ಮುಗಿಯದ ಸಂಕಷ್ಟ; ಜೈಲಿನಿಂದ ಹೊರ ಬರೋಕೆ ಹೊಸ ಮಾರ್ಗ ಅನ್ವೇಷಿಸಿದ ರಾಜ್​ ಕುಂದ್ರಾ

| Updated By: ರಾಜೇಶ್ ದುಗ್ಗುಮನೆ

Updated on: Aug 14, 2021 | 6:37 PM

ಮಂಗಳವಾರ (ಆಗಸ್ಟ್​ 10) ರಾಜ್​ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್​ ಕೋರ್ಟ್​ ನಡೆಸಿತ್ತು. ಸದ್ಯ, ಈ ವಿಚಾರಣೆಯನ್ನು ಕೋರ್ಟ್​ ಆಗಸ್ಟ್​ 20ರವರೆಗೆ ಮುಂದೂಡಿದೆ.

ಮುಗಿಯದ ಸಂಕಷ್ಟ; ಜೈಲಿನಿಂದ ಹೊರ ಬರೋಕೆ ಹೊಸ ಮಾರ್ಗ ಅನ್ವೇಷಿಸಿದ ರಾಜ್​ ಕುಂದ್ರಾ
ರಾಜ್​ ಕುಂದ್ರಾ
Follow us on

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಬಂಧನಕ್ಕೆ ಒಳಗಾಗಿ ತಿಂಗಳಾಗುತ್ತಾ ಬಂದಿದೆ. ಅವರ ವಿರುದ್ಧ ಆರೋಪ ತುಂಬಾನೇ ಗಂಭೀರವಾಗಿದೆ. ಜತೆಗೆ ಅವರಿಗೆ ಜಾಮೀನು ಸಿಕ್ಕರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಕೂಡ ಇದೆ. ಹೀಗಾಗಿ ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಈ ಮಧ್ಯೆ, ಜೈಲಿನಿಂದ ಹೊರಬರೋಕೆ ರಾಜ್ ಕುಂದ್ರಾ ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಮಂಗಳವಾರ (ಆಗಸ್ಟ್ 10) ರಾಜ್​ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್​ ಕೋರ್ಟ್​ ನಡೆಸಿತ್ತು. ಸದ್ಯ, ಈ ವಿಚಾರಣೆಯನ್ನು ಕೋರ್ಟ್​ ಆಗಸ್ಟ್​ 20ರವರೆಗೆ ಮುಂದೂಡಿದೆ. ರಾಜ್​ ಕುಂದ್ರಾಗೆ ಜಾಮೀನು ನೀಡಿದರೆ ಆಗುವ ತೊಂದರೆಗಳೇನು? ಅವರಿಗೆ ಏಕೆ ಜಾಮೀನು ನೀಡಬಾರದು ಎನ್ನುವ ಬಗ್ಗೆ ಮುಂಬೈ ಕ್ರೈಮ್​ ಬ್ರ್ಯಾಂಚ್​ನವರು 19 ಕಾರಣಗಳನ್ನು ನೀಡಿದ್ದರು. ಈ ಕಾರಣಕ್ಕೆ ಸೆಷನ್​ ಕೋರ್ಟ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿ ರಾಜ್​ ಕುಂದ್ರಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಮೂಲಕ ಅವರು ಹೊಸ ಮಾರ್ಗ ಪ್ರಯತ್ನಿಸಿದ್ದಾರೆ.

ರಾಜ್​ ಕುಂದ್ರಾಗೆ ಜಾಮೀನು ನೀಡಬಾರದು. ಒಂದೊಮ್ಮೆ ಅವರಿಗೆ ಜಾಮೀನು ಸಿಕ್ಕರೆ ಸಾಕ್ಷ್ಯ ನಾಶಮಾಡಬಹುದು. ಅವರಿಗೆ ಬ್ರಿಟನ್​ ಪೌರತ್ವ ಇದೆ. ಹೀಗಾಗಿ, ಅವರು ನೇರವಾಗಿ ಬ್ರಿಟನ್​ಗೆ ತೆರಳಬಹುದು ಎಂದು ಪೊಲೀಸರು ಅನುಮಾನ ಹೊರ ಹಾಕಿದ್ದಾರೆ. ಹೀಗಾಗಿ, ರಾಜ್​ ಕುಂದ್ರಾಗೆ ಜಾಮೀನು ಸಿಗೋಕೆ ಸಾಧ್ಯವಾಗುತ್ತಿಲ್ಲ.

ಪಾರ್ನ್​ ಸಿನಿಮಾ ನಿರ್ಮಾಣ ಮಾಡಿ ಅದನ್ನು ಹಂಚುವ ಕೆಲಸವನ್ನು ರಾಜ್​ ಕುಂದ್ರಾ ಮಾಡುತ್ತಿದ್ದರು. ಆದರೆ, ತಾವು ನಿರ್ಮಾಣ ಮಾಡುತ್ತಿದ್ದುದು ನೀಲಿ ಚಿತ್ರ ಅಲ್ಲ ಎಂದಿದ್ದಾರೆ ರಾಜ್​ ಕುಂದ್ರಾ. ಈಗ ಅವರು ಜೈಲಿನಿಂದ ಹೊರ ಬರೋಕೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇನ್ನು, ರಾಜ್​ ಕುಂದ್ರಾ ಬಂಧನದ ನಂತರ ಶಿಲ್ಪಾ ಶೆಟ್ಟಿ ಜನಪ್ರಿಯತೆಗೆ ಪೆಟ್ಟು ಬಿದ್ದಿದೆ. ಅನೇಕ ಬ್ರ್ಯಾಂಡ್​ಗಳು ಅವರ ಜತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ‘ಒಮ್ಮೆ ಅವನು ನನ್ನ ಜತೆ ಲಿಮಿಟ್​ ಕ್ರಾಸ್​ ಮಾಡಿದ್ದ’; ರಹಸ್ಯ ತೆರೆದಿಟ್ಟ ರಾಜ್​ ಕುಂದ್ರಾ ನಾದಿನಿ ಶಮಿತಾ ಶೆಟ್ಟಿ

500 ಕೋಟಿ ಬಜೆಟ್​ನಲ್ಲಿ ಕನ್ನಡ​ ಸಿನಿಮಾ; 640 ಎಕರೆಯಲ್ಲಿ ಸಿದ್ಧಗೊಳ್ಳಲಿದೆ ಅದ್ದೂರಿ ಸೆಟ್​