AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

Raja Rani Winner: ಭಾನುವಾರ ನಡೆದ ಫಿನಾಲೆ ತುಂಬಾನೇ ಅದ್ದೂರಿಯಾಗಿತ್ತು. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ವಿನ್ನರ್​ ಮಂಜು ಪಾವಗಡ, ಸ್ಪರ್ಧಿಗಳಾದ ಶುಭಾ ಪೂಂಜಾ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ 'ಗೊಂಬೆ' ದಂಪತಿ
ನೇಹಾ-ಚಂದನ್​
TV9 Web
| Edited By: |

Updated on:Nov 22, 2021 | 2:20 PM

Share

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಮೂಲಕ ರಾಜಾ-ರಾಣಿ ಕಿರೀಟ ತೊಟ್ಟಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ಸಾಕಷ್ಟು ಸೆಲೆಬ್ರಿಟಿಗಳು ಈ ಶೋಗೆ ಸ್ಪರ್ಧಿಗಳಾಗಿ ಆಗಮಿಸಿದ್ದರು. ಹೆಸರೇ ಸೂಚಿಸುವಂತೆ ಈ ಶೋಗೆ ಒಬ್ಬರೇ ಬರುವಂತಿರಲಿಲ್ಲ. ಜೋಡಿ ಸಮೇತವೇ ಬರಬೇಕಿತ್ತು. ಅಂತಿಮವಾಗಿ ಗೊಂಬೆ ದಂಪತಿ ಗೆದ್ದು ಬೀಗಿದೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಈ ಧಾರಾವಾಹಿ ಸಾವಿರಾರು ಕಂತುಗಳನ್ನು  ಪ್ರಸಾರ ಮಾಡಿತ್ತು. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ.  ಈಗ ಈ ದಂಪತಿಗೆ ರಾಜಾ ರಾಣಿ ಕಿರೀಟ ಗೆದ್ದಿದೆ

‘ರಾಜಾ-ರಾಣಿ’ ಶೋ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಮನೆ ಮಂದಿ ಎಲ್ಲರೂ ಈ ಶೋನ ಇಷ್ಟಪಟ್ಟಿದ್ದರು. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಅನೇಕರಲ್ಲಿ ಇರುತ್ತದೆ. ‘ರಾಜಾ-ರಾಣಿ’ ವೇದಿಕೆ ಮೇಲೆ ಕಿರುತೆರೆ ಸೆಲೆಬ್ರಿಟಿಗಳ ಸಾಕಷ್ಟು ಗುಟ್ಟುಗಳು ರಟ್ಟಾಗಿತ್ತು. ಇದು ಪ್ರೇಕ್ಷಕರಿಗೆ ದೊಡ್ಡ ಮಟ್ಟದಲ್ಲಿ ಮನರಂಜನೆ ನೀಡಿತ್ತು.

ಭಾನುವಾರ ನಡೆದ ಫಿನಾಲೆ ತುಂಬಾನೇ ಅದ್ದೂರಿಯಾಗಿತ್ತು. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ವಿನ್ನರ್​ ಮಂಜು ಪಾವಗಡ, ಸ್ಪರ್ಧಿಗಳಾದ ಶುಭಾ ಪೂಂಜಾ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಒಟ್ಟಿನಲ್ಲಿ ಸಂಪೂರ್ಣ ಕಾರ್ಯಕ್ರಮ ಭರ್ಜರಿಯಾಗಿ ಮನರಂಜನೆ ನೀಡಿತ್ತು.

ಇದನ್ನೂ ಓದಿ: ‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

Published On - 1:32 pm, Mon, 22 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್