AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

Raja Rani Winner: ಭಾನುವಾರ ನಡೆದ ಫಿನಾಲೆ ತುಂಬಾನೇ ಅದ್ದೂರಿಯಾಗಿತ್ತು. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ವಿನ್ನರ್​ ಮಂಜು ಪಾವಗಡ, ಸ್ಪರ್ಧಿಗಳಾದ ಶುಭಾ ಪೂಂಜಾ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ 'ಗೊಂಬೆ' ದಂಪತಿ
ನೇಹಾ-ಚಂದನ್​
TV9 Web
| Edited By: |

Updated on:Nov 22, 2021 | 2:20 PM

Share

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಮೂಲಕ ರಾಜಾ-ರಾಣಿ ಕಿರೀಟ ತೊಟ್ಟಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ಸಾಕಷ್ಟು ಸೆಲೆಬ್ರಿಟಿಗಳು ಈ ಶೋಗೆ ಸ್ಪರ್ಧಿಗಳಾಗಿ ಆಗಮಿಸಿದ್ದರು. ಹೆಸರೇ ಸೂಚಿಸುವಂತೆ ಈ ಶೋಗೆ ಒಬ್ಬರೇ ಬರುವಂತಿರಲಿಲ್ಲ. ಜೋಡಿ ಸಮೇತವೇ ಬರಬೇಕಿತ್ತು. ಅಂತಿಮವಾಗಿ ಗೊಂಬೆ ದಂಪತಿ ಗೆದ್ದು ಬೀಗಿದೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಈ ಧಾರಾವಾಹಿ ಸಾವಿರಾರು ಕಂತುಗಳನ್ನು  ಪ್ರಸಾರ ಮಾಡಿತ್ತು. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ.  ಈಗ ಈ ದಂಪತಿಗೆ ರಾಜಾ ರಾಣಿ ಕಿರೀಟ ಗೆದ್ದಿದೆ

‘ರಾಜಾ-ರಾಣಿ’ ಶೋ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಮನೆ ಮಂದಿ ಎಲ್ಲರೂ ಈ ಶೋನ ಇಷ್ಟಪಟ್ಟಿದ್ದರು. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಅನೇಕರಲ್ಲಿ ಇರುತ್ತದೆ. ‘ರಾಜಾ-ರಾಣಿ’ ವೇದಿಕೆ ಮೇಲೆ ಕಿರುತೆರೆ ಸೆಲೆಬ್ರಿಟಿಗಳ ಸಾಕಷ್ಟು ಗುಟ್ಟುಗಳು ರಟ್ಟಾಗಿತ್ತು. ಇದು ಪ್ರೇಕ್ಷಕರಿಗೆ ದೊಡ್ಡ ಮಟ್ಟದಲ್ಲಿ ಮನರಂಜನೆ ನೀಡಿತ್ತು.

ಭಾನುವಾರ ನಡೆದ ಫಿನಾಲೆ ತುಂಬಾನೇ ಅದ್ದೂರಿಯಾಗಿತ್ತು. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ವಿನ್ನರ್​ ಮಂಜು ಪಾವಗಡ, ಸ್ಪರ್ಧಿಗಳಾದ ಶುಭಾ ಪೂಂಜಾ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಒಟ್ಟಿನಲ್ಲಿ ಸಂಪೂರ್ಣ ಕಾರ್ಯಕ್ರಮ ಭರ್ಜರಿಯಾಗಿ ಮನರಂಜನೆ ನೀಡಿತ್ತು.

ಇದನ್ನೂ ಓದಿ: ‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

Published On - 1:32 pm, Mon, 22 November 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ