AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 25, 2021 | 9:07 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಳ್ಳೋಕೆ ಕೆಲವೇ ವಾರಗಳು ಬಾಕಿ ಇವೆ. ಎಂಟನೇ ಸೀಸನ್​ ಕೊನೆಯ ಹಂತ ತಲುಪಿದ್ದು, ಒಬ್ಬೊಬ್ಬರಾಗಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಬಿಗ್​ ಬಾಸ್​ನಿಂದ ಹೊರ ಬಂದ ಸ್ಪರ್ಧಿಗಳು ಹೊಸ ಸಿನಿಮಾ ಘೋಷಣೆ ಮಾಡುತ್ತಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ರಘು ಗೌಡ ಹಾಗೂ ರಾಜೀವ್​ ಈಗ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ.

ರಘು ಹಾಗೂ ರಾಜೀವ್​ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳಾಗಿ ಮನೆ ಪ್ರವೇಶಿಸಿದ್ದರು. ಬಿಗ್​ ಬಾಸ್​ ಮೊದಲನೇ ಇನ್ನಿಂಗ್ಸ್​ ಪೂರ್ಣಗೊಳ್ಳಲು ಕೆಲವೇ ವಾರ ಇರುವಾಗ ರಾಜೀವ್​ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಗೋಲ್ಡನ್​ ಪಾಸ್​ ಹೊಂದಿದ್ದ ಅವರಿಂದ ನಾಮಿನೇಷನ್​ನಿಂದ ಬಚಾವ್​ ಆಗುವ ಆಯ್ಕೆ ಇತ್ತು. ಆದರೆ, ಅವರು ಪಾಸ್​ ಬಳಕೆ ಮಾಡಿಕೊಳ್ಳಲಿಲ್ಲ. ಸೆಕೆಂಡ್​ ಇನ್ನಿಂಗ್ಸ್​ನ ಎರಡನೇ ವಾರದ ಎಲಿಮಿನೇಷನ್​ನಲ್ಲಿ ರಘು ಗೌಡ ಮನೆಯಿಂದ ಹೊರ ಬಂದಿದ್ದರು. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸುತ್ತಿರೋದು ವಿಶೇಷ.

ವಿಜಯ್​ ನಿರ್ದೇಶನ ಮಾಡುತ್ತಿರುವ ‘ಉಸಿರೇ ಉಸಿರೇ’  ಚಿತ್ರದಲ್ಲಿ ರಘು ಹಾಗೂ ರಾಜೀವ್​ ನಟಿಸುತ್ತಿದ್ದಾರೆ. ಇಬ್ಬರೂ ಒಂದೇ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದಹಾಗೆ, ಕಾಲೇಜಿನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇಬ್ಬರೂ ಗೆಳೆಯರಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು. ಈಗ ಇಬ್ಬರೂ ತೆರೆಮೇಲೆಯೂ ಫ್ರೆಂಡ್ಸ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಆಗಸ್ಟ್ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಈ ವೇಳೆ 8ನೇ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ಎಲ್ಲಾ ಸ್ಪರ್ಧಿಗಳು ಮತ್ತೆ ವೇದಿಕೆ ಏರಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

Published On - 6:08 pm, Sun, 25 July 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ