | 9:07 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಳ್ಳೋಕೆ ಕೆಲವೇ ವಾರಗಳು ಬಾಕಿ ಇವೆ. ಎಂಟನೇ ಸೀಸನ್​ ಕೊನೆಯ ಹಂತ ತಲುಪಿದ್ದು, ಒಬ್ಬೊಬ್ಬರಾಗಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಬಿಗ್​ ಬಾಸ್​ನಿಂದ ಹೊರ ಬಂದ ಸ್ಪರ್ಧಿಗಳು ಹೊಸ ಸಿನಿಮಾ ಘೋಷಣೆ ಮಾಡುತ್ತಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ರಘು ಗೌಡ ಹಾಗೂ ರಾಜೀವ್​ ಈಗ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ.

ರಘು ಹಾಗೂ ರಾಜೀವ್​ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳಾಗಿ ಮನೆ ಪ್ರವೇಶಿಸಿದ್ದರು. ಬಿಗ್​ ಬಾಸ್​ ಮೊದಲನೇ ಇನ್ನಿಂಗ್ಸ್​ ಪೂರ್ಣಗೊಳ್ಳಲು ಕೆಲವೇ ವಾರ ಇರುವಾಗ ರಾಜೀವ್​ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಗೋಲ್ಡನ್​ ಪಾಸ್​ ಹೊಂದಿದ್ದ ಅವರಿಂದ ನಾಮಿನೇಷನ್​ನಿಂದ ಬಚಾವ್​ ಆಗುವ ಆಯ್ಕೆ ಇತ್ತು. ಆದರೆ, ಅವರು ಪಾಸ್​ ಬಳಕೆ ಮಾಡಿಕೊಳ್ಳಲಿಲ್ಲ. ಸೆಕೆಂಡ್​ ಇನ್ನಿಂಗ್ಸ್​ನ ಎರಡನೇ ವಾರದ ಎಲಿಮಿನೇಷನ್​ನಲ್ಲಿ ರಘು ಗೌಡ ಮನೆಯಿಂದ ಹೊರ ಬಂದಿದ್ದರು. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸುತ್ತಿರೋದು ವಿಶೇಷ.

ವಿಜಯ್​ ನಿರ್ದೇಶನ ಮಾಡುತ್ತಿರುವ ‘ಉಸಿರೇ ಉಸಿರೇ’  ಚಿತ್ರದಲ್ಲಿ ರಘು ಹಾಗೂ ರಾಜೀವ್​ ನಟಿಸುತ್ತಿದ್ದಾರೆ. ಇಬ್ಬರೂ ಒಂದೇ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದಹಾಗೆ, ಕಾಲೇಜಿನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇಬ್ಬರೂ ಗೆಳೆಯರಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು. ಈಗ ಇಬ್ಬರೂ ತೆರೆಮೇಲೆಯೂ ಫ್ರೆಂಡ್ಸ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಆಗಸ್ಟ್ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಈ ವೇಳೆ 8ನೇ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ಎಲ್ಲಾ ಸ್ಪರ್ಧಿಗಳು ಮತ್ತೆ ವೇದಿಕೆ ಏರಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

Published On - 6:08 pm, Sun, 25 July 21

Follow Us
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್