AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್’ ಶೋಗೆ ಕಾಲಿಟ್ಟ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್

ರಾಜ್ ಬಿ ಶೆಟ್ಟಿ ಅವರಿಗೆ ಮದುವೆ ಆಗಿಲ್ಲ. ‘ನಾನು ಸಿಂಗಲ್ ಆಗಿಯೇ ಆರಾಮಾಗಿದ್ದೇನೆ’ ಎಂದು ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಅವರು ‘ಭರ್ಜರಿ ಬ್ಯಾಚುಲರ್ಸ್​’ ವೇದಿಕೆ ಏರಿದ್ದಾರೆ.

ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್’ ಶೋಗೆ ಕಾಲಿಟ್ಟ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್
ರಾಜ್ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 03, 2023 | 11:00 AM

Share

ಜೀ ಕನ್ನಡ ವಾಹಿನಿಯಲ್ಲಿ ‘ಭರ್ಜರಿ ಬ್ಯಾಚುಲರ್ಸ್’ (Bharjari Bachelors) ರಿಯಾಲಿಟಿ ಶೋ ಆರಂಭ ಆಗಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಶೋ ಎಲ್ಲರ ಗಮನ ಸೆಳೆಯುತ್ತಿದೆ. ರಚಿತಾ ರಾಮ್, ರವಿಚಂದ್ರನ್ ಮೊದಲಾದವರು ಈ ಶೋನ ಜಡ್ಜ್​ ಸ್ಥಾನದಲ್ಲಿ ಕುಳಿತಿದ್ದಾರೆ. ಈ ವಾರದ ‘ಭರ್ಜರಿ ಬ್ಯಾಚುಲರ್ಸ್​’ಗೆ ಮೋಸ್ಟ್​ ಎಲಿಜಬೆಲ್ ಬ್ಯಾಚುಲರ್ ರಾಜ್ ಬಿ ಶೆಟ್ಟಿ ಅವರು ಆಗಮಿಸಿದ್ದಾರೆ. ಇದರ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಕಾರಣದಿಂದಲೂ ಈ ವಾರದ ಎಪಿಸೋಡ್ ಕುತೂಹಲ ಮೂಡಿಸಿದೆ. ಪೂರ್ತಿ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ರಾಜ್ ಬಿ ಶೆಟ್ಟಿ ಅವರಿಗೆ ಮದುವೆ ಆಗಿಲ್ಲ. ‘ನಾನು ಸಿಂಗಲ್ ಆಗಿಯೇ ಆರಾಮಾಗಿದ್ದೇನೆ’ ಎಂದು ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಸದ್ಯಕ್ಕಂತೂ ಮದುವೆ ಆಲೋಚನೆ ಇಲ್ಲ ಎಂಬುದನ್ನು ಹಲವು ಬಾರಿ ಹೇಳಿದ್ದರು. ಸದ್ಯ ಅವರು ನಿರ್ದೇಶಿಸಿ, ನಟಿಸಿರುವ ‘ಟೋಬಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರಕ್ಕೆ ಅವರು ‘ಭರ್ಜರಿ ಬ್ಯಾಚುಲರ್ಸ್​’ ವೇದಿಕೆ ಏರಿದ್ದಾರೆ.

‘ಹೇಗಿದೆ ಬ್ಯಾಚುಲರ್ಸ್ ಜೀವನ’ ಎಂದು ರಾಜ್ ಬಿ ಶೆಟ್ಟಿಗೆ ಅಕುಲ್ ಬಾಲಾಜಿ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ರಾಜ್​ ಶೆಟ್ಟಿ, ‘ಬ್ಯಾಚುಲರ್ಸ್ ಜೀವನವೇ ಚೆನ್ನಾಗಿದೆ ಅನ್ನಿಸಿತು. ಅದಕ್ಕೆ ಮದುವೆ ಆಗಲೇ ಇಲ್ಲ’ ಎಂದಿದ್ದಾರೆ. ಈ ಪ್ರೋಮೋಗೆ ‘ಮಾಸ್ ಆ್ಯಂಡ್ ಕ್ಲಾಸ್ ಬ್ಯಾಚುಲರ‍್ಸ್ ನಡುವೆ ಭರ್ಜರಿ ಫೈಟ್, ಎಂಟರ್ಟೈನ್ಮೆಂಟ್ ಫುಲ್ ಬ್ರೈಟ್. ಭರ್ಜರಿ ಬ್ಯಾಚುಲರ‍್ಸ್ ‘ಮಾಸ್ v/s ಕ್ಲಾಸ್’ ಶನಿ-ಭಾನು ರಾತ್ರಿ 9ಕ್ಕೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ರಾಜ್ ಬಿ ಶೆಟ್ಟಿ ಅವರು ಸಖತ್ ಫನ್ನಿ ಆಗಿರುತ್ತಾರೆ. ಯಾವುದೇ ವೇದಿಕೆ ಏರಿದರೂ ಅವರು ನಗಿಸುತ್ತಾರೆ. ಹೀಗಾಗಿ, ‘ಭರ್ಜರಿ ಬ್ಯಾಚುಲರ್ಸ್’ ವೇದಿಕೆ ಮೇಲೆ ಸಾಕಷ್ಟು ಮನರಂಜನೆ ನಿರೀಕ್ಷಿಸಬಹುದು. ಅವರ ನಿರ್ದೇಶನದ ‘ಟೋಬಿ’ ಸಿನಿಮಾ ಪೋಸ್ಟರ್ ಮೂಲಕವೇ ಗಮನ ಸೆಳೆಯುತ್ತಿದೆ. ಈ ಚಿತ್ರದ ಟ್ರೇಲರ್ ಆಗಸ್ಟ್ 4ರ ಸಂಜೆ ರಿಲೀಸ್ ಆಗಲಿದೆ. ಈ ಸಿನಿಮಾ ಆಗಸ್ಟ್​ 25ರಂದು ರಿಲೀಸ್ ಆಗಲಿದೆ. ‘ಟೋಬಿ’ ರಿವೇಂಜ್ ಕಥೆ ಎನ್ನಲಾಗಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಜೀ ಕನ್ನಡದಲ್ಲಿ ಹೊಸ ಶೋ ‘ಭರ್ಜರಿ ಬ್ಯಾಚುಲರ್ಸ್’; ಮದುವೆ ಆಗದ ಹುಡುಗರೇ ಇಲ್ಲಿ ಕೇಳಿ..

‘ಒಂದು ಮೊಟ್ಟೆಯ ಕಥೆ’ ಮೂಲಕ ಆರಂಭವಾದ ರಾಜ್ ಬಿ. ಶೆಟ್ಟಿ ಪಯಣ ಇಲ್ಲಿಯವರೆಗೆ ಬಂದು ನಿಂತಿದೆ. ‘ಟೋಬಿ’ ಚಿತ್ರ ಯಶಸ್ಸು ಕಾಣಲಿ ಎಂದು ಎಲ್ಲರೂ ಶುಭಕೋರುತ್ತಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ರಾಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ರಮ್ಯಾ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಬಹಳ ಹಿಂದೆಯೇ ಮುಗಿದಿದೆ. ಆದರೆ, ಈ ಸಿನಿಮಾ ರಿಲೀಸ್ ಬಗ್ಗೆ ಚಿತ್ರತಂಡದವರ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!