AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​
TV9 Web
| Edited By: |

Updated on:Jul 25, 2021 | 9:07 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಳ್ಳೋಕೆ ಕೆಲವೇ ವಾರಗಳು ಬಾಕಿ ಇವೆ. ಎಂಟನೇ ಸೀಸನ್​ ಕೊನೆಯ ಹಂತ ತಲುಪಿದ್ದು, ಒಬ್ಬೊಬ್ಬರಾಗಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಬಿಗ್​ ಬಾಸ್​ನಿಂದ ಹೊರ ಬಂದ ಸ್ಪರ್ಧಿಗಳು ಹೊಸ ಸಿನಿಮಾ ಘೋಷಣೆ ಮಾಡುತ್ತಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ರಘು ಗೌಡ ಹಾಗೂ ರಾಜೀವ್​ ಈಗ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ.

ರಘು ಹಾಗೂ ರಾಜೀವ್​ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿಗಳಾಗಿ ಮನೆ ಪ್ರವೇಶಿಸಿದ್ದರು. ಬಿಗ್​ ಬಾಸ್​ ಮೊದಲನೇ ಇನ್ನಿಂಗ್ಸ್​ ಪೂರ್ಣಗೊಳ್ಳಲು ಕೆಲವೇ ವಾರ ಇರುವಾಗ ರಾಜೀವ್​ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಗೋಲ್ಡನ್​ ಪಾಸ್​ ಹೊಂದಿದ್ದ ಅವರಿಂದ ನಾಮಿನೇಷನ್​ನಿಂದ ಬಚಾವ್​ ಆಗುವ ಆಯ್ಕೆ ಇತ್ತು. ಆದರೆ, ಅವರು ಪಾಸ್​ ಬಳಕೆ ಮಾಡಿಕೊಳ್ಳಲಿಲ್ಲ. ಸೆಕೆಂಡ್​ ಇನ್ನಿಂಗ್ಸ್​ನ ಎರಡನೇ ವಾರದ ಎಲಿಮಿನೇಷನ್​ನಲ್ಲಿ ರಘು ಗೌಡ ಮನೆಯಿಂದ ಹೊರ ಬಂದಿದ್ದರು. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸುತ್ತಿರೋದು ವಿಶೇಷ.

ವಿಜಯ್​ ನಿರ್ದೇಶನ ಮಾಡುತ್ತಿರುವ ‘ಉಸಿರೇ ಉಸಿರೇ’  ಚಿತ್ರದಲ್ಲಿ ರಘು ಹಾಗೂ ರಾಜೀವ್​ ನಟಿಸುತ್ತಿದ್ದಾರೆ. ಇಬ್ಬರೂ ಒಂದೇ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಂದಹಾಗೆ, ಕಾಲೇಜಿನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇಬ್ಬರೂ ಗೆಳೆಯರಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ರಾಜೀವ್​ ಹಾಗೂ ರಘುಗೆ ಅಷ್ಟಾಗಿ ಗೆಳೆತನ ಬೆಳೆದಿರಲಿಲ್ಲ. ಆದರೆ, ಬಿಗ್​ ಬಾಸ್​ನಲ್ಲಿ ಹಲವು ವಾರಗಳ ಕಾಲ ಒಟ್ಟಿಗೆ ಕಳೆದ ನಂತರದಲ್ಲಿ ಇಬ್ಬರೂ ಉತ್ತಮ ಗೆಳೆಯರಾದರು. ಈಗ ಇಬ್ಬರೂ ತೆರೆಮೇಲೆಯೂ ಫ್ರೆಂಡ್ಸ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಆಗಸ್ಟ್ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಈ ವೇಳೆ 8ನೇ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದ ಎಲ್ಲಾ ಸ್ಪರ್ಧಿಗಳು ಮತ್ತೆ ವೇದಿಕೆ ಏರಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

Published On - 6:08 pm, Sun, 25 July 21

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?