AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​
TV9 Web
| Edited By: |

Updated on:Jul 25, 2021 | 9:07 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಳ್ಳೋಕೆ ಕೆಲವೇ ವಾರಗಳು ಬಾಕಿ ಇವೆ. ಎಂಟನೇ ಸೀಸನ್​ ಕೊನೆಯ ಹಂತ ತಲುಪಿದ್ದು, ಒಬ್ಬೊಬ್ಬರಾಗಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಬಿಗ್​ ಬಾಸ್​ನಿಂದ ಹೊರ ಬಂದ ಸ್ಪರ್ಧಿಗಳು ಹೊಸ ಸಿನಿಮಾ ಘೋಷಣೆ ಮಾಡುತ್ತಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ರಘು ಗೌಡ ಹಾಗೂ ರಾಜೀವ್​ ಈಗ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ.

ರಘು ಹಾಗೂ ರಾಜೀವ್​ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳಾಗಿ ಮನೆ ಪ್ರವೇಶಿಸಿದ್ದರು. ಬಿಗ್​ ಬಾಸ್​ ಮೊದಲನೇ ಇನ್ನಿಂಗ್ಸ್​ ಪೂರ್ಣಗೊಳ್ಳಲು ಕೆಲವೇ ವಾರ ಇರುವಾಗ ರಾಜೀವ್​ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಗೋಲ್ಡನ್​ ಪಾಸ್​ ಹೊಂದಿದ್ದ ಅವರಿಂದ ನಾಮಿನೇಷನ್​ನಿಂದ ಬಚಾವ್​ ಆಗುವ ಆಯ್ಕೆ ಇತ್ತು. ಆದರೆ, ಅವರು ಪಾಸ್​ ಬಳಕೆ ಮಾಡಿಕೊಳ್ಳಲಿಲ್ಲ. ಸೆಕೆಂಡ್​ ಇನ್ನಿಂಗ್ಸ್​ನ ಎರಡನೇ ವಾರದ ಎಲಿಮಿನೇಷನ್​ನಲ್ಲಿ ರಘು ಗೌಡ ಮನೆಯಿಂದ ಹೊರ ಬಂದಿದ್ದರು. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸುತ್ತಿರೋದು ವಿಶೇಷ.

ವಿಜಯ್​ ನಿರ್ದೇಶನ ಮಾಡುತ್ತಿರುವ ‘ಉಸಿರೇ ಉಸಿರೇ’  ಚಿತ್ರದಲ್ಲಿ ರಘು ಹಾಗೂ ರಾಜೀವ್​ ನಟಿಸುತ್ತಿದ್ದಾರೆ. ಇಬ್ಬರೂ ಒಂದೇ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದಹಾಗೆ, ಕಾಲೇಜಿನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇಬ್ಬರೂ ಗೆಳೆಯರಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು. ಈಗ ಇಬ್ಬರೂ ತೆರೆಮೇಲೆಯೂ ಫ್ರೆಂಡ್ಸ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಆಗಸ್ಟ್ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಈ ವೇಳೆ 8ನೇ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ಎಲ್ಲಾ ಸ್ಪರ್ಧಿಗಳು ಮತ್ತೆ ವೇದಿಕೆ ಏರಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

Published On - 6:08 pm, Sun, 25 July 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ